ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ: ಅತಿಥಿ ಉಪನ್ಯಾಸಕಿಯ ಕೊಂದು ಆರೋಪಿಯೂ ಆತ್ಮಹತ್ಯೆ

ದೊಡ್ಡಬಳ್ಳಾಪುರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ಅಕ್ರಮ ಸಂಬಂಧದಿಂದಾಗಿ ಅತಿಥಿ ಉಪನ್ಯಾಸಕಿಯ ಭೀಕರ ಕೊಲೆಯಾಗಿದೆ. ಮದುವೆಗೆ ನಿರಾಕರಿಸಿದ ಕಾರಣ, ಆರೋಪಿಯು ಮಹಿಳೆಯ ಹತ್ಯೆಗೈದು ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರು ಗ್ರಾಮಾಂತರದಲ್ಲಿ ನಡೆದ ಈ ಡಬಲ್ ಟ್ರ್ಯಾಜೆಡಿ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ: ಅತಿಥಿ ಉಪನ್ಯಾಸಕಿಯ ಕೊಂದು ಆರೋಪಿಯೂ ಆತ್ಮಹತ್ಯೆ
ಮೃತರು
Edited By:

Updated on: May 05, 2026 | 12:49 PM

ದೇವನಹಳ್ಳಿ, ಮೇ 05: ಮದುವೆ ಆಗಲು ನಿರಾಕರಿಸಿದ ಕಾರಣಕ್ಕೆ ತನ್ನ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಭೀಕರವಾಗಿ ಕೊಲಗೈದ ಬಳಿಕ ವ್ಯಕ್ತಿಯೋರ್ವ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆಬಚ್ಚಹಳ್ಳಿ ಗ್ರಾಮದ ಬಳಿ ನಡೆದಿದೆ. ಸರೋಜಾ (40) ಕೊಲೆಯಾದ ಮಹಿಳೆಯಾಗಿದ್ದು, ಬಳಿಕ ರೈಲಿಗೆ ತಲೆಕೊಟ್ಟು ಪ್ರಾಣಬಿಟ್ಟಿರುವ ವ್ಯಕ್ತಿಯನ್ನು ರಾಮಾಂಜಿ(45) ಎಂದು ಗುರುತಿಸಲಾಗಿದೆ.

ಕೊಲೆ ಮಾಡಿ ಕಾರಿಗೆ ಬೆಂಕಿ

ದೇವನಹಳ್ಳಿ ಬಳಿಯ ಖಾಸಗಿ ಕಾಲೇಜೊಂದರ ಅತಿಥಿ ಉಪನ್ಯಾಸಕಿಯಾಗಿದ್ದ ಸರೋಜಾ ಮತ್ತು ರಾಮಾಂಜಿ ಕಳೆದೊಂದು ವರ್ಷದಿಂದ ಅನೈತಿಕ ಸಂಬಂಧ ಹೊಂದಿದ್ದರು. ಗಂಡನಿಗೆ ಡಿವೋರ್ಸ್ ಕೊಟ್ಟು ಸರೋಜಾ ರಾಮಾಂಜಿ ಸಂಪರ್ಕದಲ್ಲಿದ್ದಳು. ಈ ನಡುವೆ ಇಬ್ಬರೂ ಮದುವೆಯಾಗೋಣ ಎಂದು ಸರೋಜಾಗೆ ರಾಮಾಂಜಿ ಹೇಳಿದ್ದ. ಆದರೆ ಇದಕ್ಕೆ ಸರೋಜಾ ವಿರೋಧ ವ್ಯಕ್ತಪಡಿಸಿದ್ದಳು. ಈ ನಡುವೆ ಆಕೆಯನ್ನು ಲಾಂಗ್ ಡ್ರೈವ್​​ಗೆ ಎಂದು ಕರೆದುಕೊಂಡು ಬಂದಿದ್ದ ಆರೋಪಿ, ಸರೋಜಾಳನ್ನು ಕೊಂದು ಕಾರಿಗೂ ಬೆಂಕಿ ಹಚ್ಚಿದ್ದ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಗರ್ಭಿಣಿ ಪತ್ನಿ ಎಂಟ್ರಿ! ಮುಂದೇನಾಯ್ತು ಗೊತ್ತಾ?

ಪೂರ್ವಯೋಜಿತ ಕೊಲೆ

ಸೋಷಿಯಲ್ ಮೀಡಿಯಾ ಮೂಲಕ ಪರಿಚಿತವಾಗಿದ್ದ ಸರೋಜಾ ಮದುವೆಗೆ ನಿರಾಕರಿಸಿದ ಕಾರಣ ಆಕೆ ವಿರುದ್ಧ ರಾಮಾಂಜಿ ಸಿಟ್ಟುಗೊಂಡಿದ್ದ. ಹೀಗಾಗಿ ಕೊಲೆ ಬಗ್ಗೆ ಮೊದಲೇ ನಿರ್ಧಾರ ಮಾಡಿ ಆಕೆಯನ್ನು ತನ್ನ ಜೊತೆಗೆ ಕರೆದುಕೊಂಡು ಬಂದಿದ್ದ. ಮಹಿಳೆಯನ್ನು ಕೊಂದ ಬಳಿಕ ಆರೋಪಿ ಎಸ್ಕೇಪ್​​ ಆಗಿದ್ದ ಹಿನ್ನೆಲೆ, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆಗೆ ಇಳಿದಿದ್ದರು. ಈ ವೇಳೆ ಮತ್ತೊಂದು ಶಾಕಿಂಗ್​​ ವಿಚಾರ ಬಯಲಾಗಿದ್ದು, ಸರೋಜಾ ಕೊಲೆ ಬಳಿಕ ಆರೋಪಿ ರಾಮಾಂಜಿ ಕೂಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಗೊತ್ತಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:48 pm, Tue, 5 May 26

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us