AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಎರಡು ಮೂರು ದಿನಗಳಲ್ಲಿ ಮಾಹಿತಿ ಬಿಚ್ಚಿಡುತ್ತೇನೆ, ನಾನು ಯಾರನ್ನೂ ಟಾರ್ಗೆಟ್​ ಮಾಡಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

545 ಜನ ಆಯ್ಕೆಯಾದ ಪಟ್ಟಿಯನ್ನ ರದ್ದು ಮಾಡಿ ಪರೀಕ್ಷೆ ಬರೆಯಲು ಸರ್ಕಾರ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಕೆಲವರು ಸತ್ಯಾಗ್ರಹ ಮಾಡುತ್ತಿದ್ದು, ನನಗೂ ಬೆಂಬಲ ಕೊಡಿ ಅಂತ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ. 

ಇನ್ನು ಎರಡು ಮೂರು ದಿನಗಳಲ್ಲಿ ಮಾಹಿತಿ ಬಿಚ್ಚಿಡುತ್ತೇನೆ, ನಾನು ಯಾರನ್ನೂ ಟಾರ್ಗೆಟ್​ ಮಾಡಲ್ಲ: ಮಾಜಿ ಸಿಎಂ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ
TV9 Web
| Edited By: |

Updated on:May 03, 2022 | 2:19 PM

Share

ದೇವನಹಳ್ಳಿ: ನನ್ನದೇ ಆದ ಮೂಲಗಳ ಪ್ರಕಾರ ಮಾಹಿತಿ ಸಂಗ್ರಹಿಸುತ್ತಿದ್ದೇನೆ. ಇನ್ನು ಎರಡು ಮೂರು ದಿನಗಳಲ್ಲಿ ಮಾಹಿತಿಯನ್ನ ಬಿಚ್ಚಿಡುತ್ತೇನೆ. ನಾನು ಯಾರನ್ನೂ ಟಾರ್ಗೆಟ್ ಮಾಡಲ್ಲ ಎಂದು ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ (PSI Recruitment) ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ವಿಜಯಪುರ ಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. PSI ನೇಮಕಾತಿ ಅಕ್ರಮ ಕೇವಲ ಕಲಬುರಗಿಗೆ ಸೀಮಿತವಾಗಿಲ್ಲ. ಬೆಂಗಳೂರಿನಲ್ಲೂ ಅಕ್ರಮಕ್ಕೆ ದಾರಿ ಮಾಡಿದ್ದಾರೆಂಬ ಮಾಹಿತಿಯಿದೆ. ದೊಡ್ಡ ಅಧಿಕಾರಿಗಳು ಉತ್ತೇಜನ ನೀಡಿದ್ದಾರೆಂಬ ಮಾಹಿತಿ ಇದೆ. ಈ ಕುರಿತು ನಾನು ಎಲ್ಲ ರೀತಿಯಲ್ಲೂ ಮಾಹಿತಿ ಕಲೆ ಹಾಕ್ತಿದ್ದೇನೆ. ಎರಡ್ಮೂರು ದಿನಗಳಲ್ಲಿ ಎಲ್ಲ ಮಾಹಿತಿಯನ್ನೂ ಬಿಚ್ಚಿಡುತ್ತೇನೆ. 545 ಜನ ಆಯ್ಕೆಯಾದ ಪಟ್ಟಿಯನ್ನ ರದ್ದು ಮಾಡಿ ಪರೀಕ್ಷೆ ಬರೆಯಲು ಸರ್ಕಾರ ನಿರ್ಧಾರ ಮಾಡಿದ್ದಾರೆ. ಈ ಬಗ್ಗೆ ಕೆಲವರು ಸತ್ಯಾಗ್ರಹ ಮಾಡುತ್ತಿದ್ದು, ನನಗೂ ಬೆಂಬಲ ಕೊಡಿ ಅಂತ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿಐಡಿ ವಿಚಾರಣೆಯಲ್ಲಿ ಬಯಲಾಗಿದೆ ಪ್ರಭಾವಿ ಬಿಜೆಪಿ ಮಂತ್ರಿಯೊಬ್ಬರ ಹೆಸರು

ಪಿಎಸ್ಐ ನೇಮಕಾತಿಯಲ್ಲಿ  ನಡೆದ ಅಕ್ರಮ ಈಗಾಗಲೇ ಬಯಲಾಗಿದೆ. ಅಕ್ರಮದ ಕಿಂಗ್​ಪಿನ್​ಗಳು ಸಿಐಡಿ ಪೊಲೀಸರ (CID Police) ವಶದಲ್ಲಿದ್ದಾರೆ. ಸಿಐಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿ ಒಂದೊಂದೆ ಸ್ಫೋಟಕ ಸತ್ಯವನ್ನು ಬಯಲಿಗೆಳೆಯುತ್ತಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಪ್ರಭಾವಿ ಮಂತ್ರಿಯೊಬ್ಬರ ಹೆಸರು ಕೇಳಿಬಂದಿದೆ. ಸಿಐಡಿ ವಿಚಾರಣೆಯಲ್ಲಿ ಬಿಜೆಪಿ ಮಂತ್ರಿಯೊಬ್ಬರ ಹೆಸರು ಕೇಳಿಬಂದಿದ್ದು, ಅಕ್ರಮದಲ್ಲಿ ಅವರ ತಮ್ಮನಿಗೆ 80 ಲಕ್ಷ ರೂಪಾಯಿ ಸೇರಿದೆ ಎಂದು ಹೇಳಲಾಗುತ್ತಿದೆ.

ವೈಎಂಆರ್ ಶೀಟ್ ಮಿಸ್ ಮ್ಯಾಚ್ ಆಗಿದ್ದ ಹಿನ್ನೆಲೆ ಸಿಐಡಿ 10 ಜನರಿಗೆ ನೋಟೀಸ್ ಕೊಟ್ಟಿತ್ತು. ಐದನೇ ರ್ಯಾಂಕ್​​ ಬಂದಿದ್ದ ದರ್ಶನ್​ ಗೌಡನಿಗೆ ನೋಟೀಸ್ ನೀಡಲಾಗಿತ್ತು. ನೋಟೀಸ್ ಹಿನ್ನೆಲೆ ದರ್ಶನ್ ಗೌಡ ವಿಚಾರಣೆಗೆ ಹಾಜರಾಗಿದ್ದ. ವಿಚಾರಣೆಯಲ್ಲಿ 80 ಲಕ್ಷ ರೂಪಾಯಿ ಮಂತ್ರಿಯೊಬ್ಬರ ತಮ್ಮನಿಗೆ ಕೊಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದ. ಈ ಮಾಹಿತಿ ಆಧಾರದ ಮೇಲೆ ಮಂತ್ರಿ ತಮ್ಮನನ್ನು ವಿಚಾರಣೆಗೆ ಕರೆದಿದ್ದರು. ತಕ್ಷಣ ಪ್ರಭಾವಿ ಬಿಜೆಪಿ ಮಂತ್ರಿ ಸಿಐಡಿ ಅಧಿಕಾರಿಗೆ ಕರೆ ಮಾಡಿದ್ದರಂತೆ. ಯಾವುದೇ ಕಾರಣಕ್ಕೂ ವಿಚಾರಣೆ ಮಾಡಬೇಡಿ. ಈಗಲೇ ಬಿಟ್ಟು ಕಳಿಸಿ ಎಂದು ತಿಳಿಸಿದ್ದಾರೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:28 pm, Mon, 2 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್