AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AC ರಿಪೇರಿ ಮಾಡ್ತಿದ್ದವನಿಗೆ ಪಾಕ್ ಗ್ಯಾಂಗ್​ಸ್ಟರ್​​ಗಳ​​​​ ನಂಟು: ಇವನ ಕಥೆ ಕೇಳಿದ್ರೆ ಶಾಕ್ ಆಗ್ತೀರಿ

Bengaluru suspect terror arrest: ಪಾಕಿಸ್ತಾನಿ ಗ್ಯಾಂಗ್ ಜೊತೆ ನಂಟು ಹೊಂದಿದ್ದ ಆರೋಪದ ಮೇಲೆ ಬೆಂಗಳೂರು ಹೊರವಲಯದಲ್ಲಿ ಓರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಪಾಕ್ ಗ್ಯಾಂಗ್‌ನೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದು, ತರಬೇತಿ ಪಡೆದಿದ್ದನೆಂಬ ಆರೋಪಿಸಲಾಗಿದೆ. ಸದ್ಯ ಈ ಕುರಿತಾಗಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

AC ರಿಪೇರಿ ಮಾಡ್ತಿದ್ದವನಿಗೆ ಪಾಕ್ ಗ್ಯಾಂಗ್​ಸ್ಟರ್​​ಗಳ​​​​ ನಂಟು: ಇವನ ಕಥೆ ಕೇಳಿದ್ರೆ ಶಾಕ್ ಆಗ್ತೀರಿ
ಸೈಯದ್ ಅಬೂಬಕರ್Image Credit source: tv9 kannada
ನವೀನ್ ಕುಮಾರ್ ಟಿ
| Edited By: |

Updated on:Aug 22, 2026 | 7:48 PM

Share

ಮುಖ್ಯಾಂಶಗಳು

  • ಪಾಕ್​ ಗ್ಯಾಂಗ್​ಸ್ಟರ್​​ಗಳ ಜೊತೆ ದೊಡ್ಡಬಳ್ಳಾಪುರದ ಯುವಕ ಸಂಪರ್ಕ
  • ಕೌಂಟರ್ ಇಂಟಲಿಜೆನ್ಸ್ ಸೆಲ್, ಸೆಂಟ್ರಲ್ ಐಬಿ ಮಾಹಿತಿ ಮೆರೆಗೆ ಬಂಧನ
  • ದೊಡ್ಡಬಳ್ಳಾಪುರ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು

ದೇವನಹಳ್ಳಿ, ಆಗಸ್ಟ್​ 22: ಹುಬ್ಬಳ್ಳಿ ಹಾಗೂ ಜಿಗಣಿ ಪ್ರಕರಣಗಳ ಬೆನ್ನಲ್ಲೇ, ಬೆಂಗಳೂರು ಹೊರವಲಯದಲ್ಲಿ ದೇಶವಿರೋಧಿ ಹಾಗೂ ಉಗ್ರ ಚಟುವಟಿಕೆಗಳಿಗೆ (Terrorist activity) ತರಬೇತಿ ಪಡೆಯುತ್ತಿದ್ದ ಆರೋಪದ ಮೇಲೆ ಶಂಕಿತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ ಇಸ್ಲಾಂಪುರ ನಿವಾಸಿ ಸೈಯದ್ ಅಬೂಬಕರ್ (28) ಬಂಧಿತ ಆರೋಪಿ. ಈತ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದ ಎಂಬ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ. ಕೇಂದ್ರ ಗುಪ್ತಚರ ಇಲಾಖೆ ಹಾಗೂ ಕೌಂಟರ್ ಇಂಟಲಿಜೆನ್ಸ್ ಸೆಲ್ ನೀಡಿದ ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಆತನ ಮನೆ ಮೇಲೆ ದಾಳಿ ನಡೆಸಿ ಹೆಡೆಮುರಿ ಕಟ್ಟಿದ್ದಾರೆ.

ಇನ್‌ಸ್ಟಾಗ್ರಾಂ ಮೂಲಕ ಪಾಕ್ ಗ್ಯಾಂಗ್ ಜೊತೆ ಸಂಪರ್ಕ

ವೃತ್ತಿಯಲ್ಲಿ ಎಸಿ ಮೆಕ್ಯಾನಿಕ್ ಆಗಿದ್ದ ಸೈಯದ್ ಅಬೂಬಕರ್, ಬೆಂಗಳೂರಿನ ಮಸೀದಿಯೊಂದರಲ್ಲಿ ಮಕ್ಕಳಿಗೆ ಪಾಠವನ್ನೂ ಮಾಡುತ್ತಿದ್ದ. ಆದರೆ ಈ ಮುಗ್ಧ ಮುಖವಾಡದ ಹಿಂದೆ ಪಾಕಿಸ್ತಾನದ ಕುಖ್ಯಾತ ಶಾಜದ್ ಬುಟ್ಟಿ ನೆಟ್‌ವರ್ಕ್‌ನ ಗ್ಯಾಂಗ್ ಜೊತೆ ಕಳೆದ ಎರಡು ವರ್ಷಗಳಿಂದ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಗಣ್ಯ ವ್ಯಕ್ತಿಗಳು ಮತ್ತು ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡುವ ಜಾಲದ ‘Hammadmemon333’ ಹೆಸರಿನ ಇನ್‌ಸ್ಟಾಗ್ರಾಂ ಖಾತೆಯನ್ನು ಈತ ಬಳಸುತ್ತಿದ್ದ. ಅಷ್ಟೇ ಅಲ್ಲದೆ, ತನ್ನ ಸ್ವಂತ ಆಧಾರ್ ಕಾರ್ಡ್ ಸೇರಿದಂತೆ ಪ್ರಮುಖ ವೈಯಕ್ತಿಕ ದಾಖಲೆಗಳನ್ನು ನೀಡಿ ಆ ಖಾತೆಗೆ ಲಾಗಿನ್ ಆಗಿದ್ದ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಕೇರಳ, ದೆಹಲಿಯಲ್ಲಿ ತರಬೇತಿ ಪಡೆದಿದ್ದ ಶಂಕಿತ

ಪಾಕಿಸ್ತಾನಿ ಗ್ಯಾಂಗ್ ಸೂಚನೆಯಂತೆ ಭಾರತದಲ್ಲಿ ಕಾರ್ಯಾಚರಣೆ ನಡೆಸಲು ಈತನನ್ನು ಬಳಸಿಕೊಳ್ಳಲಾಗುತ್ತಿತ್ತು ಎನ್ನಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಗ್ಯಾಂಗ್ ಆದೇಶದ ಮೇರೆಗೆ ಈತ ಕೇರಳ ಮತ್ತು ದೆಹಲಿಗೆ ತೆರಳಿ ರಹಸ್ಯ ತರಬೇತಿಯನ್ನೂ ಪಡೆದುಕೊಂಡು ಬಂದಿದ್ದಾನೆ. ಈ ನಿಟ್ಟಿನಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲಿ ಯುವಕರನ್ನು ಸೆಳೆದು ದೇಶವಿರೋಧಿ ಕೃತ್ಯಗಳಿಗೆ ತರಬೇತಿ ನೀಡಲಾಗುತ್ತಿದೆಯೇ ಎಂಬ ಅನುಮಾನ ಮೂಡಿದ್ದು, ಈ ಜಾಲದ ಮೂಲವನ್ನು ಪತ್ತೆಹಚ್ಚಲು ತನಿಖಾ ಸಂಸ್ಥೆಗಳು ತೀವ್ರ ವಿಚಾರಣೆ ನಡೆಸುತ್ತಿವೆ.

ಇದನ್ನೂ ಓದಿ: ಪಾಕಿಸ್ತಾನ, ಐಸಿಸ್ ಜತೆ ನಂಟು: ಕಲಬುರಗಿಯಲ್ಲಿ ಇಬ್ಬರು ಶಂಕಿತರು ಪೊಲೀಸ್​ ವಶಕ್ಕೆ

ಬಂಧಿತ ಸೈಯದ್ ಅಬೂಬಕರ್ ವಿರುದ್ಧ ಬಿಎನ್‌ಎಸ್ 113(3) ಹಾಗೂ 197(2) ಸೆಕ್ಷನ್‌ಗಳ ಅಡಿಯಲ್ಲಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಾಕಿಸ್ತಾನಿ ಗ್ಯಾಂಗ್ ಜೊತೆ ಹಣಕಾಸಿನ ವಹಿವಾಟು ಹೇಗೆ ನಡೆಯುತ್ತಿತ್ತು? ಸ್ಥಳೀಯವಾಗಿ ಇವನಿಗೆ ಬೇರೆ ಯಾರಾದರೂ ಸಾಥ್ ನೀಡುತ್ತಿದ್ದಾರಾ? ಎಂಬ ಎಲ್ಲಾ ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:42 pm, Sat, 22 August 26

Follow Us
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?