AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆಯಲ್ಲಿ ಸರಣಿ ಅಪಘಾತ; ಕ್ಯಾಂಟರ್ ಚಾಲಕನ‌ ನಿರ್ಲಕ್ಷ್ಯಕ್ಕೆ ಯುವತಿ ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ(Hoskote)ಯ ಕೋರ್ಟ್ ಸರ್ಕಲ್ ಬಳಿ ಭೀಕರ ಸರಣಿ ಅಪಘಾತವಾಗಿದೆ. ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ಯುವತಿ ಮೇಲೆ ಟ್ಯಾಂಕರ್​ ವಾಹನ ಹರಿದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಇನ್ನುಳಿದಂತೆ ಇಬ್ಬರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಸಕೋಟೆಯಲ್ಲಿ ಸರಣಿ ಅಪಘಾತ; ಕ್ಯಾಂಟರ್ ಚಾಲಕನ‌ ನಿರ್ಲಕ್ಷ್ಯಕ್ಕೆ ಯುವತಿ ಬಲಿ
ಹೊಸಕೋಟೆ ಸರಣಿ ಅಪಘಾತ
ನವೀನ್ ಕುಮಾರ್ ಟಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 11, 2024 | 4:48 PM

Share

ಬೆಂಗಳೂರು ಗ್ರಾಮಾಂತರ, ಫೆ.11: ಕ್ಯಾಂಟರ್ ಚಾಲಕನ‌ ನಿರ್ಲಕ್ಷ್ಯಕ್ಕೆ ಯುವತಿಯೋರ್ವಳು ಬಲಿಯಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ(Hoskote)ಯ ಕೋರ್ಟ್ ಸರ್ಕಲ್ ಬಳಿ ನಡೆದಿದೆ. ಬನ್ನೇರುಘಟ್ಟ ಮೂಲದ ಸುಧಾ(20) ಮೃತ ರ್ದುದೈವಿ. ಇನ್ನು ಆಕೆಯ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಕೋಲಾರ ಕಡೆ ಕ್ಯಾಂಟರ್ ವಾಹನ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಹಾಗೂ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಷ್ಟೇ ಅಲ್ಲ, ಬಳಿಕ ರಸ್ತೆ ದಾಟುತ್ತಿದ್ದ ಸುಧಾ ಮತ್ತು ತಾಯಿಯ ಮೇಲೆ ಕ್ಯಾಂಟರ್ ಹರಿದಿದೆ.

ಗಾಯಳುಗಳಿಗೆ ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಇನ್ನು ಬೈಕ್ ಸವಾರ ನಜೀರ್ ಖಾನ್ ಹಾಗೂ ಕ್ಯಾಂಟರ್ ಚಾಲಕ ಶರೀಫ್ ಎಂಬುವವರಿಗೆ ಗಾಯವಾಗಿದ್ದು, ಗಾಯಾಳುಗಳಿಗೆ ಹೊಸಕೋಟೆ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಎಸ್ಆರ್​​ಟಿಸಿ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಯುವತಿಯ ಮೃತದೇಹವನ್ನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ಸಾವಿನ ರಸ್ತೆ ಆದ ಮಡಿಕೇರಿ-ಕುಶಾಲನಗರ ಹೆದ್ದಾರಿ; ಐದು ತಿಂಗಳಲ್ಲಿ 15ಕ್ಕೂ ಅಧಿಕ ಅಪಘಾತ, ನಾಲ್ವರ ಸಾವು

ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು; ನೂರಾರು ಎಕರೆ ಸಸ್ಯ ಸಂಪತ್ತು ಭಸ್ಮ

ಚಿಕ್ಕಮಗಳೂರು: ತಾಲೂಕಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಕಾಡ್ಗಿಚ್ಚು ಫಸರಿಸಿದ್ದು, ನೂರಾರು ಎಕರೆ ಸಸ್ಯ ಸಂಪತ್ತು ಭಸ್ಮವಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿನಂದಿಸಲು ಹರಸಾಹಸ ಪಡುತ್ತಿದ್ದಾರೆ. ಚಂದ್ರದ್ರೋಣ ಪರ್ವತದ ಪಶ್ಚಿಮಘಟ್ಟ ಸಾಲಿನಲ್ಲಿರುವ ಈ ಮುಳ್ಳಯ್ಯನಗಿರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಇನ್ನು ಬಿಸಿಲಿನ ತಾಪಕ್ಕೆ ಮತ್ತಷ್ಟು ಬೆಂಕಿ ವ್ಯಾಪಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ