ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಲಾಸ್ಟ್ ಡ್ರೈವ್ ಆದ ಲಾಂಗ್ ಡ್ರೈವ್

ಹೊಸಕೋಟೆಯ ಎಂ ಸತ್ಯವರ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತಕ್ಕೆ ಬೆಂಗಳೂರಿನ ವಿದ್ಯಾರ್ಥಿಗಳ ಲಾಂಗ್ ಡ್ರೈವ್ ಕಾರಣ ಎಂಬ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅತಿ ವೇಗ ಹಾಗೂ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಲಾಸ್ಟ್ ಡ್ರೈವ್ ಆದ ಲಾಂಗ್ ಡ್ರೈವ್
ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್!
Image Credit source: tv9
Edited By:

Updated on: Feb 13, 2026 | 10:02 AM

ದೇವನಹಳ್ಳಿ, ಫೆಬ್ರವರಿ 13: ಹೊಸಕೋಟೆ (Hoskote) ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಸರಣಿ ಅಪಘಾತದ (Serial Accident) ಬಗ್ಗೆ ಸ್ಫೋಟಕ ಮಾಹಿತಿ ಈಗ ಬಯಲಾಗಿದೆ. ಬೆಂಗಳೂರಿನ ಕಾಲೇಜೊಂದರ ಪಿಯು ವಿದ್ಯಾರ್ಥಿಗಳ ಜಾಲಿ ರೈಡ್, ಅತಿ ವೇಗದ ಚಾಲನೆಯೇ ಭೀಕರ ಸರಣಿ ಅಪಘಾತಕ್ಕೆ ಕಾರಣ ಎಂಬುದು ಈಗ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಎಕ್ಸ್​ ಯುವಿ 700 ಕಾರಿನಲ್ಲಿ ಬಂದಿದ್ದ ಆರು ಮಂದಿ ವಿದ್ಯಾರ್ಥಿಗಳು ಬೆಂಗಳೂರಿನ ಕಾಲೇಜೊಂದರಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದವರು ಎಂಬುದು ಗೊತ್ತಾಗಿದೆ. ನೂತನ ಹೆದ್ದಾರಿಯಲ್ಲಿ ಲಾಂಗ್ ಡ್ರೈವ್‌ಗೆ ಬಂದಿದ್ದ ವೇಳೆ ಅತಿವೇಗವಾಗಿ ಕಾರು ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿದೆ.

ಅತಿವೇಗವಾಗಿ ಬಂದ ಕಾರು ಮೊದಲು ಗಗನ್ ಎಂಬವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಮುಂದೆ ಸಾಗುತ್ತಿದ್ದ ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕ್ಯಾಂಟರ್ ವಾಹನದ ಆಕ್ಸಲ್ ಕಟ್ ಆಗಿ ಅದು ಸರ್ವೀಸ್ ರಸ್ತೆಗೆ ನೆಗೆದಿದೆ. ಈ ವೇಳೆ ರಸ್ತೆಯಲ್ಲಿ ಬಿದ್ದಿದ್ದ ಆಕ್ಸಲ್‌ಗೆ ಮತ್ತೊಂದು ಬ್ರೀಜಾ ಕಾರು ಡಿಕ್ಕಿ ಹೊಡೆದಿದ್ದು, ಅದರಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸರಣಿ ಅಪಘಾತದಲ್ಲಿ ಬೈಕ್ ಸವಾರ ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದು, ಪ್ರಕರಣದ ಕುರಿತು ಪೊಲೀಸರು ವಿಸ್ತೃತ ತನಿಖೆ ನಡೆಸುತ್ತಿದ್ದಾರೆ. ಅಪಘಾತಕ್ಕೆ ಅತಿವೇಗವೇ ಪ್ರಮುಖ ಕಾರಣ ಎಂಬುದು ಪ್ರಾಥಮಿಕವಾಗಿ ತಿಳಿದುಬಂದಿದೆ.

ಮೃತರ ಪೈಕಿ ಬೈಕ್ ಸವಾರ ಸ್ಥಳೀಯರಾಗಿದ್ದು, ಕಾರಿನಲ್ಲಿದ್ದವರು ಬೆಂಗಳೂರಿನ ಕೊತ್ತನೂರು ಮೂಲದವರು ಎನ್ನಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್​​ಪಿ ಚಂದ್ರಕಾಂತ್ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು

ಏತನ್ಮಧ್ಯೆ, ಹೆದ್ದಾರಿಯ ಕಳಪೆ ನಿರ್ಮಾಣ ಮತ್ತು ವಿನ್ಯಾಸದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಅತಿವೇಗದ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಮುಖ್ಯ ಕಾರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us