AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು

ಹೊಸಕೋಟೆ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಇರಬಹುದೆಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ಮೃತರ ಪೈಕಿ ಆರು ಮಂದಿ ಬೆಂಗಳೂರಿನ ಕೊತ್ತನೂರಿನವರು ಎಂಬುದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು
ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದುImage Credit source: tv9
ನವೀನ್ ಕುಮಾರ್ ಟಿ
| Edited By: |

Updated on:Feb 13, 2026 | 11:03 AM

Share

ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ (Accident) ಸಂಭವಿಸಿ ಏಳು ಜನ ದುರ್ಮರಣ ಹೊಂದಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ​ಯುವಿ ಕಾರಿನ (XUV Car) ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್ ​ಯುವಿ ಕಾರು ಮೊದಲು ಮುಂದೆ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರ ಪೈಕಿ 6 ಮಂದಿ ಕಾರಿನಲ್ಲಿದ್ದವರು. ಕಾರಿನಲ್ಲಿದ್ದ ಅಶ್ವಿನ್​, ಅರ್ಹಾನ್​​​​, ಅಯಾನ್ ಅಲಿ, ಭರತ್ ಹೆಣ್ಣೂರು ಮೂಲದ ಈಥನ್(17) ಸೇರಿ 6 ಯುವಕರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರ ಗಗನ್ ಎಂಬುದು ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಎಸ್​​ಪಿ ಚಂದ್ರಕಾಂತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅವೈಜ್ಞಾನಿಕ ರಸ್ತೆಯಿಂದಲೇ ಆಗುತ್ತಿದೆಯಾ ಅಪಘಾತ? ಸ್ಥಳೀಯರಿಂದ ಗಂಭೀರ ಆರೋಪ

ಹೆದ್ದಾರಿಯ ಕಳಪೆ ನಿರ್ಮಾಣ ಮತ್ತು ವಿನ್ಯಾಸದ ಬಗ್ಗೆ ಸ್ತಳೀಯರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಾಧುಪ್ಪನಹಳ್ಳಿಯಿಂದ ಕಮಳಿಪುರ ಬ್ರಿಡ್ಜ್ ವರೆಗಿನ ಈ ರಸ್ತೆಯು ಸರಿಯಾದ ವಿನ್ಯಾಸವನ್ನು ಹೊಂದಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NH) ಈ ರಸ್ತೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದೆ. ಹೆದ್ದಾರಿಯ ವಿನ್ಯಾಸದ ಬಗ್ಗೆ ಕಾಮಗಾರಿ ಸಂದರ್ಭದಲ್ಲೇ ಎಂಜಿನಿಯರ್ ಒಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಕಮಳಿಪುರ ಗ್ರಾಮದ ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಭಯಾನಕ ರೋಡ್​ರೇಜ್​ಗೆ ಬೆಚ್ಚಿಬಿದ್ದ ಬೆಂಗಳೂರು: ಕಾರಿನ ಬಾನೆಟ್​​ನಲ್ಲೇ ವ್ಯಕ್ತಿಯ ಒಂದು ಕಿಮೀ ಹೊತ್ತೊಯ್ದ ಚಾಲಕ!

ಸರ್ವೀಸ್ ರಸ್ತೆಗಳ ಸಮಸ್ಯೆ ಬಗ್ಗೆಯೂ ಮಾತನಾಡಿದ ಅವರು, ಸರ್ವೀಸ್ ರಸ್ತೆಗಳು ಕನಿಷ್ಠ 18 ಅಡಿ ಅಗಲ ಇರಬೇಕಿದ್ದರೂ, ಇಲ್ಲಿ ಮೂರೂವರೆ ಅಥವಾ ಎರಡೂವರೆ ಅಡಿ ಮಾತ್ರ ಇದೆ. ರೈತರು 2010ರಲ್ಲಿ ತಮ್ಮ ಜಮೀನುಗಳನ್ನು ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಬಿಟ್ಟುಕೊಟ್ಟಿದ್ದರೂ, ಅವರಿಗೆ ಯಾವುದೇ ಬೆಲೆ ಸಿಕ್ಕಿಲ್ಲ ಮತ್ತು ರಸ್ತೆಯನ್ನು ಕೂಡ ಸರಿಯಾಗಿ ನಿರ್ಮಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:13 am, Fri, 13 February 26

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!