AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಆಹಾರ ಸಾಮಗ್ರಿಗಳ ವೇರ್​ಹಾಸ್​ನಲ್ಲಿ ಕಳವು ಆರೋಪ! ಅಸಿಸ್ಟೆಂಟ್ ಮ್ಯಾನೇಜರ್, ಅಕೌಂಟೆಂಟ್ ವಿರುದ್ಧ ದೂರು ದಾಖಲು

ವೇರ್​ಹೌಸ್​ನಲ್ಲಿ ದಿನಬಳಕೆಯ ವಸ್ತುಗಳನ್ನು ವೆಂಡರ್​ಗಳಿಗೆ ಸರಬರಾಜು ಮಾಡುತ್ತಿದ್ದು, ನವೆಂಬರ್ 22ಕ್ಕೆ ಕಂಪನಿಯಿಂದ ಅಕೌಂಟ್​ಗಳನ್ನು ಪರಿಶೀಲಿಸಲಾಗಿ 40,40,536 ರೂ. ಮೌಲ್ಯದ ಸರಕುಗಳು ಕಾಣೆಯಾಗಿರುವುದು ತಿಳಿದುಬಂದಿದೆ.

ನೆಲಮಂಗಲ: ಆಹಾರ ಸಾಮಗ್ರಿಗಳ ವೇರ್​ಹಾಸ್​ನಲ್ಲಿ ಕಳವು ಆರೋಪ! ಅಸಿಸ್ಟೆಂಟ್ ಮ್ಯಾನೇಜರ್, ಅಕೌಂಟೆಂಟ್  ವಿರುದ್ಧ ದೂರು ದಾಖಲು
ಆಹಾರ ಸಾಮಗ್ರಿಗಳ ವೇರ್​ಹೌಸ್
TV9 Web
| Edited By: |

Updated on:Nov 29, 2021 | 1:11 PM

Share

ನೆಲಮಂಗಲ: ಆಹಾರ ಸಾಮಗ್ರಿಗಳ ವೇರ್​ಹೌಸ್​ನಲ್ಲಿ ಕಳವು ಆರೋಪ ಕೇಳಿಬಂದಿದ್ದು, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಅಕೌಂಟೆಂಟ್ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಮಾಕಳಿ ಬಳಿಯ ವೇರ್​ಹೌಸ್​ನಲ್ಲಿ ಬಿಲ್ ಹಾಕದೆ ಅಸಿಸ್ಟೆಂಟ್ ಮ್ಯಾನೇಜರ್ ಕ್ರಿಸ್ಟೋಫರ್ ಸುನೀಲ್ ಹಾಗೂ ಅಕೌಂಟೆಂಟ್ ಪ್ರಸನ್ನ ಕುಮಾರ್ ಕಳ್ಳತನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಸಾಮಾಗ್ರಿ ಕಳವು ಮಾಡಿದ್ದಾರೆಂದು ಆರೋಪಿಸಿ ವೇರ್​ಹೌಸ್​ನ ಮುಖ್ಯಸ್ಥ ಲೋಕೇಶ್ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ವೇರ್​ಹೌಸ್​ನಲ್ಲಿ ದಿನಬಳಕೆಯ ವಸ್ತುಗಳನ್ನು ವೆಂಡರ್​ಗಳಿಗೆ ಸರಬರಾಜು ಮಾಡುತ್ತಿದ್ದು, ನವೆಂಬರ್ 22ಕ್ಕೆ ಕಂಪನಿಯಿಂದ ಅಕೌಂಟ್​ಗಳನ್ನು ಪರಿಶೀಲಿಸಲಾಗಿ 40,40,536 ರೂ. ಮೌಲ್ಯದ ಸರಕುಗಳು ಕಾಣೆಯಾಗಿರುವುದು ತಿಳಿದುಬಂದಿದೆ. ವೇರ್​ಹೌಸ್​ನಲ್ಲಿ ಕೆಲಸ ಮಾಡುವ ಕೆಲವು ಉದ್ಯೋಗಿಗಳನ್ನು ವಿಚಾರಿಸಿದಾಗ, ವೇರ್​ಹೌಸ್​ನಲ್ಲಿ ಕೆಲಸ ಮಾಡುವ ಅಸಿಸ್ಟೆಂಟ್ ಮ್ಯಾನೇಜರ್‌ ಕ್ರಿಸ್ಟೋಪರ್ ಸುನಿಲ್ ಕುಮಾರ್ ಹಲವಾರು ತಿಂಗಳುಗಳಿಂದ ಬಿಲ್ಲುಗಳನ್ನು ಮತ್ತು ಇನ್​ವಾಟ್ಸ್​ಗಳನ್ನು ಮಾಡದೆ ಸರಕುಗಳನ್ನು ಮಾರಾಟ ಮಾಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ ಅಂತ ಸಲ್ಲಿಸಿದ ದೂರಲ್ಲಿ ದಾಖಲಾಗಿದೆ.

ಸುನಿಲ್ ಕುಮಾರ್ ಜೊತೆಗೆ ಅಕೌಂಟೆಂಟ್ ಪ್ರಸನ್ನ ಕುಮಾರ್ ಸಹ ಶಾಮೀಲಾಗಿದ್ದಾರೆ ಅಂತ ಉದ್ಯೋಗಿಯೊಬ್ಬರು  ತಿಳಿಸಿದ್ದಾರೆ. ಕಂಪನಿಗೆ ಮೋಸ ಮಾಡಿದ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ವೇರ್​ಹೌಸ್​ನ ಮುಖ್ಯಸ್ಥ ಲೋಕೇಶ್ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇಬ್ಬರು ಪೆಡ್ಲರ್​ಗಳ ಸೆರೆ ಬೆಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಇಬ್ಬರು ಪೆಡ್ಲರ್​ಗಳು ಬಂಧನಕ್ಕೊಳಗಾಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಡ್ರಗ್ಸ್ ಪೆಡ್ಲರ್​ಗಳಿಂದ 30 ಲಕ್ಷ ರೂ. ಮೌಲ್ಯದ ಎಮ್ಡಿಎಮ್ಎ, ಚರಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ನೈಜೀರಿಯಾ ಪ್ರಜೆಯಿಂದ ಕಡಿಮೆ ಬೆಲೆಗೆ ಸಿಂಥೆಟಿಕ್ ಡ್ರಗ್ ಖರೀದಿ ಮಾಡುತ್ತಿದ್ದರು. ನಂತರ ಐಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಅಧಿಕಾರಿಗಳು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಇದನ್ನೂ ಓದಿ

ಪುನೀತ್ ನಿಧನದ ಬಳಿಕ ಹೊಸ ಬದಲಾವಣೆಯತ್ತ ಶಾಸಕ ರೇಣುಕಾಚಾರ್ಯ; ಅಂಧ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವು

ಗದಗ: 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿ; ಅಧಿಕಾರಿಗಳ ವಿರುದ್ಧ ರೈತ ಕುಟುಂಬ ಆಕ್ರೋಶ

Published On - 12:47 pm, Mon, 29 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ