ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ವಿಜಯಪುರ ಪಟ್ಟಣದ ಹೊರವಲಯದಲ್ಲಿ ರಾತ್ರಿ‌ ವೇಳೆ‌ ಎಲ್ಲೆಂದರಲ್ಲಿ ಲಾರಿಗಳನ್ನು ಪೊಲೀಸರು ನಿಲ್ಲಿಸಿ ಹಣ ವಸೂಲಿ ಮಾಡುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಲಾರಿಗಳು ಹೆದ್ದಾರಿ ಬದಿಯಲ್ಲಿ ನಿಲ್ಲುವ ಕಾರಣ ಗೊತ್ತಾಗದೆ ಪದೇ ಪದೇ ಅಪಘಾತ‌ವಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ದೇವನಹಳ್ಳಿ ತಾಲೂಕಿನಲ್ಲಿ ಬೈಕ್​ ಅಪಘಾತ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 31, 2023 | 10:48 PM

ಬೆಂಗಳೂರು ಗ್ರಾಮಾಂತರ, ಅ.31: ನಿಂತಿದ್ದ ಕ್ಯಾಂಟರ್​ಗೆ ಹಿಂಬದಿಯಿಂದ ಬೈಕ್ ಡಿಕ್ಕಿ(Accident) ಹೊಡೆದ ಪರಿಣಾಮ‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೇವನಹಳ್ಳಿ ತಾಲೂಕಿನ ವಿಜಯಪುರ ಹೊರವಲಯದ ಹಾರ್ಡಿಪುರ ಬಳಿ ನಡೆದಿದೆ. ತಮಿಳುನಾಡು ಮೂಲದ ವಿನೋದ್ ( 33 ) ಮೃತ ರ್ದುದೈವಿ. ಇನ್ನು ಬೈಕ್​ ಹಿಂಬದಿ ಕುಳಿತಿದ್ದ ಮಂಜುನಾಥ್​ಗೆ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು,  ಸ್ಥಳಿಯ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ನಿರ್ಲಕ್ಷ್ಯಕ್ಕೆ ಓರ್ವ ವ್ಯಕ್ತಿ ಬಲಿ ಎಂದು ಸ್ಥಳೀಯರ ಆರೋಪ

ಹೌದು, ವಿಜಯಪುರ ಪಟ್ಟಣದ ಹೊರವಲಯದಲ್ಲಿ ರಾತ್ರಿ‌ ವೇಳೆ‌ ಎಲ್ಲೆಂದರಲ್ಲಿ ಲಾರಿಗಳನ್ನು ಪೊಲೀಸರು ನಿಲ್ಲಿಸಿ ಹಣ ವಸೂಲಿ ಮಾಡುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಾರಿಗಳು ಹೆದ್ದಾರಿ ಬದಿಯಲ್ಲಿ ನಿಲ್ಲುವ ಕಾರಣ ಗೊತ್ತಾಗದೆ ಪದೇ ಪದೇ ಅಪಘಾತ‌ವಾಗುತ್ತಿದೆ. ಡಾಬಾ ಹಾಗೂ ರಸ್ತೆಗೆ ಅಡ್ಡಲಾಗಿ ವಾಹನಗಳನ್ನು ನಿಲ್ಲಿಸಿದ್ರು, ಪೊಲೀಸರು ಮಾತ್ರ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ವಿಜಯಪುರ ಪೊಲೀಸರ ವಿರುದ್ದ ಸಾರ್ವಜನಿಕರ ಆಕ್ರೋಶ ಹೊರಹಾಕಿದ್ದಾರೆ. ಈ ಅಪಘಾತಕ್ಕೆ ಪೊಲೀಸರೇ ಕಾರಣವೆಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಕಾರ್​ನಿಂದ ಗುದ್ದಿ ವ್ಯಕ್ತಿಯ ಕೊಲೆ, ಅಪಘಾತವೆಂದು ಬಿಂಬಿಸಿ ಎಸ್ಕೆಪ್​ ಆಗಲು ಯತ್ನಿಸಿದ್ದ ಆರೋಪಿಗಳು ಅರೆಸ್ಟ್​

ಲಾರಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರಿನಲ್ಲಿದ್ದ ವ್ಯಕ್ತಿ ಸಾವು; ಆರೋಪಿ ಪರಾರಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲದಲ್ಲಿ ಲಾರಿ ಡಿಕ್ಕಿಯಾಗಿ ಸ್ವಿಫ್ಟ್​ ಕಾರಿನಲ್ಲಿದ್ದ ವೆಂಕಟೇಶ್ ಎಂಬಾತ ಸಾವನ್ನಪ್ಪಿದ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪಘಾತದ ಬಳಿಕವೂ ಲಾರಿ ಚಾಲಕ ಕಾರನ್ನು ಎಳೆದೊಯ್ಯುತ್ತಿದ್ದ. ಬಳಿಕ ಟಾರ್ಚ್ ಹಾಕಿ ಮೃತದೇಹವನ್ನು ನೋಡಿ ಲಾರಿ ಸಮೇತ ಚಾಲಕ ಪರಾರಿಯಾಗಿದ್ದನು. ಈ ದೃಶ್ಯ ಟೋಲ್​ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಅಪಘಾತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:43 pm, Tue, 31 October 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ