ಬೆಂಗಳೂರು ಗ್ರಾಮಾಂತರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

ದೊಡ್ಡಬಳ್ಳಾಪುರ(Doddaballapura) ನಗರದ ರೋಜಿಪುರದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ವಿಷಸೇವಿಸಿ ಪರ್ವೀಜ್ ಪಾಷಾ(38) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ವೃತ್ತಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದ ಮೃತ ಪರ್ವೀಜ್, ಹಲವರಿಂದ ಬಡ್ಡಿಗೆ ಸಾಲವಾಗಿ ಹಣ ಪಡೆದಿದ್ದ ಎನ್ನಲಾಗಿದೆ.

ಬೆಂಗಳೂರು ಗ್ರಾಮಾಂತರ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ
ಮೃತ ವ್ಯಕ್ತಿ
Edited By:

Updated on: Jun 28, 2024 | 4:10 PM

ಬೆಂಗಳೂರು ಗ್ರಾಮಾಂತರ, ಜೂ.28: ಬಡ್ಡಿ ವ್ಯವಹಾರದ ಕಾಟದಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರ(Doddaballapura) ನಗರದ ರೋಜಿಪುರದಲ್ಲಿ ನಡೆದಿದೆ. ಸಾಲಗಾರರ ಕಿರುಕುಳಕ್ಕೆ ಬೇಸತ್ತು ವಿಷಸೇವಿಸಿ ಪರ್ವೀಜ್ ಪಾಷಾ(38) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ವೃತ್ತಿಯಲ್ಲಿ ಮೆಕ್ಯಾನಿಕ್ ಕೆಲಸ ಮಾಡಿಕೊಂಡಿದ್ದ ಮೃತ ಪರ್ವೀಜ್, ಹಲವರಿಂದ ಬಡ್ಡಿಗೆ ಸಾಲವಾಗಿ ಹಣ ಪಡೆದಿದ್ದ. ಇದೀಗ ಸಾಲಗಾರರ ನಿರಂತರ ಕಿರುಕುಳದಿಂದ ಬೇಸತ್ತು ಮನೆಯಲ್ಲಿ ವಿಷಸೇವಿಸಿ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಿಸ್ ಫೈರ್​ ನಿಂದ ಬಾಲಕ ಸಾವು

ಚಿತ್ರದುರ್ಗ: ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ನುಂಕಿಮಲೆ ಬೆಟ್ಟದಲ್ಲಿ ಮಿಸ್ ಫೈರ್​ನಿಂದ ಬಾಲಕ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೊಳಕಾಲ್ಮೂರಿನ ಕೋಣೆ ಬಡಾವಣೆಯ ಮಹೇಶ್(14) ಮೃತ ಬಾಲಕ. ನುಂಕಿಮಲೆ ಬೆಟ್ಟದಲ್ಲಿ 3 ತಿಂಗಳ ಹಿಂದೆ ಬೇಟೆಗೆ ತೆರಳಿದ್ದ ವೇಳೆ ಮಿಸ್ ಫೈರ್​ನಿಂದ ಬಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದ. ಬಾಲಕ ಸಾವಿನ ಬಳಿಕ ಶವವನ್ನ ಆರೋಪಿಗಳು ಸುಟ್ಟು ಹಾಕಿದ್ದರು.

ಇದನ್ನೂ ಓದಿ:ಚಿಕ್ಕ ವಯಸ್ಸಿನಲ್ಲೇ ಮಂಗಳಮುಖಿಯರ ಸ್ನೇಹ ಬೆಳೆಸಿದ್ದ ಯುವಕ ಏಕಾಏಕಿ ಆತ್ಮಹತ್ಯೆಗೆ ಶರಣು!

ಮಾರ್ಚ್ 3, 2024ರಂದು ನಡೆದಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಬಂದೂಕಿನೊಂದಿಗೆ ಬೇಟೆಗೆ ತೆರಳಿದ್ದ ಬಾಲಕ ಮಹೇಶ್​ಗೆ ಆಕಸ್ಮಿಕವಾಗಿ ಗುಂಡು ಹೊಕ್ಕಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಸುಟ್ಟು ಹಾಕಿದ್ದ ಹೊನ್ನೂರಸ್ವಾಮಿ, ನಾಗರಾಜ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು, ಈ ಕುರಿತು ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ