AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಾದ್ಯಂತ ನಿನ್ನೆ ರಾತ್ರಿ ಭಾರೀ ಮಳೆ; ಇಂಜಿನ್‌ಗಳಿಗೆ ನೀರು ನುಗ್ಗಿ ಕೆಟ್ಟುನಿಂತ 20ಕ್ಕೂ ಹೆಚ್ಚು ಕಾರು

ರಾತ್ರಿ ಸುರಿದ ಮಳೆಯಿಂದಾಗಿ ಟ್ಯಾಕ್ಸಿ ಮತ್ತು ಖಾಸಗಿ ಕಾರುಗಳಿಗೆ ಹಾನಿಯಾಗಿದೆ. ಹೀಗಾಗಿ 20 ಕ್ಕೂ ಅಧಿಕ ಕಾರುಗಳು ರಿಪೇರಿಗೆ ಬಂದಿವೆ. ಸಮರ್ಪಕ ಬಾಡಿಗೆ ಸಿಗದೆ ಪರದಾಡುತ್ತಿದ್ದ ಚಾಲಕರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರಿನಾದ್ಯಂತ ನಿನ್ನೆ ರಾತ್ರಿ ಭಾರೀ ಮಳೆ; ಇಂಜಿನ್‌ಗಳಿಗೆ ನೀರು ನುಗ್ಗಿ ಕೆಟ್ಟುನಿಂತ 20ಕ್ಕೂ ಹೆಚ್ಚು ಕಾರು
20 ಕ್ಕೂ ಅಧಿಕ ಕಾರುಗಳು ರಿಪೇರಿಗೆ ಬಂದಿವೆ
TV9 Web
| Updated By: preethi shettigar|

Updated on:Oct 12, 2021 | 9:20 AM

Share

ಬೆಂಗಳೂರು: ನಿನ್ನೆ ರಾತ್ರಿ ಭಾರೀ ಮಳೆಯಾದ ಹಿನ್ನೆಲೆ, ಇಂಜಿನ್‌ಗಳಿಗೆ ನೀರು ನುಗ್ಗಿ 20ಕ್ಕೂ ಹೆಚ್ಚು ಕಾರುಗಳು ಕೆಟ್ಟು ನಿಂತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ವಿಮಾನ ನಿಲ್ದಾಣದ ರಸ್ತೆಯಲ್ಲಿ ಮಳೆಯಿಂದ ಟರ್ಮಿನಲ್ ಮುಂಭಾಗದಲ್ಲಿ 2 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿತ್ತು. ಈ ವೇಳೆ ರಸ್ತೆಯಲ್ಲೇ ಹಲವು ಕಾರುಗಳು ಕೆಟ್ಟು ನಿಂತಿವೆ.

ರಾತ್ರಿ ಸುರಿದ ಮಳೆಯಿಂದಾಗಿ ಟ್ಯಾಕ್ಸಿ ಮತ್ತು ಖಾಸಗಿ ಕಾರುಗಳಿಗೆ ಹಾನಿಯಾಗಿದೆ. ಹೀಗಾಗಿ 20 ಕ್ಕೂ ಅಧಿಕ ಕಾರುಗಳು ರಿಪೇರಿಗೆ ಬಂದಿವೆ. ಸಮರ್ಪಕ ಬಾಡಿಗೆ ಸಿಗದೆ ಪರದಾಡುತ್ತಿದ್ದ ಚಾಲಕರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಸಹಜ ಸ್ಥಿತಿಗೆ ಮರಳಿದ ವಿಮಾನ ನಿಲ್ದಾಣ ರಾತ್ರಿ ಸುರಿದ ಮಳೆಗೆ ಏರ್ಪೋರ್ಟ್ ಸುತ್ತಾಮುತ್ತ ಅವಾಂತರ ಸೃಷ್ಟಿಯಾಗಿತ್ತು. ಸದ್ಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಹಜ ಸ್ಥಿತಿಗೆ ಮರಳಿದೆ. ರಸ್ತೆಯಲ್ಲಿ ನಿಂತಿದ್ದ ಭಾರಿ ಪ್ರಮಾಣದ ನೀರು ಕಡಿಮೆಯಾಗಿದೆ. ರಾತ್ರಿ ಏರ್ಪೋಟ್ ಸಿಬ್ಬಂದಿ ನೀರು ಹರಿದು ಹೋಗಲು ಕಾಲುವೆ ಮಾಡಿ ನೀರು ಖಾಲಿ ಮಾಡಿದ್ದಾರೆ. ಇದೀಗ ವಾಹನ ಸವಾರರು ಸರಾಗವಾಗಿ ಏರ್ಪೋರ್ಟ್​ಗೆ ತೆರಳಬಹುದು.

ಮಣ್ಣು ಕುಸಿದು ಕ್ಯಾಂಟರ್ ಪಲ್ಟಿ ಧಾರಾಕಾರ ಮಳೆಗೆ ಮಣ್ಣು ಕುಸಿದು ಕ್ಯಾಂಟರ್ ಪಲ್ಟಿಯಾಗಿದೆ. ಈ ಘಟನೆ ದೇವನಹಳ್ಳಿ ಹೊರವಲಯ ಸೂಲಿಬೆಲೆ ರಸ್ತೆಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕ್ಯಾಂಟರ್ನಲ್ಲಿದ್ದ ಚಾಲಕ, ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

ಮಳೆಗೆ ಕುಸಿದ ಕಾಂಪೌಂಡ್ ನಿರಂತರ ಮಳೆಯಿಂದ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಕಾಂಪೌಂಡ್ ಕುಸಿದಿದೆ. ರಸ್ತೆಗೆ ಅಡ್ಡಲಾಗಿ ಮಣ್ಣು, ಕಲ್ಲು ಕುಸಿದು ಬೀಳುವುದನ್ನು ತಡೆಯಲು ಸಪೋರ್ಟ್ಗೆ ಮಣ್ಣಿನ ಚೀಲ ಇಡಲಾಗಿದೆ. ಕಾಂಪೌಂಡ್ಗೆ ಹೊಂದಿಕೊಂಡ ಮನೆ ಕುಸಿಯುವ ಸಾಧ್ಯತೆಯಿದೆ. ಯಾವುದೇ ಸಮಯದಲ್ಲಾದರೂ ಮನೆ ಕುಸಿಯುವ ಆತಂಕ ಇದೆ. ಹೀಗಾಗಿ ನಿವಾಸಿಗಳು ಲಗೇಜ್ ಸಮೇತ ಮನೆ ಖಾಲಿ ಮಾಡಿದ್ದಾರೆ.

ಮಳೆ ಅವಾಂತರಕ್ಕೆ ವ್ಯಕ್ತಿ ಬಲಿ ಬೆಂಗಳೂರು ನಗರದಲ್ಲಿ ಮಳೆ ಅವಾಂತರಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ. ವಿದ್ಯುತ್ ಪ್ರವಹಿಸಿ ವೆಂಕಟೇಶ್(56) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ನೀರು ಮನೆಗೆ ನುಗ್ಗಿದೆ. ವೆಂಕಟೇಶ್ ಮನೆಯಲ್ಲಿದ್ದ ನೀರನ್ನು ಹೊರಹಾಕುತ್ತಿದ್ದರು. ಈ ವೇಳೆ ಸ್ವಿಚ್ ಬೋರ್ಡ್ ಮುಟ್ಟಿದ್ದ ವೆಂಕಟೇಶ್ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರಿ ಮಳೆಗೆ ಬೃಹತ್ ಗೋಡೆ ಕುಸಿತ; ಮನೆ ಕುಸಿಯುವ ಭೀತಿಯಿಂದ ಕಣ್ಣೀರಿಡುತ್ತಿರುವ ಮಹಿಳೆ

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆ; ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

Published On - 8:36 am, Tue, 12 October 21

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?