AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಬಿಹಾರ್​ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ಈ ಹಿನ್ನಲೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು
ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವು
ಬಿ ಮೂರ್ತಿ, ನೆಲಮಂಗಲ
| Edited By: |

Updated on: May 14, 2024 | 10:41 PM

Share

ಬೆಂಗಳೂರು ಗ್ರಾಮಾಂತರ, ಮೇ.14: ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರಿ ಮೂಲದ ಕಾರ್ಮಿಕ ತೋಸಿಫ್ ಖಾನ್(23) ಮೃತ ವ್ಯಕ್ತಿ. ಘಟನೆ ಹಿನ್ನಲೆ ಪ್ರೊಡಕ್ಷನ್ ಇನ್ ಚಾರ್ಜ್ ಅಮಿತ್ ಸರ್ಕಾರ್, ಸುರಕ್ಷತೆ ಅಧಿಕಾರಿ ಬಂಗಾರು ಸೇರಿದಂತೆ ಜಿಂದಾಲ್ ಫ್ಯಾಕ್ಟರಿಯ ಮುಖ್ಯಸ್ಥರು ಮತ್ತು ಆಡಳಿತ ವರ್ಗದವರು, ಜವಾಬ್ದಾರಿಯುತ ಅಧಿಕಾರಿಯನ್ನು ನೇಮಿಸದೇ ಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳನ್ನು ನೀಡದೇ ನಿರ್ಲಕ್ಷ ತೋರಿದ್ದು, ಇದರಿಂದ ಇವರ ವಿರುದ್ಧ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕ್ಯಾಂಟರ್ ಡಿಕ್ಕಿ, ಆಟೋದಲ್ಲಿ ತೆರಳ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ತಾಲೂಕಿನ ದಾಸನಪುರ ಎಪಿಎಂಸಿ ಬಳಿ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ದಾಸನಪುರ ಎಪಿಎಂಸಿ ಬಳಿಯ ನಗರೂರಿನ ಮೊನಲಿಸಾ(31) ಸಾವು. ಇನ್ನು ಘಟನೆ ಹಿನ್ನಲೆ ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಿ ಪೊಲೀಸ್ ಸಿಬ್ಬಂದಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ದುರಂತ: ಗಾಯಗೊಂಡಿದ್ದ ಮೂವರು ಸಾವು, ಅನಾಥವಾದ ಹಸುಗೂಸು

ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು‌ ಕೃಷಿ ಮಹಿಳೆ ಸಾವು

ದಾವಣಗೆರೆ: ಜಗಳೂರು ತಾಲೂಕಿನ ದೊಡ್ಡಭೋಮನಹಳ್ಳಿಯಲ್ಲಿ ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದಾಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಕೃಷಿ ಮಹಿಳೆ ಸಾವನ್ನಪ್ಪಿದ್ದಾರೆ. ಶಾರದಮ್ಮ(59) ಮೃತರು. ಇತ್ತೀಚಿಗೆ ಸುರಿದ ಮಳೆಗೆ ಕೃಷಿ ಹೊಂಡ ತುಂಬಿಕೊಂಡಿತ್ತು. ಇಂದು(ಮೇ.14) ಮಧ್ಯಾನ್ನ ಎತ್ತುಗಳಿಗೆ ನೀರು ಕುಡಿಸಿಕೊಂಡು ಬರುವುದಕ್ಕೆ ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?