AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬಕ್ಕೆಂದು ಊರಿಗೆ ಹೋದಾಗ ಕಳ್ಳರ ಕೈ ಚಳಕ; ನಗದು ಸೇರಿ 2 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳವು

ಗೌರಿ-ಗಣೇಶ ಹಬ್ಬದ ನಿಮಿತ್ತ ಮನೆ ಮಂದಿಯೆಲ್ಲ ಊರಿಗೆ ಹೋಗಿದ್ದಾಗ ಕಳ್ಳರು ಕೈ ಚಳಕ ತೋರಿಸಿದ್ದು ಮನೆ ದೋಚಿ ಪರಾರಿಯಾಗಿದ್ದಾರೆ. ಹೆಸರುಘಟ್ಟ ಸುತ್ತಮುತ್ತವೇ ಎರಡು ಕಡೆ ಕಳ್ಳತನ ನಡೆದಿದೆ. ಮನೆಯಲ್ಲಿ ಯಾರು ಇಲ್ಲದನ್ನು ನೋಡಿ ಖದೀಮರು ಸುಮಾರು 2ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕದ್ದಿದ್ದಾರೆ.

ಗಣೇಶ ಹಬ್ಬಕ್ಕೆಂದು ಊರಿಗೆ ಹೋದಾಗ ಕಳ್ಳರ ಕೈ ಚಳಕ; ನಗದು ಸೇರಿ 2 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳವು
ಕಳ್ಳತನ
ಬಿ ಮೂರ್ತಿ, ನೆಲಮಂಗಲ
| Edited By: |

Updated on: Sep 19, 2023 | 3:23 PM

Share

ನೆಲಮಂಗಲ, ಸೆ.19: ಗೌರಿ-ಗಣೇಶ ಹಬ್ಬದ(Gowri Ganesha Festival) ನಿಮಿತ್ತ ಮನೆ ಮಂದಿಯೆಲ್ಲ ಊರಿಗೆ ಹೋಗಿದ್ದಾಗ ಕಳ್ಳರು ಕೈ ಚಳಕ ತೋರಿಸಿದ್ದು ಮನೆ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಹೆಸರುಘಟ್ಟದಲ್ಲಿ ಅಮೀತ್ ಭೀಮಯ್ಯ ಅವರ ಮನೆಯ ಡೋರ್ ಲಾಕ್ ಹೊಡೆದು ಕಳ್ಳತನ(Thieft) ಮಾಡಲಾಗಿದೆ. 5 ಸಾವಿರ ನಗದು, 2 ಲಕ್ಷ ಬೆಲೆ ಬಾಳುವ ಚಿನ್ನಾಭರಣಗಳನ್ನು ಕದ್ದು ಖದೀಮರು ಪರಾರಿಯಾಗಿದ್ದಾರೆ. ವಿರಾಜಪೇಟೆಯಿಂದ ವಾಪಸ್ ಮನೆ ಬಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಸರುಘಟ್ಟ ಬಳಿಯೇ ಇನ್ನೊಂದು ಕಳ್ಳತನ

ಹೆಸರುಘಟ್ಟ ರಸ್ತೆ ಚಿಕ್ಕಸಂದ್ರದಲ್ಲೂ ಕಳ್ಳತನ ನಡೆದಿದೆ. ಉದ್ಯಮಿ ರಾಮಚಂದ್ರನ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಹಬ್ಬ ಎಂದು ಹೆಣ್ಣೂರಿನಲ್ಲಿರುವ ಸ್ನೇಹಿತರ ಮನೆಗೆ ತೆರಳಿದ್ದಾಗ ಘಟನೆ ನಡೆದಿದೆ. ವಾಪಸ್ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಖದೀಮರು 2 ಲಕ್ಷ ಬೆಲೆಬಾಳುವ ಚಿನ್ನಾಭರಣ ಕದ್ದಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ

ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲದ ಹೆಸರುಘಟ್ಟ ಟಿಬಿ ಕ್ರಾಸ್​ ಬಳಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು ಆನಂದ, ಮದುಚಂದ್ರ, ಕೇಶವ, ಗೋವಿಂದ ರಾಜು, ಮಂಜುನಾಥ್ ಎಂಬುವವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 30 ಸಾವಿರ ನಗದು ವಶಕ್ಕೆ ಪಡೆಯಲಾಗಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕತ್ತಿನಲ್ಲಿದ್ದ ಮಾಂಗಲ್ಯ ಸರ ಎಗರಿಸಿದ ದುಷ್ಕರ್ಮಿಗಳು

ಬೆಂಗಳೂರಿನ ಕಮ್ಮಗೊಂಡನಹಳ್ಳಿಯ ಅಂತೋಣಿ ಚರ್ಚ್‌ನಲ್ಲಿ ಊಟಕ್ಕೆ ನಿಂತಿದ್ದಾಗ ವೃದ್ದೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರ ಎಗರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಲ್ಲಿಕಾ (75) ಅವರ 30ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಬೈಕಿನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಕತ್ತಿನಿಂದ ಕಸಿದು ಪರಾರಿಯಾಗಿದ್ದಾರೆ. ಗಂಗಮ್ಮ ಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ