AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ; ಮನೆ ಕುಸಿದು ಆರು ಮೇಕೆ ಸಾವು, ಕುಟುಂಬಸ್ಥರು ಪಾರು

ಕೂಗೇನಹಳ್ಳಿ ಗ್ರಾಮದ ಚಂದ್ರಪ್ಪ ಎಂಬುವರ ಮನೆ ಕುಸಿದಿದ್ದು ಜೀವನೋಪಾಯಕ್ಕಾಗಿ ಸಾಕಿಕೊಂಡಿದ್ದ 6 ಮೇಕೆಗಳು ಮೃತಪಟ್ಟಿವೆ. ಹಾಗೂ ಒಂದು ಮೇಕೆಗೆ ಕಾರು ಮುರಿದಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಚಂದ್ರಪ್ಪ ಕುಟುಂಬಸ್ಥರು ಪಕ್ಕದ ಮನೆಯಲ್ಲಿ ಮಲಗಿದ್ದರು. ಹೀಗಾಗಿ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ; ಮನೆ ಕುಸಿದು ಆರು ಮೇಕೆ ಸಾವು, ಕುಟುಂಬಸ್ಥರು ಪಾರು
ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆ; ಮನೆ ಕುಸಿದು ಆರು ಮೇಕೆ ಸಾವು, ಕುಟುಂಬಸ್ಥರು ಪಾರು
TV9 Web
| Edited By: |

Updated on: Oct 12, 2021 | 11:58 AM

Share

ದೇವನಹಳ್ಳಿ: ಕಳೆದ ರಾತ್ರಿ ದೇವನಹಳ್ಳಿ ಸುತ್ತಮುತ್ತ ಭಾರಿ ಮಳೆಯಾಗಿದ್ದು ಮಳೆಗೆ ಹಳೆ ಮನೆ ಕುಸಿದು ಆರು ಮೇಕೆ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೂಗೇನಹಳ್ಳಿಯಲ್ಲಿ ನಡೆದಿದೆ.

ಕೂಗೇನಹಳ್ಳಿ ಗ್ರಾಮದ ಚಂದ್ರಪ್ಪ ಎಂಬುವರ ಮನೆ ಕುಸಿದಿದ್ದು ಜೀವನೋಪಾಯಕ್ಕಾಗಿ ಸಾಕಿಕೊಂಡಿದ್ದ 6 ಮೇಕೆಗಳು ಮೃತಪಟ್ಟಿವೆ. ಹಾಗೂ ಒಂದು ಮೇಕೆಗೆ ಕಾರು ಮುರಿದಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಚಂದ್ರಪ್ಪ ಕುಟುಂಬಸ್ಥರು ಪಕ್ಕದ ಮನೆಯಲ್ಲಿ ಮಲಗಿದ್ದರು. ಹೀಗಾಗಿ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಮನೆಗೆ ಆದಾಯದ ಮೂಲವಾಗಿದ್ದ ಮೇಕೆಗಳ ಸಾವಿನಿಂದ ಚಂದ್ರಪ್ಪ ಕಂಗಾಲಾಗಿದ್ದಾರೆ.

ಕದಿರೇನಪಾಳ್ಯದಲ್ಲಿ ಕಾಂಪೌಂಡ್ ಕುಸಿತ ಬೆಂಗಳೂರಿನ ಕದಿರೇನಪಾಳ್ಯದಲ್ಲಿ ಕಾಂಪೌಂಡ್ ಕುಸಿದಿದೆ. ನಿನ್ನೆ ಅರ್ಧ ಕಾಂಪೌಂಡ್ ಗೋಡೆ ಕುಸಿದುಬಿದ್ದಿತ್ತು. ಭಾರಿ ಮಳೆಯಿಂದಾಗಿ ಈಗ ಮತ್ತಷ್ಟು ಗೋಡೆ ಕುಸಿದಿದೆ. ಬೆಂಗಳೂರಿನ ಇಂದಿರಾನಗರದಲ್ಲಿರುವ ಮಿಲಿಟರಿ ಕಾಂಪೌಂಡ್ ನಿನ್ನೆ ಕುಸಿದಿತ್ತು. ಕಾಂಪೌಂಡ್ ಕುಸಿದ ಪರಿಣಾಮ 10ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದು, ಜಖಂ ಆಗಿರುವ ವಾಹನಗಳ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದು ರೆಸಿಡೆನ್ಸಿಯಲ್ ಏರಿಯಾ ಆಗಿರುವ ಕಾರಣ ಮಕ್ಕಳು ಜಾಸ್ತಿ ಓಡಾಡುತ್ತಾರೆ. ಹೀಗಾಗಿ ಸ್ಥಳೀಯ ನಿವಾಸಿಗಳು ನ್ಯಾಯ ಬೇಕು ಅಂತ ಟಿವಿ9 ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿಯೂ ಮಹಿಳಾ ಮೇಲೆ ಗೋಡೆ ಬಿದ್ದಿದೆ. ಸದ್ಯ ಆ ಮಹಿಳೆ ಮನೆ ಖಾಲಿ ಮಾಡಿ ಬೇರೆ ಕಡೆಗೆ ಹೋಗಿದ್ದಾರೆ. ಆಗಾಗ ಮಿಲಿಟರಿ ಕಾಂಪೌಂಡ್​ನಲ್ಲಿ ಮರಗಳ ರೆಂಬೆಗಳು ಮನುಷ್ಯನ ಮೇಲೆ ಬೀಳುತ್ತವೆ. ಆದರೆ ಇದುವರೆಗೆ ಮಿಲಿಟರಿ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಅಂತ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದರು.

ಮಿಲಿಟರಿ ಕಾಂಪೌಂಡ್ ಕುಸಿದಿದ್ದರಿಂದ ದ್ವಿಚಕ್ರ ವಾಹನ ಸೇರಿ ಅಲ್ಲಿದ್ದ ಎಲ್ಲ ವಾಹನಗಳು ಜಖಂಗೊಂಡಿವೆ. ಗಾಡಿಗಳು ಕಳೆದುಕೊಂಡಿರುವ ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಘಟನೆ ಸ್ಥಳಕ್ಕೆ ಎಂಎಲ್​ಎ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಿಲಿಟರಿ ಕಾಂಪೌಂಡ್ ಕುಸಿತ; 10ಕ್ಕೂ ಹೆಚ್ಚು ವಾಹನಗಳು ಜಖಂ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ