AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ

ಕಳ್ಳರಿಂದ ರಿಕವರಿ ಮಾಡಿದ್ದ ಸುಮಾರು 2 ಕೆ.ಜಿ. ಚಿನ್ನವನ್ನ ವಾರಸುದಾರರಿಗೆ ಹಿಂದಿರುಗಿಸಿಲ್ಲ ಎಂದು ಆರೋಪಿಸಿ ಪೊಲೀಸ್​ ಇನ್ಸ್​ಪೆಕ್ಟರ್​ ವಿರುದ್ಧವೇ ಬೆಂಗಳೂರಲ್ಲಿ ದೂರು ದಾಖಲಾಗಿದೆ. 200 ಗ್ರಾಂಗಳಷ್ಟು ಚಿನ್ನವನ್ನು ಮಾತ್ರ ಸರ್ಕಾರಕ್ಕೆ ಮತ್ತು ಬಂಗಾರ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್​ಪೆಕ್ಟರ್​ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.

ಬೆಂಗಳೂರು: ಸೂರ್ಯನಗರ ಠಾಣೆ ಪೊಲೀಸರ ಮೇಲೆಯೇ ಚಿನ್ನ ಎಗರಿಸಿದ ಆರೋಪ
ಪೊಲೀಸರ ಮೇಲೆಯೇ ಆರೋಪ
ರಾಮು, ಆನೇಕಲ್​
| Edited By: |

Updated on: Oct 07, 2025 | 1:02 PM

Share

ಬೆಂಗಳೂರು, ಅಕ್ಟೋಬರ್​ 07: ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ (Gold) ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ. ಕೇಂದ್ರ ವಲಯ ಐಜಿ ಲಾಬೂರಾಮ್​ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್​ ಆಧರಿಸಿ ಇನ್ಸ್​ಪೆಕ್ಟರ್​ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.

10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್​ ನ ಸಂಜೀವ್ ಕುಮಾರ್ ಮಹಾಜನ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್​ಪೆಕ್ಟರ್​ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಪತ್ನಿಯಿಂದ ಕಿರುಕುಳ ಆರೋಪ: ಫೇಸ್​ಬುಕ್​ ಲೈವ್​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪತಿ

ಆನ್​ಲೈನ್​ ವಂಚನೆ ಜಾಲ ಭೇದಿಸಿದ ಖಾಕಿ

ಆನ್​ಲೈನ್​ನಲ್ಲಿ ಹೂಡಿಕೆ ಮಾಡಿಸಿಕೊಂಡು ವಂಚಿಸುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಬೆಂಗಳೂರಿನ ಕೆಂಗೇರಿ ಠಾಣೆ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಹೂಡಿಕೆ ಮಾಡುವಂತೆ ಸಾಮಾಜಿಕ ಜಾಲತಾಣಗಳಾದ ಫೇಸ್​ಬುಕ್​, ವಾಟ್ಸಾಪ್​, ಇನ್​​ಸ್ಟಾಗ್ರಾಂ ಮೂಲಕ ಗ್ಯಾಂಗ್​ ಪ್ರಚಾರ ಮಾಡುತ್ತಿತ್ತು. ಹೆಚ್ಚು ಲಾಭ ನೀಡೋದಾಗಿ ಆಮಿಷವೊಡ್ಡಿ ಕೋಟ್ಯಂತರ ರೂಪಾಯಿ ಹಣ ಸಂಗ್ರಹಿಸಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಆಧರಿಸಿ ನಿನ್ನೆ 7 ಕಡೆ ದಾಳಿ ನಡೆಸಿರುವ ಪೊಲೀಸರು ಆರೋಪಿಗಳ ಹೆಡೆಮುರಿಕಟ್ಟಿದ್ದಾರೆ. ಬಂಧಿತರಿಂದ 19 ಲ್ಯಾಪ್​ಟಾಪ್​ ಗಳು​​​, 40 ಮೊಬೈಲ್‌, 11 ಪೆನ್ ಡ್ರೈವ್,  42 ಸಿಮ್ ಕಾರ್ಡ್, 4 ಐಪ್ಯಾಡ್, 2 ಹಾರ್ಡ್ ಡಿಸ್ಕ್, 5 ಸಿಪಿಯು, 13 ಸೀಲುಗಳು, 10 ಮೆಮೊರಿ ಕಾರ್ಡ್, ವಿದೇಶಿ ಕರೆನ್ಸಿ, ಕರೆನ್ಸಿ ಕೌಟಿಂಗ್ ಮಷಿನ್, 6 ಕೋಟಿ ಬೆಲೆಬಾಳುವ ಸ್ಥಿರಾಸ್ತಿ ದಾಖಲೆಗಳನ್ನ ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ