AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಗೋ ಹಾರಾಟ ವ್ಯತ್ಯಯ: ಕೆಂಪೇಗೌಡ ಏರ್​ಪೋರ್ಟ್ ಆವರಣದ ಅಂಗಡಿ–ಮುಂಗಟ್ಟುಗಳಿಗೆ ಕೋಟ್ಯಂತರ ರೂ. ನಷ್ಟ

ಇಂಡಿಗೋ ವಿಮಾನಗಳ ಹಾರಾಟದಲ್ಲಿ ಭಾರಿ ವ್ಯತ್ಯಯವಾಗಿರುವುದು ಪ್ರಯಾಣಿಕರಿಗಷ್ಟೇ ಅಲ್ಲದೆ, ವಿಮಾನ ನಿಲ್ದಾಣ ಆವರಣದ ವ್ಯಾಪಾರಿಗಳಿಗೂ ಸಮಸ್ಯೆ ತಂದೊಡ್ಡಿದೆ. ಇಂಡಿಗೋ ವಿಮಾನಗಳ ರದ್ದತಿಯಿಂದ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವುದು ಕೆಂಪೇಗೌಡ ಏರ್​​ಪೋರ್ಟ್ ಆಸುಪಾಸಿನ ಅಂಗಡಿ–ಮುಂಗಟ್ಟುಗಳ ವ್ಯಾಪಾರ-ವಹಿವಾಟಿಗೆ ಹೊಡೆತ ನೀಡಿದೆ. ವರ್ತಕರು ಕೋಟ್ಯಂತರ ರೂ. ನಷ್ಟ ಅನುಭವಿಸುವಂತಾಗಿದೆ.

ಇಂಡಿಗೋ ಹಾರಾಟ ವ್ಯತ್ಯಯ: ಕೆಂಪೇಗೌಡ ಏರ್​ಪೋರ್ಟ್ ಆವರಣದ ಅಂಗಡಿ–ಮುಂಗಟ್ಟುಗಳಿಗೆ ಕೋಟ್ಯಂತರ ರೂ. ನಷ್ಟ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
ನವೀನ್ ಕುಮಾರ್ ಟಿ
| Edited By: |

Updated on: Dec 10, 2025 | 10:04 AM

Share

ಬೆಂಗಳೂರು, ಡಿಸೆಂಬರ್ 10: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIAB) ಟರ್ಮಿನಲ್–1ನಲ್ಲಿ ಇಂಡಿಗೋ ವಿಮಾನಗಳ (IndiGo Flights) ಹಾರಾಟದಲ್ಲಿ ಕಳೆದ ಕೆಲ ದಿನಗಳಿಂದ ಉಂಟಾಗಿರುವ ವ್ಯತ್ಯಯದಿಂದ ವಿಮಾನ ನಿಲ್ದಾಣದಲ್ಲಿನ ಅಂಗಡಿ–ಮುಂಗಟ್ಟುಗಳಿಗೆ ಕೋಟ್ಯಂತರ ರುಪಾಯಿ ನಷ್ಟ ಉಂಟಾಗಿದೆ. ವಿಮಾನಗಳ ಹಾರಾಟ ರದ್ದು ಪರಿಣಾಮವಾಗಿ ಪ್ರಯಾಣಿಕರ ಸಂಚಾರ ಗಣನೀಯವಾಗಿ ಕಡಿಮೆಯಾದ ಪರಿಣಾಮ, ವ್ಯಾಪಾರ ವಹಿವಾಟುಗಳು ತೀವ್ರವಾಗಿ ಕುಸಿದಿವೆ. ಸಾಮಾನ್ಯವಾಗಿ ದಿನಕ್ಕೆ 1.5 ಲಕ್ಷ ರೂ.ನಿಂದ 2 ಲಕ್ಷ ರೂ. ವಹಿವಾಟು ಮಾಡುವ ಅಂಗಡಿಗಳು, ಕಳೆದ 10 ದಿನಗಳಿಂದ ಕೇವಲ 50–60 ಸಾವಿರ ರೂ. ವಹಿವಾಟು ನಡೆಸುತ್ತಿವೆ. ಸುಮಾರು ಶೇ 50 ರಷ್ಟು ವ್ಯವಹಾರ ನಷ್ಟ ಉಂಟಾಗಿದೆ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.

ಇಂಡಿಗೋ ವಿಮಾನಗಳ ಸಂಚಾರ ರದ್ದತಿಯ ಪರಿಣಾಮ, ಹಲವು ವ್ಯಾಪಾರಸ್ಥರು ಖಾಲಿ ಅಂಗಡಿಗಳಲ್ಲೇ ಕೂತು ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ದಾಖಲೆ ಮಟ್ಟದ ನಷ್ಟದಿಂದ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಇಂಡಿಗೋ ವಿಮಾನ ಸಂಚಾರದಲ್ಲಿ ತುಸು ಚೇತರಿಕೆ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ಇಂದು ಸ್ವಲ್ಪ ಮಟ್ಟಿನ ಚೇತರಿಕೆ ಕಂಡುಬಂದಿದೆ. ಮಂಗಳವಾರ ಒಟ್ಟು 121 ವಿಮಾನಗಳ ಸಂಚಾರ ರದ್ದಾಗಿತ್ತು. ಇಂದು ರದ್ದಾದ ವಿಮಾನಗಳ ಸಂಖ್ಯೆ 58ಕ್ಕೆ ಇಳಿದಿದೆ. ಇಂದು ಏರ್‌ಪೋರ್ಟ್‌ನಿಂದ ಹೊರಡಬೇಕಿದ್ದ 26 ವಿಮಾನಗಳ ಮತ್ತು ಆಗಮಿಸಬೇಕಿದ್ದ 32 ವಿಮಾನಗಳ ಸಂಚಾರ ರದ್ದಾಗಿದೆ.

ಇದನ್ನೂ ಓದಿ: ಇಂಡಿಗೋ ರಾದ್ಧಾಂತ: ಬೆಂಗಳೂರು ಏರ್​​ಪೋರ್ಟ್​​ಗೆ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳ ಭೇಟಿ

ಪ್ರಯಾಣಿಕರಿಗೆ ವಿಮಾನ ರದ್ದತಿ ಬಗ್ಗೆ ಮುಂಚಿತವಾಗಿ ಸಂದೇಶ ರವಾನೆ ಮಾಡಲಾಗುತ್ತಿದೆ. ಈ ಮೂಲಕ ವಿಮಾನ ನಿಲ್ದಾಣದಲ್ಲಿ ಅವ್ಯವಸ್ಥೆ ತಪ್ಪಿಸುವ ಪ್ರಯತ್ನ ನಡೆದಿದೆ. ಶೀಘ್ರವೇ ಏರ್‌ಪೋರ್ಟ್‌ನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವ ನಿರೀಕ್ಷೆ ವ್ಯಕ್ತವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ