AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವರ, ಭುವನೇಶ್ವರದಲ್ಲಿ ವಧು: ಇಂಡಿಗೋ ವಿಮಾನದಿಂದ ಮದುವೆಗೆ ವಿಘ್ನದ ಆತಂಕ

ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಲವು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿವೆ. ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲಿ ಪರದಾಡುತ್ತಿದ್ದಾರೆ. ಭುವನೇಶ್ವರದಲ್ಲಿ ನಡೆಯಬೇಕಿದ್ದ ಮದುವೆಗೆ ತೆರಳಲು ಟಿಕೆಟ್ ಕಾಯ್ದಿರಿಸಿದ್ದ ವರನ ಕುಟುಂಬಕ್ಕೂ ವಿಮಾನ ವ್ಯತ್ಯಯದಿಂದ ಆತಂಕ ಎದುರಾಗಿದೆ. ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರಿನಲ್ಲಿ ವರ, ಭುವನೇಶ್ವರದಲ್ಲಿ ವಧು: ಇಂಡಿಗೋ ವಿಮಾನದಿಂದ ಮದುವೆಗೆ ವಿಘ್ನದ ಆತಂಕ
ಇಂಡಿಗೋ ವಿಮಾನ
ನವೀನ್ ಕುಮಾರ್ ಟಿ
| Edited By: |

Updated on:Dec 04, 2025 | 4:24 PM

Share

ದೇವನಹಳ್ಳಿ, ಡಿಸೆಂಬರ್​​ 04: ಕಳೆದ ಎರಡು ದಿನಗಳಿಂದ ಬೆಂಗಳೂರಿನ ಕೆಂಪೇಗೌಡ ವಿಮಾಣ ನಿಲ್ದಾಣದಿಂದ ಹಾರಾಟ ನಡೆಸಬೇಕಿದ್ದ ಇಂಡಿಗೋ ವಿಮಾನಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಹಲವು ವಿಮಾನಗಳ ಸಂಚಾರ ರದ್ದಾಗಿದೆ. ಹೀಗಾಗಿ ಜನರು ಏರ್​ಪೋರ್ಟ್​​ನಲ್ಲಿ ಪರದಾಟ ನಡೆಸುತ್ತಿರುವ ದೃಶ್ಯಗಳು ಕಂಡುಬಂದಿದ್ದು, ಸಂಸ್ಥೆಯ ವಿರುದ್ಧ ಪ್ರಯಾಣಿಕರು ಕಿಡಿ ಕಾರಿದ್ದಾರೆ. ಈ ನಡುವೆ ವಿಮಾನ ಹಾರಟದಲ್ಲಿನ ವ್ಯತ್ತಯದಿಂದ ಮದುವೆಯೊಂದಕ್ಕೂ ವಿಘ್ನದ ಆತಂಕ ಎದುರಾಗಿದೆ.

ಭುವನೇಶ್ವರದಲ್ಲಿ ಮಗನ ಮದುವೆ ಹಿನ್ನಲೆ ನಾಳೆ ಬೆಳಿಗ್ಗೆ 07.30ರ ವಿಮಾನಕ್ಕೆ ತಂದೆ ಮಹೇಂದ್ರ ಕುಮಾರ್​​ 110 ಟಿಕೆಟ್​​ ಬುಕ್​​ ಮಾಡಿದ್ದರು. ಒಂದು ಟಿಕೆಟ್​​ಗೆ ತಲಾ 7 ಸಾವಿರ ರೂಪಾಯಿ ಪಾವತಿಸಿದ್ದರು. ಇಂಡಿಗೋ ವಿಮಾನಗಳ ಹಾರಾಟದಲ್ಲಿನ ವ್ಯತ್ಯಯದ ಕಾರಣ ಆತಂಕಗೊಂಡ ಇವರು, ನಾಳಿನ ವಿಮಾನದ ಬಗ್ಗೆ ವಿಚಾರಿಸಿದ್ದಾರೆ. ಆದರೆ ವಿಮಾನ ಹಾರಾಟದ ಬಗ್ಗೆ ಏರ್​​ಲೈನ್ಸ್​ ಸಿಬ್ಬಂದಿಯಿಂದ ಯಾವುದೇ ಸ್ಪಷ್ಟ ಉತ್ತರ ಇವರಿಗೆ ಸಿಕ್ಕಿಲ್ಲ. ಇದರಿಂದಾಗಿ ಮದುವೆ ಸಂಭ್ರಮದಲ್ಲಿದ್ದ ಕುಟುಂಬದಲ್ಲೀಗ ಆತಂಕ ಮನೆ ಮಾಡಿದೆ. ವರ ಬೆಂಗಳೂರಿನಲ್ಲಿದ್ದರೆ ಭುವನೇಶ್ವರದಲ್ಲಿರುವ ವಧು‌ ಇದ್ದಾಳೆ. ರಸ್ತೆ ಮೂಲಕ ಹೋದರೂ ಸಮಯಕ್ಕೆ ಸರಿಯಾಗಿ ತಲುಪಲು ಆಗಲ್ಲ ಅಂತ ಕುಟುಂಬಸ್ಥರು ಅಲವತ್ತುಕೊಂಡಿದ್ದಾರೆ. ನಮಗೆ ಮದುವೆಗೆ ಹೋಗಲು ಅವಕಾಶ ಮಾಡಿಕೊಡಿ ಎಂದು ಟಿವಿ9 ಮುಂದೆ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ವಿಮಾನಗಳ ಹಾರಾಟದಲ್ಲಿ ವ್ಯತ್ಯಯ,  ಪ್ರಯಾಣಿಕರ ಕ್ಷಮೆಯಾಚಿಸಿದ ಇಂಡಿಗೋ

ನಾಳೆ ಸಂಜೆ ಭುವನೇಶ್ವರದಲ್ಲಿ ಮದುವೆ ನಡೆಯಲಿದ್ದು, ವರ, ಆತನ ತಂದೆ-ತಾಯಿ ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಬುಕ್​​ ಮಾಡಲಾಗಿತ್ತು. ಬೆಂಗಳೂರಿನಿಂದ ಮಾತ್ರವಲ್ಲದೆ ಚೆನ್ನೈ, ಹೈದರಾಬಾದ್​​ನಿಂದಲು ಸಂಬಂಧಿಕರಿಗೆ ಇಂಡಿಗೋ ವಿಮಾನದಲ್ಲಿ ಮೂರು ತಿಂಗಳ ಹಿಂದೆಯೇ ಟಿಕೆಟ್ ಬುಕ್ ಮಾಡಲಾಗಿದೆ. ಹೀಗಿದ್ದರೂ ವರನ ತಂದೆಗೆ ವಿಮಾನ ಹಾರಾಟದ ಬಗ್ಗೆ ಏರ್​ಲೈನ್ಸ್​​ ಸಿಬ್ಬಂದಿ ಸರಿಯಾದ ಮಾಹಿತಿ ನೀಡದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎನ್ನಲಾಗಿದೆ.

205 ಇಂಡಿಗೋ ವಿಮಾನಗಳ ಹಾರಾಟ ರದ್ದು

ಕಳೆದ 3 ದಿನಗಳಿಂದ ಕೆಐಎಬಿಗೆ ಆಗಮಿಸುವ ಮತ್ತು ನಿರ್ಗಮಿಸಬೇಕಿದ್ದ ಒಟ್ಟು 205 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಮಂಗಳವಾರ 70, ಬುಧವಾರ 62, ಇಂದು 73 ವಿಮಾನಗಳು ಹಾರಾಟ ನಡೆಸಿಲ್ಲ. ದೇಶದ ವಿವಿಧೆಡೆಗೆ ತೆರಳಬೇಕಿದ್ದ ವಿಮಾನಗಳು ಕೊನೆ ಕ್ಷಣದಲ್ಲಿ ರದ್ದಾದ ಪರಿಣಾಮ, ಸಾವಿರಾರು ಪ್ರಯಾಣಿಕರ ಪರದಾಟ ನಡೆಸಿದ್ದಾರೆ. ತಿಂಗಳ ಹಿಂದೆಯೇ ಟಿಕೆಟ್ ಬುಕ್ ಮಾಡಿಕೊಂಡಿದ್ದರೂ ಕೊನೆ ಕ್ಷಣದಲ್ಲಿ ವಿಮಾನ ಹಾರಾಟ ರದ್ದಾಗಿದ್ದರಿಂದ ಪ್ರಯಾಣಿಕರು ಗರಂ ಆಗಿದ್ದಾರೆ. ಇಂಡಿಗೋ ಕೌಂಟರ್​ಗಳ ಮುಂದೆ ಪ್ರಯಾಣಿಕರು ಜಮಾವಣೆಯಾಗಿದ್ದು, ಟಿಕೆಟ್ ಕ್ಯಾನ್ಸಲ್​ ಮಾಡಲು ಕಾದು ಕುಳಿತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:23 pm, Thu, 4 December 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್