AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಡಿಕ್ಕಿ ಹೊಡೆದು ಕೆಳಗೆ ಬಿದ್ದವನ ಮೇಲೆ ಹರಿದ ಟಿಪ್ಪರ್; ಮಗ ಸಾವು, ತಾಯಿ ಪಾರು

ಸಾವು ಯಾವಾಗ ಬರುತ್ತದೆ ಎಂದು ಊಹೆ ಮಾಡಲು ಸಾಧ್ಯವಿಲ್ಲ. ಹೌದು, ತಾಯಿ-ಮಗ ಬೈಕ್​ನಲ್ಲಿ ಬರುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬಾಲಕನ ಮೇಲೆ ಟಿಪ್ಪರ್​ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು(ಜು.17) ರಾತ್ರಿ ರಾಷ್ಟ್ರೀಯ ಹೆದ್ದಾರಿ4 ರ ಚಿಕ್ಕಬಿದರಕಲ್ಲು(Chikkabidarakallu) ಗ್ರಾಮದ ಬಳಿ ನಡೆದಿದೆ.

ಕಾರು ಡಿಕ್ಕಿ ಹೊಡೆದು ಕೆಳಗೆ ಬಿದ್ದವನ ಮೇಲೆ ಹರಿದ ಟಿಪ್ಪರ್; ಮಗ ಸಾವು, ತಾಯಿ ಪಾರು
ಮೃತ ಬಾಲಕ
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ| Edited By: ಕಿರಣ್ ಹನುಮಂತ್​ ಮಾದಾರ್|

Updated on:Jul 17, 2024 | 9:58 PM

Share

ಬೆಂಗಳೂರು ಗ್ರಾಮಾಂತರ, ಜು.17: ಬೈಕ್​ಗೆ ಕಾರು ಡಿಕ್ಕಿಯಾಗಿ ಕೆಳಗೆ ಬಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದ ಘಟನೆ ರಾಷ್ಟ್ರೀಯ ಹೆದ್ದಾರಿ4 ರ ಚಿಕ್ಕಬಿದರಕಲ್ಲು(Chikkabidarakallu) ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್​ ಬೈಕ್​ನಲ್ಲಿದ್ದ ತಾಯಿ ಪಾರಾಗಿದ್ದು, 12 ವರ್ಷದ ಬಾಲಕ ಸ್ಥಳದಲ್ಲೇ ಅಸುನೀಗಿದ್ದಾನೆ. ಇನ್ನು ಅಪಘಾತದ ಬಳಿಕ ಕಾರಿನ ಜೊತೆ ಚಾಲಕ ಎಸ್ಕೇಪ್, ಆಗಿದ್ದಾನೆ. ಸಧ್ಯ ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ

ಆ್ಯಕ್ಟೀವಾ ಬೈಕ್​ನಲ್ಲಿ ತಾಯಿ-ಮಗ ಹೋಗುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿ, ಕೆಳಗೆ ಬಿದ್ದ ಬಾಲಕನ ಮೇಲೆ ಚಾಲಕನ ನಿಯಂತ್ರಣ ಸಿಗದೆ ಟಿಪ್ಪರ್ ಹರಿದಿದೆ. ಬೈಕ್​ನ ಬಲಭಾಗಕ್ಕೆ ಬಿದ್ದಿದ್ದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್​ನ ಎಡ ಭಾಗಕ್ಕೆ ಬಿದ್ದಿದ್ದ ತಾಯಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಆದರೆ, ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಸ್ಥಳದಿಂದ ಎಸ್ಕೇಫ್​ ಆಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿ ಕಾರು ಚಾಲಕನ ಸೆರೆಗೆ ಶೋಧಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮುಂದುವರಿದ ಪ್ರವಾಸಿಗರ ಹುಚ್ಚಾಟ; ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ

ರಸ್ತೆ ದಾಟುತ್ತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿ; ಮಹಿಳೆ ಸಾವು

ಹಾವೇರಿ: ವಾಲ್ಮೀಕಿ‌ ವೃತ್ತದ ಬಳಿ ಸರ್ಕಾರಿ ಬಸ್​ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಇಜಾರಿ ಲಕಮಾಪುರದ ನಿವಾಸಿ ಜಯಲಕ್ಷ್ಮೀ ಕೂಳೇನೂರು(38) ಮೃತರು. ಇನ್ನು ಮೃತ ಮಹಿಳೆ, ಸರ್ಕಾರಿ ಮಹಿಳಾ ಹಾಸ್ಟೆಲ್ ನಲ್ಲಿ ಅಡುಗೆ ಮಾಡಲು ಬಂದಿದ್ದರು. ಪತಿ ರಸ್ತೆ ಪಕ್ಕ ನಿಂತು ಕರೆದರೂ ಎಂದು ರಸ್ತೆ ದಾಟಲು ಹೋಗಿದ್ದಾಗ, ಅತ್ತ ಹುಬ್ಬಳ್ಳಿಯಿಂದ ಹಾವೇರಿಯತ್ತ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಈ ಕುರಿತು ಹಾವೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Wed, 17 July 24

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್