AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ

ಕಳ್ಳರಿಂದ ರಿಕವರಿ ಮಾಡಿದ್ದ ಸುಮಾರು 2 ಕೆ.ಜಿ. ಚಿನ್ನವನ್ನ ವಾರಸುದಾರರಿಗೆ ಹಿಂದಿರುಗಿಸಿಲ್ಲ ಎಂದು ಆರೋಪಿಸಿ ಪೊಲೀಸ್​ ಇನ್ಸ್​ಪೆಕ್ಟರ್​ ವಿರುದ್ಧವೇ ಬೆಂಗಳೂರಲ್ಲಿ ದೂರು ದಾಖಲಾಗಿದೆ. 200 ಗ್ರಾಂಗಳಷ್ಟು ಚಿನ್ನವನ್ನು ಮಾತ್ರ ಸರ್ಕಾರಕ್ಕೆ ಮತ್ತು ಬಂಗಾರ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್​ಪೆಕ್ಟರ್​ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ
ಪೊಲೀಸರ ಮೇಲೆಯೇ ಆರೋಪ
ರಾಮು, ಆನೇಕಲ್​
| Edited By: |

Updated on: Oct 07, 2025 | 1:02 PM

Share

ಬೆಂಗಳೂರು, ಅಕ್ಟೋಬರ್​ 07: ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ (Gold) ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ. ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್​ ಆಧರಿಸಿ ಇನ್ಸ್​ಪೆಕ್ಟರ್​ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.

10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್​ ನ ಸಂಜೀವ್ ಕುಮಾರ್ ಮಹಾಜನ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್​ಪೆಕ್ಟರ್​ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಪತ್ನಿಯಿಂದ ಕಿರುಕುಳ ಆರೋಪ: ಫೇಸ್​ಬುಕ್​ ಲೈವ್​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪತಿ

ಆನ್​ಲೈನ್​ ವಂಚನೆ ಜಾಲ ಭೇದಿಸಿದ ಖಾಕಿ

ಆನ್​ಲೈನ್​ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಬೆಂಗಳೂರಿನ ಕೆಂಗೇರಿ ಠಾಣೆ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಹೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್​, ವಾಟ್ಸಾಪ್​, ಇನ್​​ಸ್ಟಾಗ್ರಾಂ ಮೂಲಕ ಗ್ಯಾಂಗ್​ ಪ್ರಚಾರ ಮಾಡುತ್ತಿತ್ತು. ಹೆಚ್ಚು ಲಾಭ ನೀಡೋದಾಗಿ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಆಧರಿಸಿ ನಿನ್ನೆ 7 ಕಡೆ ದಾಳಿ ನಡೆಸಿರುವ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ. ಬಂಧಿತರಿಂದ 19 ಲ್ಯಾಪ್​ಟಾಪ್​ ಗಳು​​​, 40 ಮೊಬೈಲ್‌, 11 ಪೆನ್ ಡ್ರೈವ್,  42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್, 5 ಸಿಪಿಯು, 13 ಸೀಲುಗಳು, 10 ಮೆಮೊರಿ ಕಾರ್ಡ್, ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷಿನ್, 6 ಕೋಟಿ ಬೆಲೆಬಾಳುವ ಸ್ಥಿರಾಸ್ತಿ ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ
ದರ್ಶನ್ ಕೇಸ್: ಪೊಲೀಸರ ತನಿಖೆ ಬಗ್ಗೆ ಅನುಮಾನ; ಗೃಹ ಸಚಿವರ ಸ್ಪಷನೆ ಇಲ್ಲಿದೆ
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ 5 ಸಾವಿರ ರೂ. ದಂಡ ಫಿಕ್ಸ್!
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ದೇವರು ಬಂದಂತೆ ನಟಿಸಿ ದಲಿತ ನವದಂಪತಿಯನ್ನು ದೇಗುಲದಿಂದ ಹೊರಗಟ್ಟಿದ ಅರ್ಚಕ
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಮುನಿರತ್ನಗೆ ಮಹತ್ವದ ಭರವಸೆ ನೀಡಿದ ಡಿಕೆ ಶಿವಕುಮಾರ್
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಈ ಊರಲ್ಲಿ ಚಾಡಿ ಹೇಳಿದ್ರೆ, ವದಂತಿ ಹಬ್ಬಿಸಿದ್ರೆ ದಂಡ: ಈ ರೂಲ್ಸ್ ಏಕೆ?
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ