AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

800 ರೂ ಆದ ಮಟನ್ ಬೆಲೆ; ಬನ್ನೇರುಘಟ್ಟ ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಎಂದು ನೋಟಿಸ್

ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಿ ಮಾಂಸದ ಅಂಗಡಿಗೆ ಗ್ರಾ.ಪಂ ಸದಸ್ಯರು ನೋಟಿಸ್ ಅಂಟಿಸಿದ್ದಾರೆ.

800 ರೂ ಆದ ಮಟನ್ ಬೆಲೆ; ಬನ್ನೇರುಘಟ್ಟ ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಎಂದು ನೋಟಿಸ್
800 ರೂ ಆದ ಮಟನ್ ಬೆಲೆ
TV9 Web
| Updated By: ಆಯೇಷಾ ಬಾನು|

Updated on:Mar 30, 2022 | 5:43 PM

Share

ಆನೇಕಲ್: ಮುಸ್ಲಿಮ್ ಅಂಗಡಿಗಳಲ್ಲಿ ಮಾಂಸವನ್ನು ಖರೀದಿಸಬೇಡಿ ಅನ್ನೋ ಕೂಗು ರಾಜ್ಯದಲ್ಲಿ ಭುಗಿಲೆದ್ದಿದೆ. ಮುಸ್ಲಿಮ್ ಮಾಂಸದಂಗಡಿಗಳಲ್ಲಿ ಮಾಡೋ ಹಲಾಲ್ ಕಟ್ ಮಾಂಸವನ್ನ ಖರೀದಿಸಬೇಡಿ ಅನ್ನೋ ಕ್ಯಾಂಪೇನ್ ಶುರುವಾಗಿದೆ. ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಬನ್ನೇರುಘಟ್ಟದಲ್ಲಿ ಕುರಿ ಮಾಂಸ ದುಬಾರಿಯಾಗಿದ್ದು ರೇಟ್ ಇಳಿಸುವಂತೆ ಪಂಚಾಯಿತಿ‌ ನೋಟಿಸ್ ನೀಡಿರುವ ಘಟನೆ ನಡೆದಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ಪ್ರತಿ ಕೆಜಿ ಮಟನ್ಗೆ 800 ರೂ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಕೆಜಿ ಮಟನ್ಗೆ 650 ರೂ ಮಾರಾಟಕ್ಕೆ ಸೂಚಿಸುವಂತೆ ಬನ್ನೇರುಘಟ್ಟ ಗ್ರಾಮ ಪಂಚಾಯಿತಿಗೆ ಕೆಲವರು ಮನವಿ ಸಲ್ಲಿಸಿದ್ದರು. ಸದ್ಯ ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರತಿ ಮಾಂಸದ ಅಂಗಡಿಗೆ ಗ್ರಾ.ಪಂ ಸದಸ್ಯರು ನೋಟಿಸ್ ಅಂಟಿಸಿದ್ದಾರೆ.

ಯುಗಾದಿ ಹಬ್ಬ ಬರಲಿದೆ. ಕಳೆದ ಎರಡು ವರ್ಷದಿಂದ ಕೊರೊನಾದಿಂದ ಹಬ್ಬ ಆಚರಿಸಿದ ಮಂದಿ ಈ ಬಾರಿ ಯುಗಾದಿಯನ್ನ ಭರ್ಜರಿಯಾಗಿ ಆಚರಿಸೋಕೆ ಸಜ್ಜಾಗಿದ್ದಾರೆ. ಯುಗಾದಿ ಹಬ್ಬದ ಮಾರನೇ ದಿನ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ ಸೇರಿದಂತೆ ರಾಜ್ಯದ ದಕ್ಷಿಣ ಭಾಗದಲ್ಲಿ ಯುಗಾದಿ ಹೊಸತೊಡಕನ್ನ ಆಚರಿಸಲಿದ್ದು, ಬಹುತೇಕರ ಮನೆಯಲ್ಲಿ ಮಾಂಸದೂಟ ಮಾಡಲಿದ್ದಾರೆ. ಆದ್ರೆ, ಈಬಾರಿ ಮುಸ್ಲಿಮರ ಅಂಗಡಿಗಳಲ್ಲಿ ಮಾಡೋ ಹಲಾಲ್ ಕಟ್ ಮಾಂಸವನ್ನ ಖರೀದಿಸಬಾರದು. ಅದು ಹಿಂದುಗಳಿಗೆ ಅಪವಿತ್ರ ಅಂತೆಲ್ಲ ಅಭಿಯಾನ ಶುರುವಾಗಿದೆ. ಹೀಗಾಗಿ ಕೆಲವು ಅಂಗಡಿಗಳು ಮಾಂಸದ ದರವನ್ನು ಹೆಚ್ಚಿಸಿವೆ. ಅದೇ ರೀತಿ ಬನ್ನೇರುಘಟ್ಟದಲ್ಲಿ ಮಟನ್ ಬೆಲೆ 800 ರೂ ಇದ್ದು ಗ್ರಾ.ಪಂ ಸದಸ್ಯರು ಮಾಂಸದಂಗಡಿಗಳ ಮುಂದೆ ನೋಟಿಸ್ ಅಂಟಿಸಿದ್ದಾರೆ. ಪಂಚಾಯಿತಿ‌ ನಿಗದಿ ಮಾಡಿದ ಬೆಲೆಗಿಂತ ಹೆಚ್ಚು ಬೆಲೆ ಮಾರಿದ್ರೆ ಕಠಿಣ‌ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: ಅಂಕೋಲಾ ಉದ್ಯಮಿ ಆರ್​ಎನ್​ ನಾಯಕ್​ ಹತ್ಯೆ ಪ್ರಕರಣ; 9 ಆರೋಪಿಗಳ ವಿರುದ್ಧದ ಆರೋಪ ಸಾಬೀತು, ಮೂವರು ನಿರ್ದೋಷಿಗಳೆಂದು ತೀರ್ಪು

ನಾಳೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್

Published On - 5:41 pm, Wed, 30 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!