AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಆದೇಶ: ಅಶ್ವತ್ಥ ಕಟ್ಟೆ ತೆರವಿಗೆ ಮುಸಲ್ಮಾನ ಮುಖಂಡರಿಂದಲೂ ವಿರೋಧ

Nelamangala: ವರಮಹಾಲಕ್ಷ್ಮಿ ಹಬ್ಬದ ದಿನ ನಾಗನ ಕಟ್ಟೆಗೆ ಪೂಜೆ ಮಾಡಬೇಕೆಂದು ಅಧಿಕಾರಿಗಳ ಬಳಿ ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಪಾಲಿಕೆ ಮಾಜಿ‌ ಸದಸ್ಯ ಗಂಗಾಧರ್ ನೇತೃತ್ವದಲ್ಲಿ ಮನವಿ ಮಾಡಲಾಗಿದೆ.

ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವು ಆದೇಶ: ಅಶ್ವತ್ಥ ಕಟ್ಟೆ ತೆರವಿಗೆ ಮುಸಲ್ಮಾನ ಮುಖಂಡರಿಂದಲೂ ವಿರೋಧ
ಧಾರ್ಮಿಕ ಸ್ಥಳ ತೆರವು ವಿರೋಧಿಸಿ ಸ್ಥಳದಲ್ಲಿ ಜಮಾಯಿಸಿರುವ ಸ್ಥಳೀಯರು
TV9 Web
| Edited By: |

Updated on:Aug 11, 2021 | 6:06 PM

Share

ನೆಲಮಂಗಲ: ಅನಧಿಕೃತವಾಗಿ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಿದ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಅದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯ ವೇಳೆ ಅಶ್ವತ್ಥ ಕಟ್ಟೆ ತೆರವಿಗೆ ಸ್ಥಳೀಯರ ವಿರೋಧ ವ್ಯಕ್ತವಾದ ಘಟನೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಗ್ಗನಹಳ್ಳಿ ವಾರ್ಡ್ 70 ರಲ್ಲಿ ನಡೆದಿದೆ. ಅಶ್ವತ್ಥ ಕಟ್ಟೆ ತೆರವಿಗೆ ಮುಸಲ್ಮಾನ್ ಮುಖಂಡರಿಂದಲೂ ವಿರೋಧ ವ್ಯಕ್ತವಾಗಿದೆ.

ಅಕ್ಟೋಬರ್ 29, 2009ರ ನಂತರ ಕಟ್ಟಿದ ಮಂದಿರ ಮಸೀದಿಗಳನ್ನು ತೆರವುಗೊಳಿಸುವಂತೆ ಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಅಶ್ವತ್ಥ ಕಟ್ಟೆ ತೆರವುಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಬಂದಿದ್ದರು. ಈ ವೇಳೆ, ಅಶ್ವತ್ಥ ಕಟ್ಟೆಗೆ ಸುತ್ತುವರಿದು ಅದನ್ನು ರಕ್ಷಿಸುವಂತೆ ಸ್ಥಳೀಯರು ಒತ್ತಾಯಿಸಿದ ಘಟನೆ ನಡೆದಿದೆ.

ವರಮಹಾಲಕ್ಷ್ಮಿ ಹಬ್ಬದ ದಿನ ನಾಗನ ಕಟ್ಟೆಗೆ ಪೂಜೆ ಮಾಡಬೇಕೆಂದು ಅಧಿಕಾರಿಗಳ ಬಳಿ ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ. ಬಿಬಿಎಂಪಿ ಪಾಲಿಕೆ ಮಾಜಿ‌ ಸದಸ್ಯ ಗಂಗಾಧರ್ ನೇತೃತ್ವದಲ್ಲಿ ಮನವಿ ಮಾಡಲಾಗಿದೆ. ಅಧಿಕಾರಿಗಳು, ಸ್ಥಳೀಯರ ಮಾತುಕತೆ ಒಂದು ತಿಂಗಳು ಗಡುವು ನೀಡಲಾಗಿದೆ. ಘಟನೆ ಸಂದರ್ಭ ರಾಜಗೋಪಾಲ ನಗರ ಪೊಲೀಸರು ಸ್ಥಳದಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸೌಹಾರ್ದಕ್ಕೆ ಸಾಕ್ಷಿಯಾದ ಸೀಮಂತ; ಪವಿತ್ರಾಗೆ ನಸೀಮಾಬಾನು ಮನೆಯಲ್ಲಿ ಉಡಿತುಂಬುವ ಕಾರ್ಯ

ಕೋಮು ಸೌಹಾರ್ದ: ಅನಾಥೆಯನ್ನು ಮಗಳಂತೆ ಪೋಷಿಸಿ ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ

(Illegal Building and Worship Places Supreme Court order Public opposes in Nelamangala)

Published On - 6:02 pm, Wed, 11 August 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್