AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಮತ್ತು ಹಮಾಸ್ ಸಂಘರ್ಷ: ಇಸ್ರೇಲ್​​ನಿಂದ ಆಗಮಿಸಿದ ಕನ್ನಡಿಗ ಈರಣ್ಣ ಹೇಳಿದ್ದಿಷ್ಟು

Israel-Hamas conflict: ನಿನ್ನೆ ರಾತ್ರಿ ಇಸ್ರೇಲ್​​​ನಿಂದ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಭಾರತಕ್ಕೆ ಆಗಮಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​ಪೋರ್ಟ್​​ಗೆ ಆಗಮಿಸಿರುವ ವಿಜಯಪುರ ಮೂಲದ ಈರಣ್ಣ ಪ್ರತಿಕ್ರಿಯೆ ನೀಡಿದ್ದು, ಇಸ್ರೇಲ್​ನಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ಸಂಘರ್ಷ: ಇಸ್ರೇಲ್​​ನಿಂದ ಆಗಮಿಸಿದ ಕನ್ನಡಿಗ ಈರಣ್ಣ ಹೇಳಿದ್ದಿಷ್ಟು
ವಿಜಯಪುರ ಮೂಲದ ಈರಣ್ಣ
ನವೀನ್ ಕುಮಾರ್ ಟಿ
| Edited By: |

Updated on: Oct 13, 2023 | 4:12 PM

Share

ದೇವನಹಳ್ಳಿ, ಅಕ್ಟೋಬರ್​​​ 13: ಇಸ್ರೇಲ್ (Israel) ಹಮಾಸ್ ಬಂಡುಕೋರರ ನಡುವೆ ಯುದ್ಧ ಮುಂದುವರೆದಿದೆ. ಸದ್ಯ ಆಪರೇಷನ್ ಅಜಯ್ ಮೂಲಕ ಭಾರತೀಯರನ್ನು ತವರು ದೇಶಕ್ಕೆ ಕರೆದುಕೊಂಡು ಬರುವ ಕೆಲಸ ನಡೆಯುತ್ತಿದ್ದು, ನಿನ್ನೆ ರಾತ್ರಿ ಇಸ್ರೇಲ್​​​ನಿಂದ 212 ಭಾರತೀಯರನ್ನು ಹೊತ್ತ ಮೊದಲ ವಿಮಾನ ಭಾರತಕ್ಕೆ ಆಗಮಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್​ಪೋರ್ಟ್​​ಗೆ ಆಗಮಿಸಿರುವ ವಿಜಯಪುರ ಮೂಲದ ಈರಣ್ಣ ಪ್ರತಿಕ್ರಿಯೆ ನೀಡಿದ್ದು, ಇಸ್ರೇಲ್​ನಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ ಎಂದು ಹೇಳಿದ್ದಾರೆ.

ಹಮಾಸ್​ನವರ ದಾಳಿ ಇಸ್ರೇಲ್ ಜನರ ಮೇಲೆ ಪ್ರಭಾವ ಬೀರುತ್ತಿಲ್ಲ. ಹಮಾಸ್ ಬಂಡುಕೋರರ ಮೇಲೆ ಇಸ್ರೇಲ್​ ಸೇನೆ ದಾಳಿ ಮಾಡುತ್ತಿದೆ. ಗಾಜಾಪಟ್ಟಿ ಗಡಿ ಭಾಗದಲ್ಲಿ ಮಾತ್ರ ಆತಂಕ ಇದೆ. ಇಸ್ರೇಲ್​ನ ಬೇರೆ ಭಾಗಗಳಲ್ಲಿ ಯಾವುದೇ ಆತಂಕದ ಪರಿಸ್ಥಿತಿ ಇಲ್ಲ. ಸೈರನ್ ಬಂದಾಗ ಮಾತ್ರ ನಾವು ಬಂಕರ್​ನಲ್ಲಿ ಹೋಗುತ್ತಿದ್ದೆವು. ಪಿಹೆಚ್​ಡಿ ಅಧ್ಯಯನಕ್ಕಾಗಿ ನಾನು ಇಸ್ರೇಲ್​ಗೆ ತೆರಳಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Operation Ajay: ಇಸ್ರೇಲ್​ನಿಂದ ದೆಹಲಿಗೆ ಮೊದಲ ವಿಮಾನ ಆಗಮನ: 212 ಮಂದಿ ಭಾರತೀಯರನ್ನು ಸುರಕ್ಷಿತವಾಗಿ ಕರೆತಂದ ವಾಯುಪಡೆ

​ಇಸ್ರೇಲ್​ನಲ್ಲಿ ಸಾಕಷ್ಟು ಭಾರತೀಯ ಪ್ರಜೆಗಳು ಸಿಲುಕಿಕೊಂಡಿದ್ದಾರೆ. ಇತ್ತೀಚೆಗೆ ಬಾಗಲಕೋಟೆ ಜಿಲ್ಲೆಯ ರಬಕವಿ ಪಟ್ಟಣದ ಸಾಪ್ಟವೇರ್ ಇಂಜಿನಿಯರ್ ಆಗಿರುವ ಪೂಜಾ ಉಮದಿ ಸಹ ಇಸ್ರೇಲ್​ನಲ್ಲಿ ಸಿಲುಕೊಂಡಿದ್ದು, ಇತ್ತೀಚೆಗೆ ಕರೆಯ ಮೂಲಕ ಯುವತಿಯ ಕುಟುಂಬಸ್ಥರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ ಧೈರ್ಯ ಹೇಳಿದ್ದರು.

ಪೂಜಾ ಹಾಗೂ ಅವರ ಕುಟುಂಬಸ್ಥರೊಂದಿಗೆ ಸಚಿವ ಆರ್ ಬಿ ತಿಮ್ಮಾಪೂರ ಕೂಡ ಮಾತನಾಡಿ, ಪೂಜಾ ಅವರೊಂದಿಗೆ ಅಲ್ಲಿನ ಪರಿಸ್ಥಿತಿ ಹಾಗೂ ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು.

ಇದನ್ನೂ ಓದಿ: ಇಸ್ರೇಲ್​ನಲ್ಲಿ ಸಿಲುಕಿದ ಬಾಗಲಕೋಟೆ ಯುವತಿ: ಕುಟುಂಬಸ್ಥರಿಗೆ ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

ಇಸ್ರೇಲ್ ಮತ್ತು ಹಮಾಸ್ ಯುದ್ಧ ಪೀಡಿತ ಪ್ರದೇಶಗಳಿಂದ ಸಿಕ್ಕಿಬಿದ್ದ ನಾಗರಿಕರನ್ನು ಮರಳಿ ಕರೆತರಲು ಭಾರತವು ‘ಆಪರೇಷನ್ ಅಜಯ್’ ಪ್ರಾರಂಭಿಸಿದೆ.

ಪ್ರಯಾಣ ಸಲಹೆ ನೀಡಿದ ಭಾರತ

ಪರಿಸ್ಥಿತಿ ಉಲ್ಬಣಗೊಂಡ ನಂತರ, ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಲಹೆಯನ್ನು ನೀಡಿದ್ದು, ಭಾರತೀಯ ನಾಗರಿಕರಿಗೆ ಎಚ್ಚರಿಕೆ ವಹಿಸುವಂತೆ ಹೇಳಿತ್ತು. “ಇಸ್ರೇಲ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ವೀಕ್ಷಿಸಲು ವಿನಂತಿಸಲಾಗಿತ್ತು”.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ