AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲ: ಆಹಾರ ಸಾಮಗ್ರಿಗಳ ವೇರ್​ಹಾಸ್​ನಲ್ಲಿ ಕಳವು ಆರೋಪ! ಅಸಿಸ್ಟೆಂಟ್ ಮ್ಯಾನೇಜರ್, ಅಕೌಂಟೆಂಟ್ ವಿರುದ್ಧ ದೂರು ದಾಖಲು

ವೇರ್​ಹೌಸ್​ನಲ್ಲಿ ದಿನಬಳಕೆಯ ವಸ್ತುಗಳನ್ನು ವೆಂಡರ್​ಗಳಿಗೆ ಸರಬರಾಜು ಮಾಡುತ್ತಿದ್ದು, ನವೆಂಬರ್ 22ಕ್ಕೆ ಕಂಪನಿಯಿಂದ ಅಕೌಂಟ್​ಗಳನ್ನು ಪರಿಶೀಲಿಸಲಾಗಿ 40,40,536 ರೂ. ಮೌಲ್ಯದ ಸರಕುಗಳು ಕಾಣೆಯಾಗಿರುವುದು ತಿಳಿದುಬಂದಿದೆ.

ನೆಲಮಂಗಲ: ಆಹಾರ ಸಾಮಗ್ರಿಗಳ ವೇರ್​ಹಾಸ್​ನಲ್ಲಿ ಕಳವು ಆರೋಪ! ಅಸಿಸ್ಟೆಂಟ್ ಮ್ಯಾನೇಜರ್, ಅಕೌಂಟೆಂಟ್  ವಿರುದ್ಧ ದೂರು ದಾಖಲು
ಆಹಾರ ಸಾಮಗ್ರಿಗಳ ವೇರ್​ಹೌಸ್
TV9 Web
| Edited By: sandhya thejappa|

Updated on:Nov 29, 2021 | 1:11 PM

Share

ನೆಲಮಂಗಲ: ಆಹಾರ ಸಾಮಗ್ರಿಗಳ ವೇರ್​ಹೌಸ್​ನಲ್ಲಿ ಕಳವು ಆರೋಪ ಕೇಳಿಬಂದಿದ್ದು, ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಅಕೌಂಟೆಂಟ್ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಮಾಕಳಿ ಬಳಿಯ ವೇರ್​ಹೌಸ್​ನಲ್ಲಿ ಬಿಲ್ ಹಾಕದೆ ಅಸಿಸ್ಟೆಂಟ್ ಮ್ಯಾನೇಜರ್ ಕ್ರಿಸ್ಟೋಫರ್ ಸುನೀಲ್ ಹಾಗೂ ಅಕೌಂಟೆಂಟ್ ಪ್ರಸನ್ನ ಕುಮಾರ್ ಕಳ್ಳತನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಸಾಮಾಗ್ರಿ ಕಳವು ಮಾಡಿದ್ದಾರೆಂದು ಆರೋಪಿಸಿ ವೇರ್​ಹೌಸ್​ನ ಮುಖ್ಯಸ್ಥ ಲೋಕೇಶ್ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ವೇರ್​ಹೌಸ್​ನಲ್ಲಿ ದಿನಬಳಕೆಯ ವಸ್ತುಗಳನ್ನು ವೆಂಡರ್​ಗಳಿಗೆ ಸರಬರಾಜು ಮಾಡುತ್ತಿದ್ದು, ನವೆಂಬರ್ 22ಕ್ಕೆ ಕಂಪನಿಯಿಂದ ಅಕೌಂಟ್​ಗಳನ್ನು ಪರಿಶೀಲಿಸಲಾಗಿ 40,40,536 ರೂ. ಮೌಲ್ಯದ ಸರಕುಗಳು ಕಾಣೆಯಾಗಿರುವುದು ತಿಳಿದುಬಂದಿದೆ. ವೇರ್​ಹೌಸ್​ನಲ್ಲಿ ಕೆಲಸ ಮಾಡುವ ಕೆಲವು ಉದ್ಯೋಗಿಗಳನ್ನು ವಿಚಾರಿಸಿದಾಗ, ವೇರ್​ಹೌಸ್​ನಲ್ಲಿ ಕೆಲಸ ಮಾಡುವ ಅಸಿಸ್ಟೆಂಟ್ ಮ್ಯಾನೇಜರ್‌ ಕ್ರಿಸ್ಟೋಪರ್ ಸುನಿಲ್ ಕುಮಾರ್ ಹಲವಾರು ತಿಂಗಳುಗಳಿಂದ ಬಿಲ್ಲುಗಳನ್ನು ಮತ್ತು ಇನ್​ವಾಟ್ಸ್​ಗಳನ್ನು ಮಾಡದೆ ಸರಕುಗಳನ್ನು ಮಾರಾಟ ಮಾಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ ಅಂತ ಸಲ್ಲಿಸಿದ ದೂರಲ್ಲಿ ದಾಖಲಾಗಿದೆ.

ಸುನಿಲ್ ಕುಮಾರ್ ಜೊತೆಗೆ ಅಕೌಂಟೆಂಟ್ ಪ್ರಸನ್ನ ಕುಮಾರ್ ಸಹ ಶಾಮೀಲಾಗಿದ್ದಾರೆ ಅಂತ ಉದ್ಯೋಗಿಯೊಬ್ಬರು  ತಿಳಿಸಿದ್ದಾರೆ. ಕಂಪನಿಗೆ ಮೋಸ ಮಾಡಿದ ಇಬ್ಬರ ವಿರುದ್ಧ ಕ್ರಮ ಕೈಗೊಳ್ಳುವಂತೆ ವೇರ್​ಹೌಸ್​ನ ಮುಖ್ಯಸ್ಥ ಲೋಕೇಶ್ ದೂರಿನಲ್ಲಿ ಆಗ್ರಹಿಸಿದ್ದಾರೆ.

ಇಬ್ಬರು ಪೆಡ್ಲರ್​ಗಳ ಸೆರೆ ಬೆಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ಇಬ್ಬರು ಪೆಡ್ಲರ್​ಗಳು ಬಂಧನಕ್ಕೊಳಗಾಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಡ್ರಗ್ಸ್ ಪೆಡ್ಲರ್​ಗಳಿಂದ 30 ಲಕ್ಷ ರೂ. ಮೌಲ್ಯದ ಎಮ್ಡಿಎಮ್ಎ, ಚರಸ್, ಗಾಂಜಾ, ಸಿಂಥೆಟಿಕ್ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ನೈಜೀರಿಯಾ ಪ್ರಜೆಯಿಂದ ಕಡಿಮೆ ಬೆಲೆಗೆ ಸಿಂಥೆಟಿಕ್ ಡ್ರಗ್ ಖರೀದಿ ಮಾಡುತ್ತಿದ್ದರು. ನಂತರ ಐಟಿ ಉದ್ಯೋಗಿಗಳಿಗೆ ಹೆಚ್ಚಿನ ಬೆಲೆಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದ ಅಧಿಕಾರಿಗಳು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಇದನ್ನೂ ಓದಿ

ಪುನೀತ್ ನಿಧನದ ಬಳಿಕ ಹೊಸ ಬದಲಾವಣೆಯತ್ತ ಶಾಸಕ ರೇಣುಕಾಚಾರ್ಯ; ಅಂಧ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವು

ಗದಗ: 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿ; ಅಧಿಕಾರಿಗಳ ವಿರುದ್ಧ ರೈತ ಕುಟುಂಬ ಆಕ್ರೋಶ

Published On - 12:47 pm, Mon, 29 November 21

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ