AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂ ಬೆಳೆಗಾರರಿಗೆ ನೆರವಾದ ತೋಟಗಾರಿಕಾ ಇಲಾಖೆ, ಈವರೆಗೆ 80 ರೈತರಿಗೆ ಅನುದಾನ

ನೆಲಮಂಗಲ: ಕೊರೊನಾ ವೈರಸ್​ನಿಂದ ದೇಶದ ಆರ್ಥಿಕತೆ ಹಳ್ಳ ಹಿಡಿದಿದೆ. ವ್ಯಾಪಾರಿಗಳು ಉದ್ಯೋಗಿಗಳು ಕೂಲಿ ಕಾರ್ಮಿಕರು ರೈತರು ಎಲ್ಲರೂ ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಮಯದಲ್ಲಿ ಹೂ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೋಟಗಾರಿಕಾ ಇಲಾಖೆ ಅನುದಾನ ಬಿಡುಗಡೆ ಮಾಡಿದೆ. ಲಾಕ್​ಡೌನ್​ನಿಂದ ದೇವಾಲಯಗಳು, ಗುಡಿ-ಗೋಪುರಗಳು, ಜಾತ್ರೆ-ಬಜಾರ್​ಗಳು, ಮದುವೆ-ಮುಂಜಿಗಳಂತ ಶುಭಕಾರ್ಯಕ್ಕೆ ಬ್ರೇಕ್ ಬಿದ್ದಿದ್ದು, ಶುಭ ಸಮಾರಂಭಗಳ ಮೆರಗನ್ನು ಹೆಚ್ಚಿಸುವ ಬಗೆಬಗೆಯ ಅಲಂಕಾರಿಕ ಪುಷ್ಪಗಳು ಸೇರಿದಂತೆ ಪೂಜೆಗೆ ಬಳಸುವ ಹೂಗಳನ್ನು ಕೊಳ್ಳುವವರಿಲ್ಲದೆ ಗಿಡದಲ್ಲೆ ಒಣಗಿ […]

ಹೂ ಬೆಳೆಗಾರರಿಗೆ ನೆರವಾದ ತೋಟಗಾರಿಕಾ ಇಲಾಖೆ, ಈವರೆಗೆ 80 ರೈತರಿಗೆ ಅನುದಾನ
ಆಯೇಷಾ ಬಾನು
| Edited By: |

Updated on:Jun 20, 2020 | 2:53 PM

Share

ನೆಲಮಂಗಲ: ಕೊರೊನಾ ವೈರಸ್​ನಿಂದ ದೇಶದ ಆರ್ಥಿಕತೆ ಹಳ್ಳ ಹಿಡಿದಿದೆ. ವ್ಯಾಪಾರಿಗಳು ಉದ್ಯೋಗಿಗಳು ಕೂಲಿ ಕಾರ್ಮಿಕರು ರೈತರು ಎಲ್ಲರೂ ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಮಯದಲ್ಲಿ ಹೂ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೋಟಗಾರಿಕಾ ಇಲಾಖೆ ಅನುದಾನ ಬಿಡುಗಡೆ ಮಾಡಿದೆ.

ಲಾಕ್​ಡೌನ್​ನಿಂದ ದೇವಾಲಯಗಳು, ಗುಡಿ-ಗೋಪುರಗಳು, ಜಾತ್ರೆ-ಬಜಾರ್​ಗಳು, ಮದುವೆ-ಮುಂಜಿಗಳಂತ ಶುಭಕಾರ್ಯಕ್ಕೆ ಬ್ರೇಕ್ ಬಿದ್ದಿದ್ದು, ಶುಭ ಸಮಾರಂಭಗಳ ಮೆರಗನ್ನು ಹೆಚ್ಚಿಸುವ ಬಗೆಬಗೆಯ ಅಲಂಕಾರಿಕ ಪುಷ್ಪಗಳು ಸೇರಿದಂತೆ ಪೂಜೆಗೆ ಬಳಸುವ ಹೂಗಳನ್ನು ಕೊಳ್ಳುವವರಿಲ್ಲದೆ ಗಿಡದಲ್ಲೆ ಒಣಗಿ ಉದುರಿಹೋಗುವ ಪರಿಸ್ಥಿತಿ ಉಂಟಾಗಿದೆ.

ಕೊರೊನಾ ಕಾಲದಲ್ಲಿ ಕೈಗೆ ಬಂದಿದ್ದ ಬೆಳೆ ಮಾರಾಟವಾಗದೆ ಬೆಳೆಯನ್ನು ಬೆಳೆಯಲು ಪಡೆದಿದ್ದ ಸಾಲ ತೀರಿಸಲಾಗದೆ ಸಂಕಷ್ಟದಲ್ಲಿದ್ದ ರೈತರಿಗೆ ನೆರವಾಗಲು ತೋಟಗಾರಿಕಾ ಇಲಾಖೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ತೋಟಗಾರಿಕಾ ಇಲಾಖೆಗೆ ಆನ್ಲೈನ್ ಮೂಲಕ 170 ಜನ ರೈತರು ಹಾಗೂ ನೇರವಾಗಿ ಕಚೇರಿಯಲ್ಲಿ 359 ರೈತರು ಸೇರಿದಂತೆ ಒಟ್ಟು 529 ಅರ್ಜಿಗಳು ಬಂದಿದ್ದವು. ಸರ್ಕಾರದಿಂದ ತೋಟಗಾರಿಕೆ ಇಲಾಖೆಗೆ 6 ಲಕ್ಷ 20 ಸಾವಿರ ರೂಗಳ ಅನುದಾನ ಬಂದಿದ್ದು, ಅದರಲ್ಲಿ ಇಲ್ಲಿಯವರೆಗೆ 80 ಜನ ಹೂ ಬೆಳೆಗಾರರಿಗೆ 5 ಲಕ್ಷದ 20 ಸಾವಿರ ಪರಿಹಾರ ಮೊತ್ತವನ್ನು ರೈತರ ಖಾತೆಗೆ ವರ್ಗಾಹಿಸಲಾಗಿದೆ.

Published On - 2:50 pm, Sat, 20 June 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​