ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿ ಬೈಕ್​ಗೆ ಡಿಕ್ಕಿ ಹೊಡೆದ ಕಾರು; ಇಬ್ಬರ ಸಾವು

ಹೊಸಕೋಟೆ-ಚಿಂತಾಮಣಿ ರಾಜ್ಯ ಹೆದ್ದಾರಿ(Hoskote-chintamani State Highway) ಯಲ್ಲಿ ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಿಗೆ ಬೈಕ್​ ಡಿಕ್ಕಿ(Accident)ಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಕುರಿತು ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿ ಬೈಕ್​ಗೆ ಡಿಕ್ಕಿ ಹೊಡೆದ ಕಾರು; ಇಬ್ಬರ ಸಾವು
ಅಪಘಾತದಲ್ಲಿ ಮೃತಪಟ್ಟವರು
Edited By:

Updated on: Jun 06, 2024 | 4:00 PM

ಬೆಂಗಳೂರು ಗ್ರಾಮಾಂತರ, ಜೂ.06: ಅಪಘಾತ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಿಗೆ ಬೈಕ್​ ಡಿಕ್ಕಿ(Accident)ಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸಕೋಟೆ-ಚಿಂತಾಮಣಿ ರಾಜ್ಯ ಹೆದ್ದಾರಿ(Hoskote-chintamani State Highway) ಯಲ್ಲಿ ಸಂಭವಿಸಿದೆ. ಬೆಂಗಳೂರಿನ ಶಿವಾಜಿನಗರ ನಿವಾಸಿ ಮೊಹಮ್ಮದ್ ಫೈಜ್(18) ಹಾಗೂ ಕಣ್ಣೂರಹಳ್ಳಿ ನಿವಾಸಿ ಜಗದೀಶ್(30) ಮೃತಪಟ್ಟ ಬೈಕ್ ಸವಾರರು. ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಮಾಡಿ ಕಾರು ಸಮೇತ ಎಸ್ಕೇಪ್ ಆಗಲು ಯತ್ನಿಸಿದ್ದು, ಪರಾರಿಯಾಗುವ ಭರದಲ್ಲಿ ಮತ್ತೆರಡು ಬೈಕ್​ಗಳಿಗೆ ಕಾರು ಗುದ್ದಿದೆ. ಅದರ ರಭಸಕ್ಕೆ ಈ ದುರ್ಘಟನೆ ನಡೆದಿದೆ.

ಇನ್ನು ಅಬ್ಬಾಸ್, ಹಬ್ಬಾಸ್ ಪಾಷ ಮತ್ತು ಅಬುಜರ್ ಎಂಬುವವರಿಗೆ ಗಾಯಾವಾಗಿದ್ದು, ಕೂಡಲೇ ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ. ಐ20 ಕಾರಿನಲ್ಲಿ ಬಂದ ಚಾಲಕ ಪ್ರಗತೀಶ್ ರಾವ್ ಎಂಬಾತ ಅಜಾಗರೂಕತೆಯಿಂದ ಕಾರು ಚಲಾಯಿಸಿ ಇಬ್ಬರ ಪ್ರಾಣವನ್ನು ತೆಗೆದಿದ್ದಾನೆ. ಇನ್ನು ಕುಡಿದ ಅಮಲಿನಲ್ಲಿ ಕಾರು ಅಡ್ಡಾದಿಡ್ಡಿ ಚಲಾಯಿಸಿ ಅಪಘಾತ ಮಾಡಿದ ಆರೋಪ ಕೇಳಿಬಂದಿದೆ.

ಇದನ್ನೂ ಓದಿ:ಕಲಬುರಗಿ: ಕಮಲಾಪುರ ಬಳಿ ಭೀಕರ ಅಪಘಾತ, ಮೂವರು ಸಾವು

 ನ್ಯಾಯಕ್ಕಾಗಿ ಶವಾಗಾರದ ಬಳಿ ಪ್ರತಿಭಟನೆ

ಘಟನೆ ಸಂಬಂಧ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಮೃತರ ಕುಟುಂಬಗಳಿಗೆ ನ್ಯಾಯಕೊಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಈ ಹಿನ್ನಲೆ ಹೊಸಕೋಟೆ ಶವಾಗಾರದ ಬಳಿ ಮೃತ ಜಗಧೀಶ್ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:58 pm, Thu, 6 June 24

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us