ಕಾರು ಡಿಕ್ಕಿ ಹೊಡೆದು ಕೆಳಗೆ ಬಿದ್ದವನ ಮೇಲೆ ಹರಿದ ಟಿಪ್ಪರ್; ಮಗ ಸಾವು, ತಾಯಿ ಪಾರು

ಸಾವು ಯಾವಾಗ ಬರುತ್ತದೆ ಎಂದು ಊಹೆ ಮಾಡಲು ಸಾಧ್ಯವಿಲ್ಲ. ಹೌದು, ತಾಯಿ-ಮಗ ಬೈಕ್​ನಲ್ಲಿ ಬರುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದು ಕೆಳಗೆ ಬಿದ್ದ ಬಾಲಕನ ಮೇಲೆ ಟಿಪ್ಪರ್​ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು(ಜು.17) ರಾತ್ರಿ ರಾಷ್ಟ್ರೀಯ ಹೆದ್ದಾರಿ4 ರ ಚಿಕ್ಕಬಿದರಕಲ್ಲು(Chikkabidarakallu) ಗ್ರಾಮದ ಬಳಿ ನಡೆದಿದೆ.

ಕಾರು ಡಿಕ್ಕಿ ಹೊಡೆದು ಕೆಳಗೆ ಬಿದ್ದವನ ಮೇಲೆ ಹರಿದ ಟಿಪ್ಪರ್; ಮಗ ಸಾವು, ತಾಯಿ ಪಾರು
ಮೃತ ಬಾಲಕ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 17, 2024 | 9:58 PM

ಬೆಂಗಳೂರು ಗ್ರಾಮಾಂತರ, ಜು.17: ಬೈಕ್​ಗೆ ಕಾರು ಡಿಕ್ಕಿಯಾಗಿ ಕೆಳಗೆ ಬಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದ ಘಟನೆ ರಾಷ್ಟ್ರೀಯ ಹೆದ್ದಾರಿ4 ರ ಚಿಕ್ಕಬಿದರಕಲ್ಲು(Chikkabidarakallu) ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್​ ಬೈಕ್​ನಲ್ಲಿದ್ದ ತಾಯಿ ಪಾರಾಗಿದ್ದು, 12 ವರ್ಷದ ಬಾಲಕ ಸ್ಥಳದಲ್ಲೇ ಅಸುನೀಗಿದ್ದಾನೆ. ಇನ್ನು ಅಪಘಾತದ ಬಳಿಕ ಕಾರಿನ ಜೊತೆ ಚಾಲಕ ಎಸ್ಕೇಪ್, ಆಗಿದ್ದಾನೆ. ಸಧ್ಯ ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆ ವಿವರ

ಆ್ಯಕ್ಟೀವಾ ಬೈಕ್​ನಲ್ಲಿ ತಾಯಿ-ಮಗ ಹೋಗುತ್ತಿದ್ದರು. ಈ ವೇಳೆ ಕಾರು ಡಿಕ್ಕಿಯಾಗಿ, ಕೆಳಗೆ ಬಿದ್ದ ಬಾಲಕನ ಮೇಲೆ ಚಾಲಕನ ನಿಯಂತ್ರಣ ಸಿಗದೆ ಟಿಪ್ಪರ್ ಹರಿದಿದೆ. ಬೈಕ್​ನ ಬಲಭಾಗಕ್ಕೆ ಬಿದ್ದಿದ್ದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್​ನ ಎಡ ಭಾಗಕ್ಕೆ ಬಿದ್ದಿದ್ದ ತಾಯಿ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಆದರೆ, ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಸ್ಥಳದಿಂದ ಎಸ್ಕೇಫ್​ ಆಗಿದ್ದಾನೆ. ಈ ಕುರಿತು ಪ್ರಕರಣ ದಾಖಲಿಸಿ ಕಾರು ಚಾಲಕನ ಸೆರೆಗೆ ಶೋಧಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ:ಚಿಕ್ಕಮಗಳೂರಿನಲ್ಲಿ ಮುಂದುವರಿದ ಪ್ರವಾಸಿಗರ ಹುಚ್ಚಾಟ; ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಅಪಘಾತ

ರಸ್ತೆ ದಾಟುತ್ತಿದ್ದ ವೇಳೆ ಸಾರಿಗೆ ಬಸ್ ಡಿಕ್ಕಿ; ಮಹಿಳೆ ಸಾವು

ಹಾವೇರಿ: ವಾಲ್ಮೀಕಿ‌ ವೃತ್ತದ ಬಳಿ ಸರ್ಕಾರಿ ಬಸ್​ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಇಜಾರಿ ಲಕಮಾಪುರದ ನಿವಾಸಿ ಜಯಲಕ್ಷ್ಮೀ ಕೂಳೇನೂರು(38) ಮೃತರು. ಇನ್ನು ಮೃತ ಮಹಿಳೆ, ಸರ್ಕಾರಿ ಮಹಿಳಾ ಹಾಸ್ಟೆಲ್ ನಲ್ಲಿ ಅಡುಗೆ ಮಾಡಲು ಬಂದಿದ್ದರು. ಪತಿ ರಸ್ತೆ ಪಕ್ಕ ನಿಂತು ಕರೆದರೂ ಎಂದು ರಸ್ತೆ ದಾಟಲು ಹೋಗಿದ್ದಾಗ, ಅತ್ತ ಹುಬ್ಬಳ್ಳಿಯಿಂದ ಹಾವೇರಿಯತ್ತ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಈ ಕುರಿತು ಹಾವೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:57 pm, Wed, 17 July 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us