AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನೇಕಲ್: ಇಲಿ ಬಿದ್ದ ಪಲ್ಯ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ

ಇತ್ತೀಚೆಗೆ ಆಹಾರ ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿವೆ. ಅದರಂತೆ ಇಂದು(ಜೂ.06) ಬೆಂಗಳೂರಿನ ಜಿಗಣಿ (Jigani) ಸಮೀಪದ ಎಸ್.ವ್ಯಾಸ ಯೂನಿವರ್ಸಿಟಿ(S-VYASA UNIVERSITY)ಯಲ್ಲಿ ಇಲಿ ಬಿದ್ದಿದ್ದ ಪಲ್ಯ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ವಾಂತಿ ಮಾಡಿದ ಘಟನೆ ನಡೆದಿದೆ. ಇತ್ತ ರಾಯಚೂರಿನಲ್ಲಿಯೂ ಫುಡ್ ಪಾಯಿಸನ್‌ನಿಂದ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.

ಆನೇಕಲ್: ಇಲಿ ಬಿದ್ದ ಪಲ್ಯ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ
ಇಲಿ ಬಿದ್ದ ಪಲ್ಯ ಸೇವಿಸಿ ಕಾಲೇಜು ವಿದ್ಯಾರ್ಥಿಗಳಿಗೆ ವಾಂತಿ
ರಾಮು, ಆನೇಕಲ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jun 06, 2024 | 5:00 PM

Share

ಆನೇಕಲ್, ಜೂ.06: ಇಲಿ ಬಿದ್ದಿದ್ದ ಪಲ್ಯ ಸೇವಿಸಿ ಕಾಲೇಜು ವಿದ್ಯಾರ್ಥಿಗಳು ವಾಂತಿ ಮಾಡಿದ ಘಟನೆ ಜಿಗಣಿ(Jigani) ಸಮೀಪದ ಎಸ್.ವ್ಯಾಸ ಯೂನಿವರ್ಸಿಟಿ(S-VYASA UNIVERSITY)ಯಲ್ಲಿ ನಡೆದಿದೆ. ಹೌದು, ನಿನ್ನೆ(ಜೂ.05) ರಾತ್ರಿ ಕಾಲೇಜು ಹಾಸ್ಟೆಲ್ ನಲ್ಲಿ ಊಟ ತಿಂದ ಕೂಡಲೇ ಕೆಲ ವಿದ್ಯಾ ರ್ಥಿಗಳಲ್ಲಿ ವಾಂತಿ ಕಾಣಿಸಿಕೊಂಡಿದೆ. ಬಳಿಕ ಊಟವನ್ನ ಪರಿಶೀಲನೆ ನಡೆಸಿದಾಗ ಇಲಿ ಕಂಡುಬಂದಿದೆ. ಪಲ್ಯದಲ್ಲಿ ಇಲಿ ಬಿದ್ದಿದ್ದನ್ನ ಕಂಡು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿದ್ದು, ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿಗಳ ಮನವೊಲಿಸಿದ ಕಾಲೇಜು ಆಡಳಿತ ಮಂಡಳಿ

ಇನ್ನು ಕಾಲೇಜು ಅಡಳಿತ ಮಂಡಳಿ ಬೇಜಾವಾಬ್ದಾರಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ ಹೊರಹಾಕಿದ್ದು, ಇನ್ನು ಮುಂದೆ ಈ ರೀತಿಯ ತಪ್ಪುಗಳ ಆಗದಂತೆ ನೋಡಿಕೊಳ್ಳುವುದಾಗಿ ಕಾಲೇಜು ಆಡಳಿತ ಮಂಡಳಿ ಹೇಳಿ, ವಿದ್ಯಾರ್ಥಿಗಳ ಮನವೊಲಿಸಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ತರಗತಿಗೆ ಹಾಜರಾಗಿದ್ದಾರೆ.

ಇದನ್ನೂ ಓದಿ:ಬೆಂಗಳೂರು ವಿವಿ ಹಾಸ್ಟೆಲ್​ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ: ರಸ್ತೆ ತಡೆದು ಧರಣಿ

ರಾಯಚೂರಿನಲ್ಲಿ ಫುಡ್ ಪಾಯಿಸನ್‌ನಿಂದ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ರಾಯಚೂರು: ರಾಯಚೂರು ನಗರದ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ಲೇಡಿಸ್ ಹಾಸ್ಟೆಲ್‌ನಲ್ಲಿ ಫುಡ್ ಪಾಯಿಸನ್‌ನಿಂದ 20 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥರಾದ ಘಟನೆ ನಡೆದಿದೆ. ಇದೀಗ ಐದು ವಿದ್ಯಾರ್ಥಿನಿಯರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ(ಜೂ.05) ಸಂಜೆ ತಿಂದ ಪಾನಿ ಪೂರಿ, ರಾತ್ರಿ ಊಟ ಎಗ್ ಕರಿ, ರೈಸ್​ನಿಂದ ಒಟ್ಟು 95 ವಿದ್ಯಾರ್ಥಿನಿಯರಲ್ಲಿ 20 ಕ್ಕೂ ಹೆಚ್ಚು ಜನರಿಗೆ ವಾಂತಿ ಭೇದಿ ಶುರುವಾಗಿತ್ತು. ಸದ್ಯ ವಿದ್ಯಾರ್ಥಿನಿಯರು ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಇಂದು(ಜೂ.06) ಬೆಳಿಗ್ಗೆ ಟೊಮ್ಯಾಟೊ ಬಾತ್, ಮಧ್ಯಾಹ್ನದ ಅನ್ನ ಸಾಂಬಾರ್ ಊಟ ಸಹ ಜೀರ್ಣವಾಗಿರಲಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Thu, 6 June 24

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ