AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIADB ಅಧಿಕಾರಿಗಳಿಂದ ಕೋಟ್ಯಂತರ ರೂ. ಗುಳುಂ ಮಾಡಲು ಪ್ಲ್ಯಾನ್‌? ರಾತ್ರೋರಾತ್ರಿ ತಲೆ ಎತ್ತಿದೆ ವಿವಿಧ ಹಣ್ಣಿನ ಲಕ್ಷಾಂತರ ಸಸಿಗಳು

ಕೆಐಎಡಿಬಿ ಹಗರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿವೆ. ಅದರಂತೆ ಇದೀಗ ಬೆಂಗಳೂರು ಗ್ರಾಮಾಂತರ(Bengaluru rural) ಜಿಲ್ಲೆಯ ನೆಲಮಂಗಲ, ದಾಬಾಸ್‌ಪೇಟೆ‌ ಸುತ್ತಮುತ್ತ ಬ್ರೋಕರ್‌ಗಳ ಜೊತೆ ಸೇರಿ ಕೋಟ್ಯಂತರ ರೂಪಾಯಿ ಗುಳುಂ ಮಾಡಲು ಕೆಐಎಡಿಬಿ ಅಧಿಕಾರಿಗಳು ಪ್ಲ್ಯಾನ್‌ ಮಾಡಿರುವ ಆರೋಪ ಕೇಳಿಬಂದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

KIADB ಅಧಿಕಾರಿಗಳಿಂದ ಕೋಟ್ಯಂತರ ರೂ. ಗುಳುಂ ಮಾಡಲು ಪ್ಲ್ಯಾನ್‌? ರಾತ್ರೋರಾತ್ರಿ ತಲೆ ಎತ್ತಿದೆ ವಿವಿಧ ಹಣ್ಣಿನ ಲಕ್ಷಾಂತರ ಸಸಿಗಳು
KIADB ಅಧಿಕಾರಿಗಳಿಂದ ಕೋಟ್ಯಂತರ ರೂ. ಗುಳುಂ ಮಾಡಲು ಪ್ಲ್ಯಾನ್‌
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 21, 2024 | 3:01 PM

ಬೆಂಗಳೂರು ಗ್ರಾಮಾಂತರ, ಮೇ.21: ಬ್ರೋಕರ್‌ಗಳ ಜೊತೆ ಸೇರಿ ಕೋಟ್ಯಂತರ ರೂಪಾಯಿ ಗುಳುಂ ಮಾಡಲು ಕೆಐಎಡಿಬಿ ಅಧಿಕಾರಿಗಳು ಪ್ಲ್ಯಾನ್‌ ಮಾಡಿರುವ ಆರೋಪ ಬೆಂಗಳೂರು ಗ್ರಾಮಾಂತರ(Bengaluru rural) ಜಿಲ್ಲೆಯ ನೆಲಮಂಗಲ, ದಾಬಾಸ್‌ಪೇಟೆ‌ ಸುತ್ತಮುತ್ತ ಕೇಳಿಬಂದಿದೆ. ‘ಕೈಗಾರಿಕಾ ಉದ್ದೇಶಕ್ಕೆಂದು ರೈತರ ಭೂಮಿಯನ್ನು ಕೆಐಎಡಿಬಿ(KIADB) ಖರೀದಿಸುತ್ತದೆ. ಆದರೆ, ಸರ್ಕಾರ ಹಣ ನೀಡಿ‌ ಖರೀದಿಸಿದರೂ ಮತ್ತೊಂದು ಮಾರ್ಗದಲ್ಲಿ ಬ್ರೋಕರ್​ಗಳ ಮುಖಾಂತರ ಕೆಐಎಡಿಬಿ‌ ಅಧಿಕಾರಿಗಳು ಸರ್ಕಾರದ ಬೊಕ್ಕಸಕ್ಕೆ ಕನ್ನ ಹಾಕುತ್ತಿದ್ದಾರೆ.

ರಾತ್ರೋರಾತ್ರಿ‌‌ ಮರಗಳನ್ನ ನೆಟ್ಟಿ, ಪ್ರತಿ ಮರಕ್ಕೂ ಪರಿಹಾರದ ಹಣ ಗುಳುಂ ಮಾಡೋ ಪ್ಲ್ಯಾನ್‌

ನೆಲಮಂಗಲ, ದಾಬಾಸ್ ಪೇಟೆ‌ಯ ಸುತ್ತಮುತ್ತಲಿನ ಪ್ರದೇಶದಲ್ಲಿನ ಭೂಮಿಗೆ ಸರ್ಕಾರ ವಶಕ್ಕೆ ಪಡೆಯೊದಕ್ಕೆ ನೀಡುವ ಹಣಕ್ಕಿಂತ ಹೆಚ್ಚಿನ ಹಣ‌ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಈ ಹಿನ್ನಲೆ ತೋಟಗಾರಿಕೆ ಇಲಾಖೆ ಮತ್ತು ಕೆಐಎಡಿಬಿ ಅಧಿಕಾರಿಗಳು ಆಂಧ್ರದ ರಾಜಮಂಡ್ರಿ ನರ್ಸರಿಯಿಂದ ರಾತ್ರೋರಾತ್ರಿ‌‌ ಅಡಿಕೆ, ಮಾವು, ಹುಣಸೆ ಸೇರಿ ಲಕ್ಷಾಂತರ ಸಸಿಗಳನ್ನು ತರಿಸಿ ನೆಟ್ಟು, ಪ್ರತಿ ಗಿಡಕ್ಕೂ ಪರಿಹಾರದ ಹಣವನ್ನು ಗುಳುಂ ಮಾಡುವ ಪ್ಲ್ಯಾನ್‌ ಇದಾಗಿದೆ.

ಇದನ್ನೂ ಓದಿ:KIADB ಮತ್ತೊಂದು ಹಗರಣ: ಸತ್ತವರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ಹೊಡೆದಿದ್ದಾರಂತೆ! ಸಿಐಡಿ, ರಾಜ್ಯ ಸರ್ಕಾರ ಸೈಲೆಂಟ್

ಅಮಾಯಕ ರೈತರಿಗೆ ನಕಲಿ ದಾಖಲೆ ಸೃಷ್ಟಿಸಿ ಹಣ ಪೀಕಲು ಸಜ್ಜಾದ ಅಧಿಕಾರಿಗಳು

ಒಂದೊಂದು ಸಸಿಗೂ ರೈತರಿಗೆ ಸರ್ಕಾರ ಪರಿಹಾರ ನೀಡುತ್ತದೆ. ಇದನ್ನೇ ಬಂಡವಾಳ ಮಾಡಿಕೊಂಡ ಅಧಿಕಾರಿಗಳು, ಒಂದೊಂದು ಎಕರೆಯಲ್ಲಿ ಸಾವಿರಾರು‌ ಮರದ ಸಸಿಗಳನ್ನು ತಂದು ನೆಟ್ಟು, ಬ್ರೋಕರ್​ಗಳ ಜೊತೆ ಸೇರಿ ಅಧಿಕಾರಿಗಳು ಕೋಟ್ಯಾಂತರ ಹಣ ಗುಳುಂ ಮಾಡಲು ಮುಂದಾಗಿದ್ದಾರೆ. ಅಮಾಯಕ ರೈತರಿಗೆ ಬೋಗಸ್ ದಾಖಲೆ ಸೃಷ್ಟಿಸಿ ಹಣ ಪೀಕಲು ಸಜ್ಜಾಗಿದ್ದು, ಮಾಚನಹಳ್ಳಿ, ಘಂಟೆ ಹೊಸಹಳ್ಳಿ, ಗೆದ್ದಲಹಳ್ಳಿ, ಹುಲಕುಂಟೆ, ಕೋಡಿಪಾಳ್ಯ, ಬಿದಲೂರು,‌ ಹನುಮಂತಪುರ, ಗೊಟ್ಟಿಕೆರೆ, ಬರಗೇನಹಳ್ಳಿ, ಕಾಸರಘಟ್ಟ,ಕಂಬಾಳು, ಓಬಳಾಪುರ ಸೇರಿದಂತೆ ‌ಹಲವು ಗ್ರಾಮದಲ್ಲಿನ ಭೂಮಿ, ಮತ್ತು ಈಗಾಗಲೇ ರಾಜ್ಯದ ಹಲವು ಜಿಲ್ಲೆಯಲ್ಲಿ ಐಎಡಿಬಿ‌ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಹಣ ಗುಳಂ ಮಾಡಿರುವ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ
ಮೈಸೂರಿನಲ್ಲಿ ರಜನೀಕಾಂತ್ ನೋಡಲು ಜನಸಾಗರ: ವಿಡಿಯೋ ನೋಡಿ