AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಇನ್ಸ್​ಪೆಕ್ಟರ್​ ಹೆಸರಿನಲ್ಲಿ ನಕಲಿ ಖಾತೆ ತೆರೆದ ಕಿರಾತಕರು, ಹಣ ವಸೂಲಿಗೆ ಯತ್ನ

ಇತ್ತೀಚೆಗೆ ಸೈಬರ್​ ಕ್ರೈಂ ಬಗ್ಗೆ ಹೆಚ್ಚಾಗಿ ವರದಿಯಾಗುತ್ತಿದೆ. ಅದರಂತೆ ಇದೀಗ ಆನ್ಲೈನ್ ಚೋರರು ಆನೇಕಲ್ ಉಪವಿಭಾಗದ ಅತ್ತಿಬೆಲೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ. ವಿಶ್ವನಾಥ್ ಹೆಸರಿನಲ್ಲಿ ಫೇಸ್ಬುಕ್​ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಹಣ ವಸೂಲಿಗೆ ಯತ್ನ ಮಾಡಿದ ಘಟನೆ ನಡೆದಿದೆ.

ಪೊಲೀಸ್ ಇನ್ಸ್​ಪೆಕ್ಟರ್​ ಹೆಸರಿನಲ್ಲಿ ನಕಲಿ ಖಾತೆ ತೆರೆದ ಕಿರಾತಕರು, ಹಣ ವಸೂಲಿಗೆ ಯತ್ನ
ಪೊಲೀಸ್​ ಇನ್ಸ್​ಪೆಕ್ಟ್​ರ್​
TV9 Web
| Edited By: |

Updated on: Jul 18, 2023 | 1:45 PM

Share

ಬೆಂಗಳೂರು ಗ್ರಾಮಾಂತರ: ಇತ್ತೀಚೆಗೆ ಸೈಬರ್​ ಕ್ರೈಂ(Cyber Crime) ಬಗ್ಗೆ ಹೆಚ್ಚಾಗಿ ವರದಿಯಾಗುತ್ತಿದೆ. ಅದರಂತೆ ಇದೀಗ ಆನ್ಲೈನ್ ಚೋರರು ಆನೇಕಲ್(Anekal) ಉಪವಿಭಾಗದ ಅತ್ತಿಬೆಲೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ. ವಿಶ್ವನಾಥ್ ಹೆಸರಿನಲ್ಲಿ ಫೇಸ್ಬುಕ್​ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಹಣ ವಸೂಲಿಗೆ ಯತ್ನ ಮಾಡಿದ ಘಟನೆ ನಡೆದಿದೆ. ಹೌದು ಪೊಲೀಸರ ಅಕೌಂಟ್ ಕೂಡ ಬಿಡದ ಹ್ಯಾಕರ್ಸ್​ಗಳು, ಆನ್ಲೈನ್ ಮೂಲಕ ಹಣ ಪೀಕಲು ಪ್ಲಾನ್​ ಮಾಡಿದ್ದಾರೆ. ಇನ್ನು ಈ ಕುರಿತು ತಿಳಿಯುತ್ತಿದ್ದಂತೆ ಇನ್ಸ್‌ಪೆಕ್ಟರ್ ಸೈಬರ್ ಕ್ರೈಂ ಮೂಲಕ ದೂರು ನೀಡಲು ಮುಂದಾಗಿದ್ದಾರೆ.

ಜಿಲ್ಲೆಯಲ್ಲಿ ಕಳೆದ 7 ತಿಂಗಳಲ್ಲಿ ದಾಖಲಾಗಿದೆ ಬರೋಬ್ಬರಿ 29 ಸೈಬರ್​ ಕ್ರೈಂ ಕಂಪ್ಲೆಂಟ್​

ಚಾಮರಾಜನಗರ: ಸೈಬರ್ ಚೋರರ ಚಿತ್ತ ಇದೀಗ ಚಾಮರಾಜನಗರ ಜಿಲ್ಲೆಯತ್ತ ಬಿದ್ದಿದೆ. ಕಳೆದ 7 ತಿಂಗಳಲ್ಲಿ ಬರೊಬ್ಬರಿ ಬರೋಬ್ಬರಿ 29 ಎಫ್.ಐ.ಆರ್ ದಾಖಲಾಗಿದೆ. ಸೋಶಿಯಲ್ ಮಿಡಿಯಾದಲ್ಲಿ ಹೆಚ್ಚು ಆಕ್ಟೀವ್ ಆಗಿರುವವರನ್ನೇ ಸೈಬರ್ ಚೋರರು ಮೇನ್​ ಟಾರ್ಗೆಟ್ ಮಾಡುತ್ತಿದ್ದಾರೆ. ಫಾರಿನ್ ಗಿಫ್ಟ್ ಆಮೀಶವೊಡ್ಡಿ, 50 ಪರ್ಸೆಂಟ್ ಆಫರ್ ನೀಡುವುದಾಗಿ ಹೇಳಿ, ಲಕ್ಷ ಲಕ್ಷ ಹಣ ಪೀಕಿದ್ದಾರೆ.

ಇದನ್ನೂ ಓದಿ:ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಯುವತಿಯರನ್ನೆ ಟಾರ್ಗೆಟ್ ಮಾಡಿ ವಂಚನೆ ನಡೆಸುತ್ತಿರುವ ಖದೀಮರು

ಇನ್ನು ಸೈಬರ್ ಕ್ರೈಂಗಳಲ್ಲಿ ಹೆಚ್ಚಾಗಿ ಯುವತಿಯರೇ ವಂಚನೆಗೊಳಗಾಗುತ್ತಿದ್ದು, ಈ ಹಿನ್ನಲೆ ವಂಚನೆಗೆ ಒಳಗಾದವರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಸೂಚನೆ ನೀಡಿದ್ದಾರೆ. ಜೊತೆಗೆ ಘಟನೆ ನಡೆದ 2 ಗಂಟೆಯೊಳಗೆ ಪೊಲೀಸ್ ಕಂಟ್ರೋಲ್ ರೂಮ್​ಗೆ ಕರೆ ಮಾಡಲು ಸೂಚಿಸಿದ್ದಾರೆ. ಇನ್ನು ಸೈಬರ್ ಚೋರರಿಗೆ ಕಡಿವಾಣ ಹಾಕಲು ಚಿಂತನೆ ನಡೆಸಿರುವ ಪೊಲೀಸ್ ಇಲಾಖೆ, ಓಟಿಪಿ ಹಾಗೂ ಅನಾವಶ್ಯಕ ಲಿಂಕ್ ಬಗ್ಗೆ ಎಚ್ಚರದಿಂದ ಇರಬೇಕು. ಮುಂಬರುವ ದಿನಗಳಲ್ಲಿ ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಭೆ ನಡೆಸಿ ಸೈಬರ್ ವಂಚನೆ ಕುರಿತು ಸೂಕ್ತ ಮಾಹಿತಿಯನ್ನ ನೀಡಲು ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!