AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತಂ ವಿವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ವಿದ್ಯಾರ್ಥಿಗಳ ನಡುವೆ ನಡೆದ ಐಪಿಎಲ್ ಗಲಾಟೆಯೇ ಸಾವಿಗೆ ಕಾರಣವಾಯ್ತ?

ಆಂಧ್ರ ವಿದ್ಯಾರ್ಥಿಗಳು, ಆರ್​ಸಿಬಿ ಕಪ್ ಗೆಲ್ಲಲ್ಲ ವಿಕೇಟ್​ಗಳು ಹೋಗುತ್ತಿವೆ ಅಂತ ಕಾಮೆಂಟ್ ಮಾಡಿ ಅಪಹಾಸ್ಯ ಮಾಡಿದ್ದರು. ಹೀಗಾಗಿ ಇಬ್ಬರ ನಡುವೆ ಕಿರಿಕ್ ಆಗಿ ಸೋಶಿಯಲ್ ಮೀಡಿಯಾದಲ್ಲಿ ಮಾತಿನ ಚಕಮಕಿ ಜೋರಾಗಿತ್ತು.

ಗೀತಂ ವಿವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ವಿದ್ಯಾರ್ಥಿಗಳ ನಡುವೆ ನಡೆದ ಐಪಿಎಲ್ ಗಲಾಟೆಯೇ ಸಾವಿಗೆ ಕಾರಣವಾಯ್ತ?
ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್ ದ್ವಂಸ ಮಾಡಿದ್ದಾರೆ
TV9 Web
| Edited By: |

Updated on:Apr 28, 2022 | 11:39 AM

Share

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಬಳಿ ಇರುವ ಗೀತಂ ವಿವಿಯಲ್ಲಿ (Gitam University) ವಿದ್ಯಾರ್ಥಿನಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದು, ಇಡೀ ವಿಶ್ವವಿದ್ಯಾಲಯ ರಣರಂಗವಾಗಿದೆ. ಇನ್ನು ಈ ಘಟನೆಗೆ ಐಪಿಎಲ್ ಮ್ಯಾಚ್​ನಿಂದಾಗಿ ಕಾಲೇಜಿನ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯೇ ಕಾರಣವಾಯ್ತ ಎಂಬ ಅನುಮಾನ ಹೆಚ್ಚಾಗಿದೆ. ಸನ್ ರೈಸರ್ಸ್ ಹೈದರಾಬಾದ್ ಮತ್ತು ಆರ್​ಸಿಬಿ ನಡುವೆ ನಡೆದಿದ್ದ ಮ್ಯಾಚ್​ನಲ್ಲಿ RCB ಔಟ್ ಆಗಿತ್ತು. SRH ಗೆಲುವು ಸಾಧಿಸಿತ್ತು. ಈ ವೇಳೆ ಮ್ಯಾಚ್ ನಲ್ಲಿ ಆರ್​ಸಿಬಿ ಆಲ್ ಔಟ್ ಆಗಿದ್ದ ಕಾರಣ ವಾಟ್ಸ್ ಆಪ್ ನಲ್ಲಿ ಗಲಾಟೆ ಶುರುವಾಗಿತ್ತು. ಒಂದೇ ಕಾಲೇಜಿನ ಆಂಧ್ರ ವಿದ್ಯಾರ್ಥಿಗಳ ನಡುವೆ ಮ್ಯಾಚ್ ವಿಚಾರವಾಗಿ ಕಿರಿಕ್ ಆಗಿತ್ತು.

ಆಂಧ್ರ ವಿದ್ಯಾರ್ಥಿಗಳು, ಆರ್​ಸಿಬಿ ಕಪ್ ಗೆಲ್ಲಲ್ಲ ವಿಕೇಟ್​ಗಳು ಹೋಗುತ್ತಿವೆ ಅಂತ ಕಾಮೆಂಟ್ ಮಾಡಿ ಅಪಹಾಸ್ಯ ಮಾಡಿದ್ದರು. ಹೀಗಾಗಿ ಇಬ್ಬರ ನಡುವೆ ಕಿರಿಕ್ ಆಗಿ ಸೋಶಿಯಲ್ ಮೀಡಿಯಾದಲ್ಲಿ ಮಾತಿನ ಚಕಮಕಿ ಜೋರಾಗಿತ್ತು. ನಂತರ ಅದೇ ವಿಚಾರವಾಗಿ ಕಾಲೇಜು ಬಳಿ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿ ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದರು. ಇದೇ ವಿಚಾರವಾಗಿ ವಿದ್ಯಾರ್ಥಿಗಳು, ಪೋಷಕರು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದರು. ಜೊತೆಗೆ ಆಂಧ್ರ ವಿದ್ಯಾರ್ಥಿಗಳ ಪರವಾಗಿ ಕಾಲೇಜು ಆಡಳಿತ ಮಂಡಳಿಯಿದೆ ಅಂತ ಆಕ್ರೋಶ ಹೊರ ಹಾಕಿದ್ರು.

ಈ ಗಲಾಟೆ ನಡುವೆ ತಡರಾತ್ರಿ ಯುವತಿ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ. 6ನೇ ಮಹಡಿಯಿಂದ ಹಾರಿ ಅಂತಿಮ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉಗಾಂಡ ಮೂಲದ ಹಸೀನಾ(24) ಮೃತ ದುರ್ದೈವಿ. ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸಾವನ್ನಪಿದ ಹಿನ್ನೆಲೆ ಎರಡು ಕಡೆಯ ವಿದ್ಯಾರ್ಥಿಗಳು ಕಾಲೇಜು ಕ್ಯಾಂಪಸ್ ದ್ವಂಸ ಮಾಡಿದ್ದಾರೆ.

ಕಾಲೇಜಿಗೆ ರಜೆ ಘೋಷಿಸಿದ ಆಡಳಿತ ಮಂಡಳಿ: ಘಟನೆ ಹಿನ್ನೆಲೆ ಗೀತಂ ವಿವಿಯ ಕಾಲೇಜಿಗೆ ಆಡಳಿತ ಮಂಡಳಿ ರಜೆ ಘೋಷಿಸಿದೆ. ಗೀತಂ ವಿಶ್ವವಿದ್ಯಾಲಯದ ಇಂದಿನ ಎಲ್ಲಾ ಪರೀಕ್ಷೆಗಳು ರದ್ದಾಗಿವೆ. ಸಿಬ್ಬಂದಿ ತರಗತಿಗೆ ಬಂದಿದ್ದ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದಾರೆ.

Published On - 11:33 am, Thu, 28 April 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್