AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ವಿಜಯಪುರ ಪಟ್ಟಣದ ಹೊರವಲಯದಲ್ಲಿ ರಾತ್ರಿ‌ ವೇಳೆ‌ ಎಲ್ಲೆಂದರಲ್ಲಿ ಲಾರಿಗಳನ್ನು ಪೊಲೀಸರು ನಿಲ್ಲಿಸಿ ಹಣ ವಸೂಲಿ ಮಾಡುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಲಾರಿಗಳು ಹೆದ್ದಾರಿ ಬದಿಯಲ್ಲಿ ನಿಲ್ಲುವ ಕಾರಣ ಗೊತ್ತಾಗದೆ ಪದೇ ಪದೇ ಅಪಘಾತ‌ವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ದೇವನಹಳ್ಳಿ ತಾಲೂಕಿನಲ್ಲಿ ಬೈಕ್​ ಅಪಘಾತ
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Oct 31, 2023 | 10:48 PM

Share

ಬೆಂಗಳೂರು ಗ್ರಾಮಾಂತರ, ಅ.31: ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ(Accident) ಹೊಡೆದ ಪರಿಣಾಮ‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೇವನಹಳ್ಳಿ ತಾಲೂಕಿನ ವಿಜಯಪುರ ಹೊರವಲಯದ ಹಾರ್ಡಿಪುರ ಬಳಿ ನಡೆದಿದೆ. ತಮಿಳುನಾಡು ಮೂಲದ ವಿನೋದ್ ( 33 ) ಮೃತ ರ್ದುದೈವಿ. ಇನ್ನು ಬೈಕ್​ ಹಿಂಬದಿ ಕುಳಿತಿದ್ದ ಮಂಜುನಾಥ್​ಗೆ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು,  ಸ್ಥಳಿಯ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ನಿರ್ಲಕ್ಷ್ಯಕ್ಕೆ ಓರ್ವ ವ್ಯಕ್ತಿ ಬಲಿ ಎಂದು ಸ್ಥಳೀಯರ ಆರೋಪ

ಹೌದು, ವಿಜಯಪುರ ಪಟ್ಟಣದ ಹೊರವಲಯದಲ್ಲಿ ರಾತ್ರಿ‌ ವೇಳೆ‌ ಎಲ್ಲೆಂದರಲ್ಲಿ ಲಾರಿಗಳನ್ನು ಪೊಲೀಸರು ನಿಲ್ಲಿಸಿ ಹಣ ವಸೂಲಿ ಮಾಡುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿಗಳು ಹೆದ್ದಾರಿ ಬದಿಯಲ್ಲಿ ನಿಲ್ಲುವ ಕಾರಣ ಗೊತ್ತಾಗದೆ ಪದೇ ಪದೇ ಅಪಘಾತ‌ವಾಗುತ್ತಿದೆ. ಡಾಬಾ ಹಾಗೂ ರಸ್ತೆಗೆ ಅಡ್ಡಲಾಗಿ ವಾಹನಗಳನ್ನು ನಿಲ್ಲಿಸಿದ್ರು, ಪೊಲೀಸರು ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ವಿಜಯಪುರ ಪೊಲೀಸರ ವಿರುದ್ದ ಸಾರ್ವಜನಿಕರ ಆಕ್ರೋಶ ಹೊರಹಾಕಿದ್ದಾರೆ. ಈ ಅಪಘಾತಕ್ಕೆ ಪೊಲೀಸರೇ ಕಾರಣವೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಕಾರ್​ನಿಂದ ಗುದ್ದಿ ವ್ಯಕ್ತಿಯ ಕೊಲೆ, ಅಪಘಾತವೆಂದು ಬಿಂಬಿಸಿ ಎಸ್ಕೆಪ್​ ಆಗಲು ಯತ್ನಿಸಿದ್ದ ಆರೋಪಿಗಳು ಅರೆಸ್ಟ್​

ಲಾರಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರಿನಲ್ಲಿದ್ದ ವ್ಯಕ್ತಿ ಸಾವು; ಆರೋಪಿ ಪರಾರಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲದಲ್ಲಿ ಲಾರಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರಿನಲ್ಲಿದ್ದ ವೆಂಕಟೇಶ್ ಎಂಬಾತ ಸಾವನ್ನಪ್ಪಿದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪಘಾತದ ಬಳಿಕವೂ ಲಾರಿ ಚಾಲಕ ಕಾರನ್ನು ಎಳೆದೊಯ್ಯುತ್ತಿದ್ದ. ಬಳಿಕ ಟಾರ್ಚ್ ಹಾಕಿ ಮೃತದೇಹವನ್ನು ನೋಡಿ ಲಾರಿ ಸಮೇತ ಚಾಲಕ ಪರಾರಿಯಾಗಿದ್ದನು. ಈ ದೃಶ್ಯ ಟೋಲ್​ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಅಪಘಾತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Tue, 31 October 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ