AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devanahalli News: ದೇವನಹಳ್ಳಿಯಲ್ಲಿ ಬ್ಯಾಂಕ್ ಮ್ಯಾನೇಜರ್​​ನಿಂದಲೇ ಗ್ರಾಹಕರ ಖಾತೆಗೆ ಕನ್ನ; 1.89 ಕೋಟಿ ರೂ. ವರ್ಗಾವಣೆ

ಗಣೇಶ್ ಬಾಬು ಮತ್ತು ಜಿತೇಂದ್ರ ಕುಮಾರ್ ಅವರು ಜೂನ್ 3 ರಿಂದ ಜುಲೈ 17 ರ ನಡುವೆ ಆರ್‌ಟಿಜಿಎಸ್ ವಹಿವಾಟಿನ ಮೂಲಕ ಗ್ರಾಹಕರಿಗೆ ತಿಳಿಯದಂತೆ ಹಲವಾರು ಖಾತೆಗಳಿಂದ 1,88,75,000 ರೂ.ಗಳನ್ನು ಇತರ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Devanahalli News: ದೇವನಹಳ್ಳಿಯಲ್ಲಿ ಬ್ಯಾಂಕ್ ಮ್ಯಾನೇಜರ್​​ನಿಂದಲೇ ಗ್ರಾಹಕರ ಖಾತೆಗೆ ಕನ್ನ; 1.89 ಕೋಟಿ ರೂ. ವರ್ಗಾವಣೆ
ದೇವನಹಳ್ಳಿಯಲ್ಲಿ ಬ್ಯಾಂಕ್ ಮ್ಯಾನೇಜರ್​​ನಿಂದಲೇ ಗ್ರಾಹಕರ ಖಾತೆಗೆ ಕನ್ನ
TV9 Web
| Edited By: |

Updated on: Jul 22, 2023 | 4:21 PM

Share

ದೇವನಹಳ್ಳಿ: ಬ್ಯಾಂಕ್ ಮ್ಯಾನೇಜರ್​ ಹಾಗೂ ಬ್ಯಾಂಕ್ ಸಹಾಯಕರೊಬ್ಬರು ಗ್ರಾಹಕರ ಖಾತೆಯಿಂದ ಸುಮಾರು 1.89 ಕೋಟಿ ರೂ.ಗಳನ್ನು ಅವರ ಅನುಮತಿಯಿಲ್ಲದೆ ಬೇರೆ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದು ಚನ್ನರಾಯಪಟ್ಟಣ (Channarayapatna) ಠಾಣೆ ಪೊಲೀಸರು ತಿಳಿಸಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಗಣೇಶ್ ಬಾಬು ಮತ್ತು ಜಿತೇಂದ್ರ ಕುಮಾರ್ ಚನ್ನರಾಯಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು.

ಗಣೇಶ್ ಬಾಬು ಮತ್ತು ಜಿತೇಂದ್ರ ಕುಮಾರ್ ಅವರು ಜೂನ್ 3 ರಿಂದ ಜುಲೈ 17 ರ ನಡುವೆ ಆರ್‌ಟಿಜಿಎಸ್ ವಹಿವಾಟಿನ ಮೂಲಕ ಗ್ರಾಹಕರಿಗೆ ತಿಳಿಯದಂತೆ ಹಲವಾರು ಖಾತೆಗಳಿಂದ 1,88,75,000 ರೂ.ಗಳನ್ನು ಇತರ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತರಾದ ರಾಮಕ್ಕ, ಪಾಪಮ್ಮ, ಚೈತ್ರಾ ಯಾದವ್, ಕಿಶೋರ್ ಮತ್ತು ವೆಂಕಟಪ್ಪ ಅವರ ಖಾತೆಯಿಂದ ಹಣ ವರ್ಗಾವಣೆಗೊಂಡಿದೆ. ಹಣ ವರ್ಗಾವಣೆಗೊಂಡ ಮಾಹಿತಿ ತಿಳಿಯುತ್ತಿದ್ದಂತೆಯೇ ಅವರು ಬ್ಯಾಂಕ್‌ಗೆ ಧಾವಿಸಿದ್ದರು.

ಇದನ್ನೂ ಓದಿ: ಬ್ಯಾಂಕ್ ಕಳ್ಳತನಕ್ಕೆ ಯತ್ನಿಸುತ್ತಿದ್ದ ಖದೀಮರು ಅರೆಸ್ಟ್: ಪೊಲೀಸ್ ಸಿಬ್ಬಂದಿಗೆ ನಗದು ನೀಡಿ, ಮೆಚ್ಚುಗೆ ಸೂಚಿಸಿದ ಡಿವೈಎಸ್ಪಿ

ಗ್ರಾಹಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಗಣೇಶ್ ಬಾಬು ಮತ್ತು ಜಿತೇಂದ್ರ ಕುಮಾರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ. ಆರೋಪಿಗಳ ವಿರುದ್ಧ ಚನ್ನರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ