AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಬಿಹಾರ್​ ಮೂಲದ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ಈ ಹಿನ್ನಲೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರ್ಖಾನೆಯಲ್ಲಿ ಎಲ್​ಪಿಜಿ ಅನಿಲ ಸೋರಿಕೆಯಿಂದ ಬೆಂಕಿ; ಕಾರ್ಮಿಕ ಸಾವು
ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವು
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 14, 2024 | 10:41 PM

Share

ಬೆಂಗಳೂರು ಗ್ರಾಮಾಂತರ, ಮೇ.14: ಕಾರ್ಖಾನೆಯಲ್ಲಿ ಎಲ್​ಪಿಜಿ(LPG) ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಕೈಗಾರಿಕಾ ಪ್ರದೇಶದ ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ನಡೆದಿದೆ. ಬಿಹಾರಿ ಮೂಲದ ಕಾರ್ಮಿಕ ತೋಸಿಫ್ ಖಾನ್(23) ಮೃತ ವ್ಯಕ್ತಿ. ಘಟನೆ ಹಿನ್ನಲೆ ಪ್ರೊಡಕ್ಷನ್ ಇನ್ ಚಾರ್ಜ್ ಅಮಿತ್ ಸರ್ಕಾರ್, ಸುರಕ್ಷತೆ ಅಧಿಕಾರಿ ಬಂಗಾರು ಸೇರಿದಂತೆ ಜಿಂದಾಲ್ ಫ್ಯಾಕ್ಟರಿಯ ಮುಖ್ಯಸ್ಥರು ಮತ್ತು ಆಡಳಿತ ವರ್ಗದವರು, ಜವಾಬ್ದಾರಿಯುತ ಅಧಿಕಾರಿಯನ್ನು ನೇಮಿಸದೇ ಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳನ್ನು ನೀಡದೇ ನಿರ್ಲಕ್ಷ ತೋರಿದ್ದು, ಇದರಿಂದ ಇವರ ವಿರುದ್ಧ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕ್ಯಾಂಟರ್ ಡಿಕ್ಕಿ, ಆಟೋದಲ್ಲಿ ತೆರಳ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ತಾಲೂಕಿನ ದಾಸನಪುರ ಎಪಿಎಂಸಿ ಬಳಿ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ದಾಸನಪುರ ಎಪಿಎಂಸಿ ಬಳಿಯ ನಗರೂರಿನ ಮೊನಲಿಸಾ(31) ಸಾವು. ಇನ್ನು ಘಟನೆ ಹಿನ್ನಲೆ ಕ್ಯಾಂಟರ್ ವಾಹನವನ್ನು ಜಪ್ತಿ ಮಾಡಿ ಪೊಲೀಸ್ ಸಿಬ್ಬಂದಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಅಡುಗೆ ಅನಿಲ ಸೋರಿಕೆಯಿಂದ ಅಗ್ನಿ ದುರಂತ: ಗಾಯಗೊಂಡಿದ್ದ ಮೂವರು ಸಾವು, ಅನಾಥವಾದ ಹಸುಗೂಸು

ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಕಾಲು ಜಾರಿ ಬಿದ್ದು‌ ಕೃಷಿ ಮಹಿಳೆ ಸಾವು

ದಾವಣಗೆರೆ: ಜಗಳೂರು ತಾಲೂಕಿನ ದೊಡ್ಡಭೋಮನಹಳ್ಳಿಯಲ್ಲಿ ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದಾಗ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಕಾಲುಜಾರಿ ಬಿದ್ದು ಕೃಷಿ ಮಹಿಳೆ ಸಾವನ್ನಪ್ಪಿದ್ದಾರೆ. ಶಾರದಮ್ಮ(59) ಮೃತರು. ಇತ್ತೀಚಿಗೆ ಸುರಿದ ಮಳೆಗೆ ಕೃಷಿ ಹೊಂಡ ತುಂಬಿಕೊಂಡಿತ್ತು. ಇಂದು(ಮೇ.14) ಮಧ್ಯಾನ್ನ ಎತ್ತುಗಳಿಗೆ ನೀರು ಕುಡಿಸಿಕೊಂಡು ಬರುವುದಕ್ಕೆ ಹೋದಾಗ ಈ ದುರ್ಘಟನೆ ನಡೆದಿದೆ. ಈ ಕುರಿತು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ