AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಬಿಹಾರ್​ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ಈ ಹಿನ್ನಲೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು
ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವು
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ| Edited By: ಕಿರಣ್ ಹನುಮಂತ್​ ಮಾದಾರ್|

Updated on: May 14, 2024 | 10:41 PM

Share

ಬೆಂಗಳೂರು ಗ್ರಾಮಾಂತರ, ಮೇ.14: ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರಿ ಮೂಲದ ಕಾರ್ಮಿಕ ತೋಸಿಫ್ ಖಾನ್(23) ಮೃತ ವ್ಯಕ್ತಿ. ಘಟನೆ ಹಿನ್ನಲೆ ಪ್ರೊಡಕ್ಷನ್ ಇನ್ ಚಾರ್ಜ್ ಅಮಿತ್ ಸರ್ಕಾರ್, ಸುರಕ್ಷತೆ ಅಧಿಕಾರಿ ಬಂಗಾರು ಸೇರಿದಂತೆ ಜಿಂದಾಲ್ ಫ್ಯಾಕ್ಟರಿಯ ಮುಖ್ಯಸ್ಥರು ಮತ್ತು ಆಡಳಿತ ವರ್ಗದವರು, ಜವಾಬ್ದಾರಿಯುತ ಅಧಿಕಾರಿಯನ್ನು ನೇಮಿಸದೇ ಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳನ್ನು ನೀಡದೇ ನಿರ್ಲಕ್ಷ ತೋರಿದ್ದು, ಇದರಿಂದ ಇವರ ವಿರುದ್ಧ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕ್ಯಾಂಟರ್ ಡಿಕ್ಕಿ, ಆಟೋದಲ್ಲಿ ತೆರಳ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ತಾಲೂಕಿನ ದಾಸನಪುರ ಎಪಿಎಂಸಿ ಬಳಿ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ದಾಸನಪುರ ಎಪಿಎಂಸಿ ಬಳಿಯ ನಗರೂರಿನ ಮೊನಲಿಸಾ(31) ಸಾವು. ಇನ್ನು ಘಟನೆ ಹಿನ್ನಲೆ ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಿ ಪೊಲೀಸ್ ಸಿಬ್ಬಂದಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ದುರಂತ: ಗಾಯಗೊಂಡಿದ್ದ ಮೂವರು ಸಾವು, ಅನಾಥವಾದ ಹಸುಗೂಸು

ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು‌ ಕೃಷಿ ಮಹಿಳೆ ಸಾವು

ದಾವಣಗೆರೆ: ಜಗಳೂರು ತಾಲೂಕಿನ ದೊಡ್ಡಭೋಮನಹಳ್ಳಿಯಲ್ಲಿ ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದಾಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಕೃಷಿ ಮಹಿಳೆ ಸಾವನ್ನಪ್ಪಿದ್ದಾರೆ. ಶಾರದಮ್ಮ(59) ಮೃತರು. ಇತ್ತೀಚಿಗೆ ಸುರಿದ ಮಳೆಗೆ ಕೃಷಿ ಹೊಂಡ ತುಂಬಿಕೊಂಡಿತ್ತು. ಇಂದು(ಮೇ.14) ಮಧ್ಯಾನ್ನ ಎತ್ತುಗಳಿಗೆ ನೀರು ಕುಡಿಸಿಕೊಂಡು ಬರುವುದಕ್ಕೆ ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!