AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂ ಬೆಳೆಗಾರರಿಗೆ ನೆರವಾದ ತೋಟಗಾರಿಕಾ ಇಲಾಖೆ, ಈವರೆಗೆ 80 ರೈತರಿಗೆ ಅನುದಾನ

ನೆಲಮಂಗಲ: ಕೊರೊನಾ ವೈರಸ್​ನಿಂದ ದೇಶದ ಆರ್ಥಿಕತೆ ಹಳ್ಳ ಹಿಡಿದಿದೆ. ವ್ಯಾಪಾರಿಗಳು ಉದ್ಯೋಗಿಗಳು ಕೂಲಿ ಕಾರ್ಮಿಕರು ರೈತರು ಎಲ್ಲರೂ ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಮಯದಲ್ಲಿ ಹೂ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೋಟಗಾರಿಕಾ ಇಲಾಖೆ ಅನುದಾನ ಬಿಡುಗಡೆ ಮಾಡಿದೆ. ಲಾಕ್​ಡೌನ್​ನಿಂದ ದೇವಾಲಯಗಳು, ಗುಡಿ-ಗೋಪುರಗಳು, ಜಾತ್ರೆ-ಬಜಾರ್​ಗಳು, ಮದುವೆ-ಮುಂಜಿಗಳಂತ ಶುಭಕಾರ್ಯಕ್ಕೆ ಬ್ರೇಕ್ ಬಿದ್ದಿದ್ದು, ಶುಭ ಸಮಾರಂಭಗಳ ಮೆರಗನ್ನು ಹೆಚ್ಚಿಸುವ ಬಗೆಬಗೆಯ ಅಲಂಕಾರಿಕ ಪುಷ್ಪಗಳು ಸೇರಿದಂತೆ ಪೂಜೆಗೆ ಬಳಸುವ ಹೂಗಳನ್ನು ಕೊಳ್ಳುವವರಿಲ್ಲದೆ ಗಿಡದಲ್ಲೆ ಒಣಗಿ […]

ಹೂ ಬೆಳೆಗಾರರಿಗೆ ನೆರವಾದ ತೋಟಗಾರಿಕಾ ಇಲಾಖೆ, ಈವರೆಗೆ 80 ರೈತರಿಗೆ ಅನುದಾನ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Jun 20, 2020 | 2:53 PM

Share

ನೆಲಮಂಗಲ: ಕೊರೊನಾ ವೈರಸ್​ನಿಂದ ದೇಶದ ಆರ್ಥಿಕತೆ ಹಳ್ಳ ಹಿಡಿದಿದೆ. ವ್ಯಾಪಾರಿಗಳು ಉದ್ಯೋಗಿಗಳು ಕೂಲಿ ಕಾರ್ಮಿಕರು ರೈತರು ಎಲ್ಲರೂ ಸಹ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇಂತಹ ಸಮಯದಲ್ಲಿ ಹೂ ಬೆಳೆಗಾರರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತೋಟಗಾರಿಕಾ ಇಲಾಖೆ ಅನುದಾನ ಬಿಡುಗಡೆ ಮಾಡಿದೆ.

ಲಾಕ್​ಡೌನ್​ನಿಂದ ದೇವಾಲಯಗಳು, ಗುಡಿ-ಗೋಪುರಗಳು, ಜಾತ್ರೆ-ಬಜಾರ್​ಗಳು, ಮದುವೆ-ಮುಂಜಿಗಳಂತ ಶುಭಕಾರ್ಯಕ್ಕೆ ಬ್ರೇಕ್ ಬಿದ್ದಿದ್ದು, ಶುಭ ಸಮಾರಂಭಗಳ ಮೆರಗನ್ನು ಹೆಚ್ಚಿಸುವ ಬಗೆಬಗೆಯ ಅಲಂಕಾರಿಕ ಪುಷ್ಪಗಳು ಸೇರಿದಂತೆ ಪೂಜೆಗೆ ಬಳಸುವ ಹೂಗಳನ್ನು ಕೊಳ್ಳುವವರಿಲ್ಲದೆ ಗಿಡದಲ್ಲೆ ಒಣಗಿ ಉದುರಿಹೋಗುವ ಪರಿಸ್ಥಿತಿ ಉಂಟಾಗಿದೆ.

ಕೊರೊನಾ ಕಾಲದಲ್ಲಿ ಕೈಗೆ ಬಂದಿದ್ದ ಬೆಳೆ ಮಾರಾಟವಾಗದೆ ಬೆಳೆಯನ್ನು ಬೆಳೆಯಲು ಪಡೆದಿದ್ದ ಸಾಲ ತೀರಿಸಲಾಗದೆ ಸಂಕಷ್ಟದಲ್ಲಿದ್ದ ರೈತರಿಗೆ ನೆರವಾಗಲು ತೋಟಗಾರಿಕಾ ಇಲಾಖೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನಲ್ಲಿ ತೋಟಗಾರಿಕಾ ಇಲಾಖೆಗೆ ಆನ್ಲೈನ್ ಮೂಲಕ 170 ಜನ ರೈತರು ಹಾಗೂ ನೇರವಾಗಿ ಕಚೇರಿಯಲ್ಲಿ 359 ರೈತರು ಸೇರಿದಂತೆ ಒಟ್ಟು 529 ಅರ್ಜಿಗಳು ಬಂದಿದ್ದವು. ಸರ್ಕಾರದಿಂದ ತೋಟಗಾರಿಕೆ ಇಲಾಖೆಗೆ 6 ಲಕ್ಷ 20 ಸಾವಿರ ರೂಗಳ ಅನುದಾನ ಬಂದಿದ್ದು, ಅದರಲ್ಲಿ ಇಲ್ಲಿಯವರೆಗೆ 80 ಜನ ಹೂ ಬೆಳೆಗಾರರಿಗೆ 5 ಲಕ್ಷದ 20 ಸಾವಿರ ಪರಿಹಾರ ಮೊತ್ತವನ್ನು ರೈತರ ಖಾತೆಗೆ ವರ್ಗಾಹಿಸಲಾಗಿದೆ.

Published On - 2:50 pm, Sat, 20 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?