ಮುಂದುವರಿದ ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯ: ಇವತ್ತು ಎಷ್ಟು ಫ್ಲೈಟ್​​ಗಳು ಕ್ಯಾನ್ಸಲ್​?

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಮುಂದುವರಿದಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು ನೂರಾರು ವಿಮಾನಗಳು ರದ್ದುಗೊಂಡಿವೆ, ಹಲವು ವಿಳಂಬವಾಗಿವೆ. ಇದರಿಂದ ಪ್ರಯಾಣಿಕರು ತೀವ್ರ ಆಕ್ರೋಶಗೊಂಡಿದ್ದು, ಏರ್‌ಪೋರ್ಟ್‌ನ ಆಗಮನ ದ್ವಾರಗಳು ಖಾಲಿಯಾಗಿವೆ. ವಿಮಾನಗಳಿಲ್ಲದ ಕಾರಣ ಟ್ಯಾಕ್ಸಿ ಹಾಗೂ ಬಿಎಂಟಿಸಿ ಬಸ್ ಚಾಲಕರು ಆದಾಯವಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಏರ್‌ಪೋರ್ಟ್‌ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಮುಂದುವರಿದ ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯ: ಇವತ್ತು ಎಷ್ಟು ಫ್ಲೈಟ್​​ಗಳು ಕ್ಯಾನ್ಸಲ್​?
ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯ
Edited By:

Updated on: Dec 05, 2025 | 12:06 PM

ದೇವನಹಳ್ಳಿ, ಡಿಸೆಂಬರ್​​ 05: ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಸತತವಾಗಿ ಮುಂದುವರಿದಿದ್ದು, ಬೆಂಗಳೂರಿನ ಕೇಂಪೇಗೌಡ ವಿಮಾನ ನಿಲ್ದಾಣದಲ್ಲಿಯೇ ಇಂದು 102 ವಿಮಾನಗಳ ಸಂಚಾರ ರದ್ದಾಗಿದೆ. 50 ಡಿಪಾರ್ಚರ್ ಹಾಗೂ 52 ಅರೈವಲ್ ವಿಮಾನಗಳು ಕ್ಯಾನ್ಸಲ್ ಆಗಿದ್ದು, 30ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿದೆ. ಇದರಿಂದಾಗಿ ರೊಚ್ಚಿಗೆದ್ದ ಪ್ರಯಾಣಿಕರು ಇಂಡಿಗೋ ಕೌಂಟರ್​ ಬಳಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ಅರೈವಲ್ ಗೇಟ್ ಖಾಲಿ ಖಾಲಿ

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಹಿನ್ನೆಲೆ‌ ಕೆಂಪೇಗೌಡ ಏರ್​ಪೋರ್ಟ್​ನ ಅರೈವಲ್ ಗೇಟ್ ಖಾಲಿ ಖಾಲಿ ಇರೋ ದೃಶ್ಯಗಳು ಕಂಡುಬಂದಿವೆ. ಹೊರ ರಾಜ್ಯಗಳಿಂದಲೂ ಇಂಡಿಗೋ ವಿಮಾನಗಳು ಬಾರದ ಹಿನ್ನಲೆ, ಪ್ರಯಾಣಿಕರಿಲ್ಲದೆ ಆಗಮನದ ದ್ವಾರಗಳು ಬಿಕೋ ಎನ್ನುತ್ತಿವೆ. ಪ್ರಯಾಣಿಕರಿಲ್ಲದ ಕಾರಣ ಟ್ಯಾಕ್ಸಿ ಚಾಲಕರೂ ಬಾಡಿಗೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: 550 ಇಂಡಿಗೋ ವಿಮಾನಗಳ ಸಂಚಾರ ರದ್ದು, ಬೆಂಗಳೂರು ಸೇರಿ ಹಲವೆಡೆ ಪ್ರಯಾಣಿಕರ ಒದ್ದಾಟ

ಟರ್ಮಿನಲ್ 1ರಲ್ಲಿ ಬಿಗಿ ಭದ್ರತೆ

ವಿಮಾನಗಳ ಹಾರಾಟದಲ್ಲಿ ವ್ಯತ್ಯಯದ ಕಾರಣ ಪ್ರಯಾಣಿಕರು ತೀವ್ರ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಏರ್​​ಪೋರ್ಟ್​​ನಲ್ಲಿ ಮುಂಜಾಗೃತೆ ವಹಿಸಲಾಗಿದೆ. ಭದ್ರತೆಗೆ ಟರ್ಮಿನಲ್ 1ರಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಬಿಗಿ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಪೊಲೀಸರ ಬಳಿಯೇ ಬಂದು ಪ್ರಯಾಣಿಕರು ಅಸಮಾಧಾನ ಹೊರಹಾಕ್ತಿರುವ ಪ್ರಸಂಗಗಳೂ ನಡೆಯುತ್ತಿವೆ.

ಏರ್​​ಪೋರ್ಟ್​​ ಬಸ್​​ಗಳು ಖಾಲಿ ಖಾಲಿ‌

ಒಂದೆಡೆ ಇಂಡಿಗೋ ಪ್ಲೈಟ್​​ಗಳಿಲ್ಲದೆ ಏರ್​ಪೋರ್ಟ್​​ನಲ್ಲಿ ಪ್ರಯಾಣಿಕರು ಪರದಾಟ ನಡೆಸುತ್ತಿದ್ದರೆ, ಮತ್ತೊಂದೆಡೆ ಪ್ರಯಾಣಿಕರಿಲ್ಲದೆ ಏರ್​​ಪೋರ್ಟ್​​ ಬಸ್​​ಗಳು ಖಾಲಿ ಖಾಲಿ‌ಯಾಗಿವೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿವಿಧ ಭಾಗಗಳಿಗೆ ಸಂಚರಿಸುವ ಬಸ್​​ಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿವೆ. ಪ್ರಯಾಣಿಕರಿಗಾಗಿ ಬಿಎಂಟಿಸಿಯ ವಾಯುವಜ್ರ ಮತ್ತು ಕೆಎಸ್ಆರ್ಟಿಸಿಯ ಫ್ಲೈ ಬಸ್​ಗಳ ಚಾಲಕರು ಕಾದು ಕುಳಿತಿದ್ದಾರೆ. ಕಳೆದ ಮೂರು ದಿನಗಳಿಂದ ಬಿಎಂಟಿಸಿ ಕಲೆಕ್ಷನ್‌ ಸಂಪೂರ್ಣ ಕುಸಿತ ಕಂಡಿದ್ದು, ಪ್ರಯಾಣಿಕರಿಲ್ಲದ ಕಾರಣ ಬಸ್​​ಗಳು ಖಾಲಿಯಾಗಿ  ಸಂಚರಿಸಬೇಕಾದ ಸ್ಥಿತಿ ಉದ್ಭವವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.​​

Published On - 11:54 am, Fri, 5 December 25

ನವೀನ್ ಕುಮಾರ್ ಟಿ

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us