AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಬಿಹಾರ್​ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ಈ ಹಿನ್ನಲೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು
ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವು
ಬಿ ಮೂರ್ತಿ, ನೆಲಮಂಗಲ
| Edited By: |

Updated on: May 14, 2024 | 10:41 PM

Share

ಬೆಂಗಳೂರು ಗ್ರಾಮಾಂತರ, ಮೇ.14: ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರಿ ಮೂಲದ ಕಾರ್ಮಿಕ ತೋಸಿಫ್ ಖಾನ್(23) ಮೃತ ವ್ಯಕ್ತಿ. ಘಟನೆ ಹಿನ್ನಲೆ ಪ್ರೊಡಕ್ಷನ್ ಇನ್ ಚಾರ್ಜ್ ಅಮಿತ್ ಸರ್ಕಾರ್, ಸುರಕ್ಷತೆ ಅಧಿಕಾರಿ ಬಂಗಾರು ಸೇರಿದಂತೆ ಜಿಂದಾಲ್ ಫ್ಯಾಕ್ಟರಿಯ ಮುಖ್ಯಸ್ಥರು ಮತ್ತು ಆಡಳಿತ ವರ್ಗದವರು, ಜವಾಬ್ದಾರಿಯುತ ಅಧಿಕಾರಿಯನ್ನು ನೇಮಿಸದೇ ಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳನ್ನು ನೀಡದೇ ನಿರ್ಲಕ್ಷ ತೋರಿದ್ದು, ಇದರಿಂದ ಇವರ ವಿರುದ್ಧ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕ್ಯಾಂಟರ್ ಡಿಕ್ಕಿ, ಆಟೋದಲ್ಲಿ ತೆರಳ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ತಾಲೂಕಿನ ದಾಸನಪುರ ಎಪಿಎಂಸಿ ಬಳಿ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ದಾಸನಪುರ ಎಪಿಎಂಸಿ ಬಳಿಯ ನಗರೂರಿನ ಮೊನಲಿಸಾ(31) ಸಾವು. ಇನ್ನು ಘಟನೆ ಹಿನ್ನಲೆ ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಿ ಪೊಲೀಸ್ ಸಿಬ್ಬಂದಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ದುರಂತ: ಗಾಯಗೊಂಡಿದ್ದ ಮೂವರು ಸಾವು, ಅನಾಥವಾದ ಹಸುಗೂಸು

ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು‌ ಕೃಷಿ ಮಹಿಳೆ ಸಾವು

ದಾವಣಗೆರೆ: ಜಗಳೂರು ತಾಲೂಕಿನ ದೊಡ್ಡಭೋಮನಹಳ್ಳಿಯಲ್ಲಿ ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದಾಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಕೃಷಿ ಮಹಿಳೆ ಸಾವನ್ನಪ್ಪಿದ್ದಾರೆ. ಶಾರದಮ್ಮ(59) ಮೃತರು. ಇತ್ತೀಚಿಗೆ ಸುರಿದ ಮಳೆಗೆ ಕೃಷಿ ಹೊಂಡ ತುಂಬಿಕೊಂಡಿತ್ತು. ಇಂದು(ಮೇ.14) ಮಧ್ಯಾನ್ನ ಎತ್ತುಗಳಿಗೆ ನೀರು ಕುಡಿಸಿಕೊಂಡು ಬರುವುದಕ್ಕೆ ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ