AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 200 ರೂ.ಗಾಗಿ ನಡೀತು ಕೊಲೆ! ತಾಯಿಗೇ ಚಾಕು ಇರಿದಿದ್ದವನಿಂದ ಮತ್ತೊಂದು ಹೇಯ ಕೃತ್ಯ

ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರದಲ್ಲಿ ಕೇವಲ 200 ರೂ. ಸಾಲದ ಹಣ ಕೇಳಿದ್ದಕ್ಕೆ ಟೀ ಅಂಗಡಿ ಮಾಲೀಕನನ್ನು ದೊಣ್ಣೆಯಿಂದ ಹೊಡೆದು ಕೊಲ್ಲಲಾಗಿದೆ. ಮತ್ತೊಂದೆಡೆ ಕಲಬುರಗಿಯಲ್ಲಿ ಜಾಗದ ವಿವಾದದ ಹಿನ್ನೆಲೆಯಲ್ಲಿ ನಿವೃತ್ತ ಬಿಎಸ್‌ಎಫ್ ಸೈನಿಕ ರವಿಚಂದ್ರ ಖೇಡ್‌ನನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೇವಲ 200 ರೂ.ಗಾಗಿ ನಡೀತು ಕೊಲೆ! ತಾಯಿಗೇ ಚಾಕು ಇರಿದಿದ್ದವನಿಂದ ಮತ್ತೊಂದು ಹೇಯ ಕೃತ್ಯ
ಕೇವಲ 200 ರೂ.ಗಾಗಿ ನಡೀತು ಕೊಲೆ! ತಾಯಿಗೇ ಚಾಕು ಇರಿದಿದ್ದವನಿಂದ ಮತ್ತೊಂದು ಹೇಯ ಕೃತ್ಯ
ಭಾವನಾ ಹೆಗಡೆ
|

Updated on: May 17, 2026 | 11:45 AM

Share

ಬೆಂಗಳೂರು, ಮೇ 17: ಸಮಾಜದಲ್ಲಿ ಹಳೆಯ ದ್ವೇಷಕ್ಕೆ, ರೋಷಕ್ಕೆ ಕೊಲೆ ನಡೆದ ಉದಾಹರಣೆಗಳಿವೆ. ಹೆಣ್ಣಿಗಾಗಿ, ಹಣಕ್ಕಾಗಿಯೂ ಕೊಲೆ, ಸುಲಿಗೆಗಳು ನಡೆಯುತ್ತವೆ. ಆದರೆ ಕೇವಲ 200 ರೂ. ಸಾಲ (Loan) ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿದ ಪ್ರಕರಣ ಇದೇ ಮೊದಲಿರಬಹುದು. ಹೌದು, ಟೀ ಅಂಗಡಿ ಮಾಲೀಕ ಬಾಕಿ ಇರುವ ಹಣ ನೀಡುವಂತೆ ಕೇಳಿದ ಕಾರಣಕ್ಕೇ ದೊಡ್ಡಬಳ್ಳಾಪುರ ತಾಲೂಕಿನ ಅಪ್ಪಕಾರನಹಳ್ಳಿ ಗೇಟ್​ನಲ್ಲಿ ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ.

ಮುಖ್ಯಾಂಶಗಳು

  • ದೊಡ್ಡಬಳ್ಳಾಪುರದಲ್ಲಿ ಕೇವಲ 200 ರೂಪಾಯಿ ಸಾಲದ ಜಗಳಕ್ಕೆ ಟೀ ಮಾಲೀಕನ ಕೊಲೆಯಾಗಿದೆ.
  • ತಾಯಿಗೆ ಚಾಕು ಹಾಕಿದ್ದ ಹಳೇ ಆರೋಪಿ ಮುನಿಯಪ್ಪ ಈಗ ಮಂಜುನಾಥ್‌ನನ್ನು ಕೊಂದಿದ್ದಾನೆ.
  • ಕಲಬುರಗಿಯಲ್ಲಿ ಜಾಗದ ವಿವಾದಕ್ಕೆ ನಿವೃತ್ತ ಬಿಎಸ್‌ಎಫ್ ಸೈನಿಕ ರವಿಚಂದ್ರನ ಬರ್ಬರ ಹತ್ಯೆಯಾಗಿದೆ.

ಇನ್ನು ಮುಂದೆ ಸಾಲ ಕೊಡುವುದಿಲ್ಲ ಎಂದಿದ್ದ ಮಾಲೀಕ

ದ್ಯಾವಸಂದ್ರ ಗ್ರಾಮದ ಮಂಜುನಾಥ (40) ಕೊಲೆಯಾದ ದುರ್ದೈವಿ. ಮೇ 12 ರಂದು ಅಪ್ಪಕಾರನಹಳ್ಳಿಯ ಮುನಿಯಪ್ಪ ಎಂಬಾತ ಮಂಜುನಾಥ್ ಅವರ ಟೀ ಅಂಗಡಿಗೆ ಬಂದು ಮತ್ತೆ ಸಾಲ ಕೇಳಿದ್ದ. ಈ ವೇಳೆ ಮಾಲೀಕ ಮಂಜುನಾಥ್, ಹಳೆಯ ಟೀ ಸಾಲದ ಬಾಕಿ ಹಣ 200 ರೂ.ಕೊಡು, ಇನ್ನು ಮುಂದೆ ಸಾಲ ಕೊಡುವುದಿಲ್ಲ ಎಂದು ಹೇಳಿದ್ದ.

ಈ ವಿಚಾರವಾಗಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಆರೋಪಿ ಮುನಿಯಪ್ಪ, ಪಕ್ಕದಲ್ಲೇ ಇದ್ದ ನೀಲಗಿರಿ ದೊಣ್ಣೆಯನ್ನು ತೆಗೆದುಕೊಂಡು ಮಂಜುನಾಥ್ ತಲೆಗೆ ಮನಸೋಇಚ್ಛೆ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದ. ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಹೆತ್ತ ತಾಯಿಗೂ ಚಾಕು ಹಾಕಿದ್ದ ಆರೋಪಿ!

ಆರೋಪಿ ಮುನಿಯಪ್ಪ ಈ ಹಿಂದೆ ಹೆತ್ತ ತಾಯಿಗೂ ಚಾಕು ಹಾಕಿ ಜೈಲು ಸೇರಿದ್ದ. ಇತ್ತೀಚೆಗಷ್ಟೇ ಬೇಲ್ ಮೇಲೆ ಹೊರಗೆ ಬಂದಿದ್ದ ಈತ ಈಗ ಮತ್ತೊಂದು ಕೊಲೆ ಮಾಡಿದ್ದಾನೆ. ದೊಡ್ಡಬೆಳವಂಗಲ ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

ಕಬ್ಬಿಣದ ರಾಡ್‌ನಿಂದ ಹೊಡೆದು ಮಾಜಿ ಬಿಎಸ್‌ಎಫ್ ಸೈನಿಕನ ಹತ್ಯೆ!

ಕಲಬುರಗಿ ನಗರದ ರಾಮಮಂದಿರದ ಬಳಿ ನಿವೃತ್ತ ಸೈನಿಕ ರವಿಚಂದ್ರ ಖೇಡ್ (45) ಎಂಬುವವರನ್ನು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಬರ್ಬರ ಹತ್ಯೆ ಮಾಡಲಾಗಿದೆ. ನಾಲ್ಕು ವರ್ಷಗಳ ಹಿಂದೆ ಬಿಎಸ್‌ಎಫ್‌ನಿಂದ (BSF) ನಿವೃತ್ತಿಯಾಗಿದ್ದ ಇವರು, ಪ್ರಸ್ತುತ ಇಂಡಿಯನ್ ಆಯಿಲ್ ಡಿಪೋದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ ಪೋಕ್ಸೋ ಕೇಸ್​​ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್​​

ರವಿಚಂದ್ರ ನೈಟ್ ಶಿಫ್ಟ್‌ನಲ್ಲಿದ್ದಾಗ ಖಾಸಗಿ ಜಾಗದಲ್ಲಿ ಈ ಕೊಲೆ ನಡೆದಿದೆ. ಕಳೆದ ತಿಂಗಳು ಈ ವಿವಾದಿತ ಜಾಗದಲ್ಲಿ ಟಿನ್ ಶೆಡ್ ಕಾಂಪ್ಲೆಕ್ಸ್ ನಿರ್ಮಿಸಲಾಗಿತ್ತು. ಆದರೆ ವಿರೋಧಿ ಗುಂಪೊಂದು ರಾತ್ರೋರಾತ್ರಿ ಜೆಸಿಬಿ ತಂದು ಅದನ್ನು ಕೆಡವಿ ಹಾಕಿತ್ತು. ಇದೇ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಮಾಜಿ ಸೈನಿಕನನ್ನು ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ