AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಸ್ತು ಹೆಸರಿನಲ್ಲಿ, ಬರಗಾಲದ ನಡುವೆ ನೂತನ ಕಛೇರಿಗಾಗಿ ದುಂದು ವೆಚ್ಚ ಮಾಡಿದರಾ ತಹಶೀಲ್ದಾರ್ ಮೇಡಂ?

ಒಂದೆಡೆ ಬರಗಾಲ ಮತ್ತೊಂದೆಡೆ ಕಂದಾಯ ಕೆಲಸಗಳ ವಿಳಂಬದಿಂದ ದೊಡ್ಡಬಳ್ಳಾಪುರ ಜನರು ಪರದಾಡ್ತಿದ್ರೆ ಇತ್ತ ಅಧಿಕಾರಿಗಳು ಮಾತ್ರ ಕಛೇರಿ ಬದಲಾವಣೆ ಮಾಡಿಕೊಂಡು ಜನರ ಕೈಗೆ ಸಿಗದಿರುವುದು ನಿಜಕ್ಕೂ ವಿಪರ್ಯಾಸ. ಇನ್ನಾದರೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹಾಗೂ ಸಚಿವರು ಇತ್ತ ಗಮನಹರಿಸಿ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಿಸಬೇಕಿದೆ.

ವಾಸ್ತು ಹೆಸರಿನಲ್ಲಿ, ಬರಗಾಲದ ನಡುವೆ ನೂತನ ಕಛೇರಿಗಾಗಿ ದುಂದು ವೆಚ್ಚ ಮಾಡಿದರಾ ತಹಶೀಲ್ದಾರ್ ಮೇಡಂ?
ಬರಗಾಲದ ನಡುವೆ ನೂತನ ಕಛೇರಿಗಾಗಿ ದುಂದು ವೆಚ್ಚ ಮಾಡಿದರಾ ತಹಶೀಲ್ದಾರ್ ಮೇಡಂ?
ನವೀನ್ ಕುಮಾರ್ ಟಿ
| Edited By: |

Updated on: Mar 08, 2024 | 10:16 AM

Share

ಅದು ದಶಕಗಳಿಂದ ಆ ತಾಲೂಕಿನ ಜನರ ಸಮಸ್ಯೆಗೆ ಸ್ವಂದಿಸುತ್ತಿದ್ದ ತಾಲೂಕು ದಂಡಾಧಿಕಾರಿಗಳ ನಾಡ ಕಛೇರಿ. ಆದ್ರೆ ದಶಕಗಳಿಂದ ಇದ್ದ ಆ ಕಛೇರಿಯನ್ನ ಇತ್ತೀಚೆಗಷ್ಟೆ ಬಂದ ತಹಶೀಲ್ದಾರ್ ವಾಸ್ತು ಹೆಸರಲ್ಲಿ ಶಿಫ್ಟ್​​ ಮಾಡಿಸಿರುವ ಆರೋಪ ಕೇಳಿ ಬಂದಿದೆ. ಜೊತೆಗೆ ಬರಗಾಲದ ನಡುವೆ ಸಾರ್ವಜನಿಕರ ಹಣವನ್ನ ತಹಶೀಲ್ದಾರ್ ದುಂದುವೆಚ್ಚ ಮಾಡಿಸಿದ್ರಾ ಅನ್ನೂ ಶಂಕೆ ವ್ಯಕ್ತವಾಗಿದೆ. ಅದು ಎಲ್ಲಿ ಅನ್ನೂ ವಿವರ ಇಲ್ಲಿದೆ.

ಎಸಿ, ವುಡ್ ವರ್ಕ್, ರೆಸ್ಟ್ ರೂಂ ಅಂತೆಲ್ಲ ಸುಸಜ್ಜಿತವಾಗಿಯೇ ಇದೆ ಆ ಕೊಠಡಿ. ಇಷ್ಟು ಸುಸಜ್ಜಿತ ಕೊಠಡಿಯಿದ್ದರೂ ಇಲ್ಲಿ ಕೆಳ ಹಂತದ ಸಿಬ್ಬಂದಿ ಟೇಬಲ್ ಹಾಕಿಕೊಂಡು ಕೆಲಸ ಮಾಡ್ತಿದ್ರೆ ಇತ್ತ ತಹಶೀಲ್ದಾರ್ ನೂತನ ಕೊಠಡಿಯಲ್ಲಿ ತಮ್ಮ ಕಛೇರಿ ತೆರೆದಿದ್ದಾರೆ. ಹೊಸ ಕಛೇರಿ ಹೊಸ ತಹಶೀಲ್ದಾರ್ ಅಂತ ಹೊಸ ಕಛೇರಿ ಮುಂದೆ ಜನ ಗಂಟೆಗಟ್ಟಲೆ ಕಾದು ಕೂರುತ್ತಿದ್ರೆ ಇತ್ತ ತಹಶೀಲ್ದಾರ್ ಮೇಡಂ ಮಾತ್ರ ಮೊದಲನೆ ಮಹಡಿಯಲ್ಲಿ ಸಿಬ್ಬಂದಿ ಜೊತೆ ಕೂತು ಕೆಲಸ ಮಾಡ್ತಿದ್ದಾರೆ. ಅರೇ ಇದೇನಪ್ಪ ತಹಶಿಲ್ದಾರ್ ಇಲ್ಯಾಕೆ ಬಂದ್ರು ಅಂತ ಅವರನ್ನೆ ಕೇಳಿದ್ರೆ ಅವರು ಹೇಳೋದು ಡ್ರೈನೇಜ್ ಕಥೆಯನ್ನ.

ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ತಾಲೂಕು ಕಛೇರಿಯಲ್ಲಿ ಕಳೆದ ಹಲವು ದಶಕಗಳಿಂದ ಕಛೇರಿ ಒಳಗಡೆ ಬಂದ ಜನರಿಗೆ ಆರಂಭದಲ್ಲೆ ತಹಶೀಲ್ದಾರ್ ಸಿಗುವಂತೆ ಬಲ ಭಾಗದಲ್ಲಿ ತಹಶೀಲ್ದಾರ್ ಕಛೇರಿಯನ್ನ ಮಾಡಿದ್ರು. ಜೊತೆಗೆ ಕಳೆದ ಹಲವು ದಶಕಗಳಿಂದ ಇದೇ ತಹಶಿಲ್ದಾರ್ ಕಛೇರಿಯಲ್ಲಿ ಹತ್ತಾರು ಜನ ತಹಶೀಲ್ದಾರ್ಗಳು ಕರ್ತವ್ಯವನ್ನ ನಿರ್ವಹಿಸಿ ಜನರ ಕಷ್ಟಕ್ಕೆ ಸ್ವಂದಿಸುತ್ತಿದ್ರು.

ಆದ್ರೆ ಕಳೆದ ವರ್ಷ ಅಕ್ಟೋಬರ್ ನಲ್ಲಿ ದೊಡ್ಡಬಳ್ಳಾಪುರಕ್ಕೆ ನೂತನ ತಹಶೀಲ್ದಾರ್ ಆಗಿ ಬಂದ ವಿಭಾ ವಿದ್ಯಾ ರಾಥೋಡ್ ಎಂಬುವವರು ಕೆಲ ದಿನಗಳಷ್ಟೆ ಹಳೆ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಅಲ್ಲದೆ ಹಳೆ ಕಛೇರಿಯಲ್ಲಿ ಡ್ರೈನೇಜ್ ಪ್ರಾಬ್ಲಂ ಆಗಿದೆ ಅನ್ನೂ ನೆಪದಲ್ಲಿ ಕಳೆದ ನಾಲ್ಕು ತಿಂಗಳಿಂದ ಬೇರೆ ಕೊಠಡಿಗೆ ಕಛೇರಿಯನ್ನ ಸ್ಥಳಾಂತರ ಮಾಡಿದ್ದಾರೆ.

ಇನ್ನು ಸ್ಥಳಾಂತರ ಮಾಡಿದ ಹಳೆ ಕಛೇರಿ ಮುಂದೆ ಯಾವುದೇ ಬೋರ್ಡ್ ಸಹ ಹಾಕದಿರುವುದು ಹೊಸ ಕಛೇರಿಯಲ್ಲಿಯೂ ತಹಶೀಲ್ದಾರ್ ಕೂರುತ್ತಿಲ್ಲ. ಹೀಗಾಗಿ ನಿತ್ಯ ಕಛೇರಿಗೆ ಬರುವ ಸಾರ್ವಜನಿಕರು ತಹಶೀಲ್ದಾರ್ ಇಲ್ಲ ಅಂತ ವಾಪಸ್ ಆಗ್ತಿದ್ದು ಜನರ ಸಮಸ್ಯೆಗೆ ಸ್ವಂದಿಸುತ್ತಿಲ್ಲ ಅಂತ ಆಕ್ರೋಶ ಹೊರ ಹಾಕ್ತಿದ್ದಾರೆ.

Also Read: ಅಧಿಕಾರಿಗಳ ಅನುಮತಿಯಿಲ್ಲದೆ 6 ತಿಂಗಳ ಹಿಂದೆ ಮಾಡಿದ್ದ ಸಮಾಧಿ ಶಿಫ್ಟ್​​ ಮಾಡಲು ಯತ್ನ! ಹೀಗ್ಯಾಕೆ? ಈಗ್ಯಾಕೆ?

ಸಾವಿರಾರು ರೂಪಾಯಿ ಸಾರ್ವಜನಿಕರ ಹಣವನ್ನ ಖರ್ಚು ಮಾಡಿ ತಹಶಿಲ್ದಾರ್ ನೂತನ ಕಛೇರಿ ಮಾಡಿಕೊಂಡಿದ್ದು ಹೊಸ ಕಛೇರಿಯಲ್ಲು ಅವರು ಕೂರುತ್ತಿಲ್ಲ. ಜೊತೆಗೆ ಹಳೆ ಕಛೇರಿಯಲ್ಲಿ ಕೆಳ ಹಂತದ ಸಿಬ್ಬಂದಿ ಕೆಲಸ ಮಾಡಲು ಅವಕಾಶ ನೀಡಿ ತಹಶೀಲ್ದಾರ್ ಮಾತ್ರ ದಿನಕ್ಕೊಂದು ಕಛೇರಿಯಲ್ಲಿ ಕೂರುತ್ತಿದ್ದಾರಂತೆ.

ಹೀಗಾಗಿ ಜನರು ಸಮಸ್ಯೆ ಹೇಳಿಕೊಳ್ಳೋಣ ಅಂತ ಕಛೇರಿಗೆ ಬಂದ್ರೆ ತಹಶೀಲ್ದಾರ್ ಕಾಣಿಸುತ್ತಲೆ ಇಲ್ಲ ಅಂತ ಅಸಮಾಧಾನ ಹೊರ ಹಾಕಿದ್ದಾರೆ. ಇನ್ನು ಈ ಬಗ್ಗೆ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರನ್ನೆ ಕೇಳಿದ್ರೆ ಅಲ್ಲಿ ಕಳೆದ ಮಳೆಗಾಲದಲ್ಲಿ ಡ್ರೈನೇಜ್ ಸಮಸ್ಯೆಯಾಗಿತ್ತು. ಹೀಗಾಗಿ ಕಛೇರಿ ಶಿಫ್ಟ್​​ ಮಾಡಿದ್ದೇನೆ. ಜೊತೆಗೆ ನಾನು ಬೇರೆ ಕಡೆ ಕುಳಿತು ಕೆಲಸ ಮಾಡ್ತಿದ್ದೀನಿ. ವಾಸ್ತು ದೋಷ ಅಂತೇನೂ ಇಲ್ಲ ಅಂತಿದ್ದಾರೆ.

ಒಂದೆಡೆ ಬರಗಾಲ ಮತ್ತೊಂದೆಡೆ ಕಂದಾಯ ಕೆಲಸಗಳ ವಿಳಂಬದಿಂದ ಸಾರ್ವಜನಿಕರು ಪರದಾಡ್ತಿದ್ರೆ ಇತ್ತ ಅಧಿಕಾರಿಗಳು ಮಾತ್ರ ಕಛೇರಿ ಬದಲಾವಣೆ ಮಾಡಿಕೊಂಡು ಜನರ ಕೈಗೆ ಸಿಗದಿರುವುದು ನಿಜಕ್ಕೂ ವಿಪರ್ಯಾಸ. ಇನ್ನಾದರೂ ಜಿಲ್ಲಾಡಳಿತ ಹಾಗೂ ಸಚಿವರು ಇತ್ತ ಗಮನಹರಿಸಿ ಅಧಿಕಾರಿಗಳು ಜನರ ಸಮಸ್ಯೆಗೆ ಸ್ವಂದಿಸುವ ಕೆಲಸ ಮಾಡಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್