AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ: ಹುಟ್ಟಹಬ್ಬ ಆಚರಿಸಲು ಲಾಗ್​ಡ್ರೈವ್ ಹೊರಟಿದ್ದ ಯುವಕರ ವಾಹನ ಅಪಘಾತ, ಇಬ್ಬರು ಸಾವು

ಬರ್ತ್​ಡೇ ಆಚರಣೆ ಮಾಡಲು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್​ಡ್ರೈವ್ ಹೊರಟಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಪಘಾತ ಮಾಡಿ ಓಡಿ ಹೋದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ದೇವನಹಳ್ಳಿ: ಹುಟ್ಟಹಬ್ಬ ಆಚರಿಸಲು ಲಾಗ್​ಡ್ರೈವ್ ಹೊರಟಿದ್ದ ಯುವಕರ ವಾಹನ ಅಪಘಾತ, ಇಬ್ಬರು ಸಾವು
ಲಾಗ್​ಡ್ರೈವ್ ಹೊರಟಿದ್ದ ಯುವಕರು ಹಿಟ್​ & ರನ್​​ಗೆ ಬಲಿ
ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು|

Updated on:Jul 14, 2024 | 12:03 PM

Share

ದೇವನಹಳ್ಳಿ, ಜುಲೈ.14: ಬೆಂಗಳೂರು ಗ್ರಾ. ಜಿಲ್ಲೆಯ ಹೊಸಕೋಟೆ ಹೊರವಲಯಲ್ಲಿ ಹಿಟ್​ & ರನ್​​ಗೆ (Hit And Run) ಇಬ್ಬರು ಬಲಿಯಾಗಿದ್ದಾರೆ (Death). ಬೆಂಗಳೂರಿನ ಕೆಂಪಾಪುರದ ಸಿದ್ಧಾರ್ಥ್​(17), ಹರ್ಷ(18) ಮೃತರು. ಬರ್ತ್​ಡೇ ಆಚರಣೆ ಮಾಡಲು ಇಬ್ಬರು ಯುವಕರು ಕಾರಿನಲ್ಲಿ ಲಾಂಗ್​ಡ್ರೈವ್ (Long Drive) ಬಂದಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಕಾರಿಗೆ ಅಪರಿಚತ ವಾಹನ ಡಿಕ್ಕಿ ಹೊಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಹಿಟ್ ಅಂಡ್ ರನ್ ಮಾಡಿ ಹೋದ ವಾಹನಕ್ಕಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ (Sulibele Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಲುಷಿತ ನೀರು ಸೇವಿಸಿ 9 ಜನ ಅಸ್ವಸ್ಥ

ಯಾದಗಿರಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ 9 ಜನ ಅಸ್ವಸ್ಥಗೊಂಡಿದ್ದಾರೆ. ಗುರಮಠಕಲ್ ತಾಲೂಕಿನ ಕಾಕಲವಾರ ಎಂಬಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯ್ತಿಯಿಂದ ಪೂರೈಕೆ ಮಾಡಿದ ನೀರು ಕುಡಿದು, 8 ಜನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಓರ್ವ ಮಹಿಳೆ‌ಯನ್ನ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಗೆ ವೈದ್ಯಾಧಿಕಾರಿ ಶಿವಪ್ರಸಾದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಟೋಗೆ ಟ್ಯಾಂಕರ್ ಡಿಕ್ಕಿ.. 8 ಜನ ಗಂಭೀರ ಗಾಯ

ಟ್ಯಾಂಕರ್​ ಡಿಕ್ಕಿಯಾಗಿ ಆಟೋದಲ್ಲಿದ್ದ 8 ಜನ ಗಂಭೀರ ಗಾಯಗೊಂಡಿದ್ದಾರೆ. ಹುಬ್ಬಳ್ಳಿ ಹೊರವಲಯದಲ್ಲಿ ದುರಂತ ನಡೆದಿದ್ದು, ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಓವರ್ ಟೇಕ್ ಮಾಡುವ ಭರದಲ್ಲಿ ಆಟೋಗೆ ಡಿಕ್ಕಿ ಹೊಡೆದಿರುವ ಟ್ಯಾಂಕರ್ ಚಾಲಕ ಪರಾರಿಯಾಗಿದ್ದಾನೆ. ಹುಬ್ಬಳ್ಳಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾವೇರಿ: ನಾಯಿಗಾಗಿ ಪೊಲೀಸ್​ ಠಾಣೆ ಮೆಟ್ಟಿಲೇರಿದ ಯುವಕರು

ಮಾರುತಿ ಸ್ವಿಫ್ಟ್​ ಕಾರ್​ನಲ್ಲಿ ಬೆಂಕಿ.. ತಪ್ಪಿದ ಅನಾಹುತ

ತಮಿಳುನಾಡು ಮೂಲದ ಪ್ರವಾಸಿಗರಿದ್ದ ಮಾರುತಿ ಸ್ವಿಫ್ಟ್ ಕಾರ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೊಡಗು ಜಿಲ್ಲೆಯ ಮಡಕೇರಿ ಹೊರ ವಲಯದ ಚೈನ್ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಘಟನೆ ನಡೆದಿದೆ. ಸ್ಥಳಕ್ಕಾಗಮಿಸಿ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಬಸ್​ನಲ್ಲಿ ಅಪ್ರಾಪ್ತೆಗೆ ಕಿರುಕುಳು.. ಬಿತ್ತು ಗೂಸಾ

ಬಸ್​ನಲ್ಲಿ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ದುಷ್ಕರ್ಮಿಗೆ ಬಸ್​ನಲ್ಲಿದ್ದ ಮಹಿಳೆಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಬರ್ತಿದ್ದ ಸರ್ಕಾರಿ ಬಸ್​ನಲ್ಲಿ ಬಾಲಕಿಯನ್ನು ಪಕ್ಕದಲ್ಲಿ ಕೂರಲು ಹೇಳಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಹಿಳೆಯರು ಆರೋಪಿಯನ್ನ ಥಳಿಸುವ ದೃಶ್ಯ ವೈರಲ್ ಆಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:57 am, Sun, 14 July 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ