AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಇನ್ಸ್​ಪೆಕ್ಟರ್​ ಹೆಸರಿನಲ್ಲಿ ನಕಲಿ ಖಾತೆ ತೆರೆದ ಕಿರಾತಕರು, ಹಣ ವಸೂಲಿಗೆ ಯತ್ನ

ಇತ್ತೀಚೆಗೆ ಸೈಬರ್​ ಕ್ರೈಂ ಬಗ್ಗೆ ಹೆಚ್ಚಾಗಿ ವರದಿಯಾಗುತ್ತಿದೆ. ಅದರಂತೆ ಇದೀಗ ಆನ್ಲೈನ್ ಚೋರರು ಆನೇಕಲ್ ಉಪವಿಭಾಗದ ಅತ್ತಿಬೆಲೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ. ವಿಶ್ವನಾಥ್ ಹೆಸರಿನಲ್ಲಿ ಫೇಸ್ಬುಕ್​ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಹಣ ವಸೂಲಿಗೆ ಯತ್ನ ಮಾಡಿದ ಘಟನೆ ನಡೆದಿದೆ.

ಪೊಲೀಸ್ ಇನ್ಸ್​ಪೆಕ್ಟರ್​ ಹೆಸರಿನಲ್ಲಿ ನಕಲಿ ಖಾತೆ ತೆರೆದ ಕಿರಾತಕರು, ಹಣ ವಸೂಲಿಗೆ ಯತ್ನ
ಪೊಲೀಸ್​ ಇನ್ಸ್​ಪೆಕ್ಟ್​ರ್​
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 18, 2023 | 1:45 PM

Share

ಬೆಂಗಳೂರು ಗ್ರಾಮಾಂತರ: ಇತ್ತೀಚೆಗೆ ಸೈಬರ್​ ಕ್ರೈಂ(Cyber Crime) ಬಗ್ಗೆ ಹೆಚ್ಚಾಗಿ ವರದಿಯಾಗುತ್ತಿದೆ. ಅದರಂತೆ ಇದೀಗ ಆನ್ಲೈನ್ ಚೋರರು ಆನೇಕಲ್(Anekal) ಉಪವಿಭಾಗದ ಅತ್ತಿಬೆಲೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೆ. ವಿಶ್ವನಾಥ್ ಹೆಸರಿನಲ್ಲಿ ಫೇಸ್ಬುಕ್​ ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಹಣ ವಸೂಲಿಗೆ ಯತ್ನ ಮಾಡಿದ ಘಟನೆ ನಡೆದಿದೆ. ಹೌದು ಪೊಲೀಸರ ಅಕೌಂಟ್ ಕೂಡ ಬಿಡದ ಹ್ಯಾಕರ್ಸ್​ಗಳು, ಆನ್ಲೈನ್ ಮೂಲಕ ಹಣ ಪೀಕಲು ಪ್ಲಾನ್​ ಮಾಡಿದ್ದಾರೆ. ಇನ್ನು ಈ ಕುರಿತು ತಿಳಿಯುತ್ತಿದ್ದಂತೆ ಇನ್ಸ್‌ಪೆಕ್ಟರ್ ಸೈಬರ್ ಕ್ರೈಂ ಮೂಲಕ ದೂರು ನೀಡಲು ಮುಂದಾಗಿದ್ದಾರೆ.

ಜಿಲ್ಲೆಯಲ್ಲಿ ಕಳೆದ 7 ತಿಂಗಳಲ್ಲಿ ದಾಖಲಾಗಿದೆ ಬರೋಬ್ಬರಿ 29 ಸೈಬರ್​ ಕ್ರೈಂ ಕಂಪ್ಲೆಂಟ್​

ಚಾಮರಾಜನಗರ: ಸೈಬರ್ ಚೋರರ ಚಿತ್ತ ಇದೀಗ ಚಾಮರಾಜನಗರ ಜಿಲ್ಲೆಯತ್ತ ಬಿದ್ದಿದೆ. ಕಳೆದ 7 ತಿಂಗಳಲ್ಲಿ ಬರೊಬ್ಬರಿ ಬರೋಬ್ಬರಿ 29 ಎಫ್.ಐ.ಆರ್ ದಾಖಲಾಗಿದೆ. ಸೋಶಿಯಲ್ ಮಿಡಿಯಾದಲ್ಲಿ ಹೆಚ್ಚು ಆಕ್ಟೀವ್ ಆಗಿರುವವರನ್ನೇ ಸೈಬರ್ ಚೋರರು ಮೇನ್​ ಟಾರ್ಗೆಟ್ ಮಾಡುತ್ತಿದ್ದಾರೆ. ಫಾರಿನ್ ಗಿಫ್ಟ್ ಆಮೀಶವೊಡ್ಡಿ, 50 ಪರ್ಸೆಂಟ್ ಆಫರ್ ನೀಡುವುದಾಗಿ ಹೇಳಿ, ಲಕ್ಷ ಲಕ್ಷ ಹಣ ಪೀಕಿದ್ದಾರೆ.

ಇದನ್ನೂ ಓದಿ:ಸೈಬರ್​ ಕ್ರೈಂ ಪ್ರಕರಣ ತಡೆಗಟ್ಟಲು ಪ್ರತ್ಯೇಕ CEN ಘಟಕಗಳ ಆರಂಭ

ಯುವತಿಯರನ್ನೆ ಟಾರ್ಗೆಟ್ ಮಾಡಿ ವಂಚನೆ ನಡೆಸುತ್ತಿರುವ ಖದೀಮರು

ಇನ್ನು ಸೈಬರ್ ಕ್ರೈಂಗಳಲ್ಲಿ ಹೆಚ್ಚಾಗಿ ಯುವತಿಯರೇ ವಂಚನೆಗೊಳಗಾಗುತ್ತಿದ್ದು, ಈ ಹಿನ್ನಲೆ ವಂಚನೆಗೆ ಒಳಗಾದವರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಸೂಚನೆ ನೀಡಿದ್ದಾರೆ. ಜೊತೆಗೆ ಘಟನೆ ನಡೆದ 2 ಗಂಟೆಯೊಳಗೆ ಪೊಲೀಸ್ ಕಂಟ್ರೋಲ್ ರೂಮ್​ಗೆ ಕರೆ ಮಾಡಲು ಸೂಚಿಸಿದ್ದಾರೆ. ಇನ್ನು ಸೈಬರ್ ಚೋರರಿಗೆ ಕಡಿವಾಣ ಹಾಕಲು ಚಿಂತನೆ ನಡೆಸಿರುವ ಪೊಲೀಸ್ ಇಲಾಖೆ, ಓಟಿಪಿ ಹಾಗೂ ಅನಾವಶ್ಯಕ ಲಿಂಕ್ ಬಗ್ಗೆ ಎಚ್ಚರದಿಂದ ಇರಬೇಕು. ಮುಂಬರುವ ದಿನಗಳಲ್ಲಿ ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಭೆ ನಡೆಸಿ ಸೈಬರ್ ವಂಚನೆ ಕುರಿತು ಸೂಕ್ತ ಮಾಹಿತಿಯನ್ನ ನೀಡಲು ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ