AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲು ಹರಿದು 46 ಕುರಿಗಳ ಮಾರಣ ಹೋಮ, 15ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಕುರಿ ಕಳಕೊಂಡ ರೈತ ಕಂಗಾಲು

ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ಬಳಿಯಿರುವ ರೈಲ್ವೆ ಹಳಿಯನ್ನು ದಾಟುತ್ತಿದ್ದ ಕುರಿಗಳ ಮೇಲೆ ರೈಲು ಹರಿದಿದ್ದು, ಸ್ಥಳದಲ್ಲೇ 46 ಕುರಿಗಳು ಸಾವನ್ನಪ್ಪಿವೆ. ಇತ್ತ ಲಕ್ಷಾಂತರ ಮೌಲ್ಯದ ಕುರಿಗಳನ್ನು ಕಳೆದುಕೊಂಡ ರೈತ ಕಂಗಾಲಾಗಿದ್ದು, ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ರೈಲು ಹರಿದು 46 ಕುರಿಗಳ ಮಾರಣ ಹೋಮ, 15ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಕುರಿ ಕಳಕೊಂಡ ರೈತ ಕಂಗಾಲು
ರೈಲು ಹರಿದು 46 ಕುರಿಗಳ ಮಾರಣ ಹೋಮ
ಬಿ ಮೂರ್ತಿ, ನೆಲಮಂಗಲ
| Edited By: ಕಿರಣ್ ಹನುಮಂತ್​ ಮಾದಾರ್|

Updated on:May 14, 2024 | 7:29 PM

Share

ಬೆಂಗಳೂರು ಗ್ರಾಮಾಂತರ, ಮೇ.14: ರೈಲ್ವೆ ಹಳಿ ದಾಟುವ ವೇಳೆ ಕುರಿಮಂದೆ ಮೇಲೆ ರೈಲು ಹರಿದ ಪರಿಣಾಮ 46 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ(Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ರೈಲ್ವೆ ಹಳಿಯ ಮೇಲೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ಮೂಲದ ರೈತ ದೇವರಾಜು ಅವರಿಗೆ ಸೇರಿದ ಕುರಿಗಳು ಇದಾಗಿದ್ದು, 15 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಕುರಿಗಳನ್ನ ಕಳದೆಕೊಂಡ ರೈತ, ಕಂಗಾಲಾಗಿದ್ದಾನೆ. ಕುರಿಗಳು ಕೆರೆಯಲ್ಲಿ ನೀರು ಕುಡಿದು ವಾಪಸ್ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಚಲಿಸುತ್ತಿದ ಕ್ಯಾಂಟರ್​ ವಾಹನದಲ್ಲಿ ಬೆಂಕಿ

ವಿಜಯಪುರ: ಸಿಂದಗಿ ತಾಲೂಕಿನ ಮೊರಟಗಿ ಗ್ರಾಮದ ಬಳಿ ಚಲಿಸುತ್ತಿದ್ದ ಕ್ಯಾಂಟರ್​ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದೆ. ಕೆಎ 02, ಎಜೆ 9127 ಸಂಖ್ಯೆಯ ಕ್ಯಾಂಟರ್​ ವಾಹನದ ಕ್ಯಾಬಿನ್ ಮತ್ತು ಇಂಜಿನ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಇದು ಕಲಬುರಗಿಯಿಂದ ಬೆಂಗಳೂರಿಗೆ ತಂಪು ಪಾನೀಯಾದ ಖಾಲಿ ಬಾಟಲಿಯನ್ನು ಸಾಗಿಸುತ್ತಿತ್ತು. ಈ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಆಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ರಾಯಚೂರಿನಲ್ಲಿ ಎಮ್ಮೆಗೆ ಡಿಕ್ಕಿಯಾಗಿ ಉರುಳಿಬಿದ್ದ ಖಾಸಗಿ ಬಸ್! ಚಿತ್ರದುರ್ಗದಲ್ಲಿ ಹೈಬ್ರೀಡ್ ಜೋಳದ ಚಿಗುರು ಸೇವಿಸಿ 11 ಕುರಿಗಳು ಸಾವು

ಉಡುಪಿಯಲ್ಲಿ ಹೊತ್ತಿ ಉರಿದ ಬಿರಿಯಾನಿ ಹಟ್ ಹೋಟೆಲ್​

ಉಡುಪಿ: ನಗರದ ಕರಾವಳಿ ಜಂಕ್ಷನ್ ಬಳಿ ಇರುವ ಬಿರಿಯಾನಿ ಹಟ್ ಹೋಟೆಲ್​ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಅವರು ಬೆಂಕಿ ನಂದಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಮಾಲೀಕರು ವ್ಯಾಪಾರವನ್ನು ಸ್ಥಗಿತಗೊಳಿಸಿದ್ದರು. ಇದೀಗ ಅಗ್ನಿ ಅವಘಡ ನಡೆದಿದ್ದು, ಶಾರ್ಟ್ ​​ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 pm, Tue, 14 May 24

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?