AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli: ಕನ್ನಮಂಗಲ ಗ್ರಾ.ಪಂ ಬಿಲ್ ಕಲೆಕ್ಟರ್ ವಿರುದ್ಧ 5 ಕೋಟಿ ರೂ ತೆರಿಗೆ ಹಣ ವಂಚಿಸಿದ ಆರೋಪ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್​ ತೆರಿಗೆ ಹಣ ವಂಚಿಸಿರುವ ಆರೋಪ ಕೇಳಿಬಂದಿದೆ.

Devanahalli: ಕನ್ನಮಂಗಲ ಗ್ರಾ.ಪಂ ಬಿಲ್ ಕಲೆಕ್ಟರ್ ವಿರುದ್ಧ 5 ಕೋಟಿ ರೂ ತೆರಿಗೆ ಹಣ ವಂಚಿಸಿದ ಆರೋಪ
ಬಿಲ್​ ಕಲೆಕ್ಟರ್​ ಮಂಜುನಾಥ್
TV9 Web
| Edited By: ವಿವೇಕ ಬಿರಾದಾರ|

Updated on:Nov 28, 2022 | 6:12 PM

Share

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ (Devanahalli) ತಾಲೂಕಿನ ಕನ್ನಮಂಗಲ ಗ್ರಾಮ ಪಂಚಾಯಿತಿ (Gram Panchayat) ಬಿಲ್ ಕಲೆಕ್ಟರ್​ ತೆರಿಗೆ ಹಣ ವಂಚಿಸಿರುವ ಆರೋಪ ಕೇಳಿಬಂದಿದೆ. 2020-21ನೇ ಸಾಲಿನಲ್ಲಿ ಬಿಲ್​ ಕಲೆಕ್ಟರ್​ ಮಂಜುನಾಥ್ ಗ್ರಾಮದ ಬಡಾವಣೆ, ಅಪಾರ್ಟ್​ಮೆಂಟ್, ಮನೆಗಳ ತೆರಿಗೆ ಸಂಗ್ರಹಕ್ಕೆ 7 ಬಿಲ್​ ಬುಕ್​ ಬಳಕೆ ಮಾಡಿದ್ದನು. ಈ ಬಿಲ್​ ಬುಕ್​​ಗಳು ನಕಲಿಯಾಗಿದ್ದವು. ಈ ನಕಲಿ ಬಿಲ್​ ಬುಕ್​ ಮುಖಾಂತರ 5 ಕೋಟಿ ರೂ. ತೆರಿಗೆ ಹಣ ಸಂಗ್ರಹಿಸಿದ್ದಾನೆ.

ಇದನ್ನೂ ಓದಿ: ಯಾದಗಿರಿ: ಜಿಲ್ಲಾಸ್ಪತ್ರೆಯಲ್ಲೊಂದು ಅಮಾನುಷ ಘಟನೆ: ವೈದ್ಯರ ನಿರ್ಲಕ್ಷ್ಯದಿಂದ ಕಾರಿಡಾರ್​ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

ಸಂಗ್ರಹಿಸಿದ ಹಣವನ್ನು ಸರ್ಕಾರಕ್ಕೆ ಜಮೆ ಮಾಡದೆ ವಂಚನೆ ಮಾಡಿದ್ದಾನೆ. ಅಲ್ಲದೇ ಈ ಹಿಂದೆ ಕನ್ನಮಂಗಲ ಗ್ರಾ.ಪಂ.ಗೆ ಸೇರಿದ ಬಿಲ್​ ಬುಕ್​​ನ್ನು ಅಪರಿಚಿತ ವ್ಯಕ್ತಿಗಳು ಸುಟ್ಟಿದ್ದರು. ಪ್ರಸ್ತುತ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬಿಲ್​ ಕಲೆಕ್ಟರ್​ ಮಂಜುನಾಥ್ ವಿರುದ್ಧ ದೂರು ದಾಖಲಾಗಿದೆ.

ಈ ಹಿಂದೆ ಗ್ರಾಂ.ಪ ಕಂಪ್ಯೂಟರ್​ ಆಪರೇಟರ್​ ವಿರುದ್ಧ ಕೂಡ ನಕಲಿ ಬಿಲ್ ಬುಕ್​ ಮೂಲಕ ತೆರಿಗೆ ಹಣ ಸಂಗ್ರಹಿಸಿ ವಂಚಿಸಿದ ಆರೋಪ ಕೇಳಿಬಂದಿತ್ತು. ಸದ್ಯ ಕನ್ನಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳು ಬಿಲ್​ ಕಲೆಕ್ಟರ್​ ಮಂಜುನಾಥ್ ವಿರುದ್ಧ ಸರಿಯಾಗಿ ತನಿಖೆ ನಡೆಸುವಂತೆ ಜಿ.ಪಂ., ತಾ.ಪಂ. ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:52 pm, Mon, 28 November 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ