AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಿಕ್ತು 4 ಕೋಟಿ ರೂ. ಮೌಲ್ಯದ ಚಿನ್ನ, ಇಂದೋರ್​ನಿಂದ ಬೆಂಗಳೂರಿಗೆ ಬಂದಿದ್ಹೇಗೆ ಗೊತ್ತಾ?

ದೇಶಿ ಪ್ರಯಾಣಿಕರನ್ನ ಚೆಕ್ ಮಾಡಲ್ಲ. ಸುಲಭವಾಗಿ ಚಿನ್ನ ಸಾಗಿಸಬಹುದು ಎಂದು ಪ್ಲಾನ್ ಮಾಡಿಕೊಂಡು ಇಂದೋರ್​ನಿಂದ ಬಂದಿದ್ದ ವ್ಯಕ್ತಿ ಬೆಂಗಳೂರಿನಲ್ಲಿ ತಗ್ಲಾಕೊಂಡಿದ್ದು, ಬ್ಯಾಗ್​ನಲ್ಲಿ ಬರೋಬ್ಬರಿ 4 ಕೋಟಿ ರೂ. ಮೌಲ್ಯದ ಚಿನ್ನದ ಬಿಸ್ಕಟ್​ಗಳು ಪತ್ತೆಯಾಗಿವೆ.

ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಸಿಕ್ತು 4 ಕೋಟಿ ರೂ. ಮೌಲ್ಯದ ಚಿನ್ನ, ಇಂದೋರ್​ನಿಂದ ಬೆಂಗಳೂರಿಗೆ ಬಂದಿದ್ಹೇಗೆ ಗೊತ್ತಾ?
ನವೀನ್ ಕುಮಾರ್ ಟಿ
| Updated By: ರಮೇಶ್ ಬಿ. ಜವಳಗೇರಾ|

Updated on: Jul 18, 2023 | 2:10 PM

Share

ದೇವನಹಳ್ಳಿ (ಬೆಂಗಳೂರು), (ಜುಲೈ 18): ಅಕ್ರಮವಾಗಿ ಚಿನ್ನ (Gold)  ಸಾಗಿಸುತ್ತಿದ್ದ ವ್ಯಕ್ತಿಯನ್ನು ಬೆಂಗಳೂರಿನ(Bengaluru) ಕೆಂಪೇಗೌಡ ವಿಮಾನ ನಿಲ್ದಾಣದ(kempegowda airport) ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್​ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸ್ಮಗ್ಲರ್ಸ್ ಮೊದಲೇ ಸೀಟ್ ಕೆಳಗಡೆ ಚಿನ್ನವನ್ನಿಟ್ಟು ಬಂಧಿತ ಆರೋಪಿಗೆ ತಿಳಿಸಿದ್ದರು .ಹೀಗಾಗಿ ಬಂಧಿತ ಆರೋಪಿ ಅದೇ ಸೀಟ್ ಬುಕ್ ಮಾಡಿಕೊಂಡು ಬೆಂಗಳೂರು ಬರುತ್ತಿದ್ದಂತೆಯೇ ಆರೋಪಿ, ಸೀಟ್​ ಕೆಳಗೆ ಇಟ್ಟಿದ್ದ ಚಿನ್ನವನ್ನು ಬ್ಯಾಗ್​ನಲ್ಲಿ ಹಾಕಿಕೊಂಡು ವಿಮಾನ ಇಳಿದು ಬಂದಿದ್ದಾನೆ. ಆದ್ರೆ, ಏರ್ಪೋರ್ಟ್​ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಕೋಟಿ ಕೋಟಿ ಮೌಲ್ಯದ ಚಿನ್ನ ಪತ್ತೆಯಾಗಿದೆ.

ದೇಶಿಯ ಪ್ರಯಾಣಿಕರನ್ನ ಚೆಕ್ ಮಾಡಲ್ಲ ಸುಲಭವಾಗಿ ಚಿನ್ನ ಸಾಗಿಸಬಹುದು ಎಂದು ಪ್ಲಾನ್ ಮಾಡಿದ್ದ. ಆದ್ರೆ, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದ ವೇಳೆ ಅಧಿಕಾರಿಗಳ ಕೈಗೆ ತಗ್ಲಾಕೊಂಡಿದ್ದಾನೆ. ಇದೀಗ ಕಸ್ಟಮ್ಸ್ ಅಧಿಕಾರಿಗಳು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದು, ಪ್ಲೈಟ್ ನ ಸೀಟ್ ಕೆಳಗಡೆ ಚಿನ್ನವಿಟ್ಟ ಬಗ್ಗೆ ತನಿಖೆ ನಡೆಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ