AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಹಿರಿಯ ನಟಿ ಡಾ.ಲೀಲಾವತಿ, ವಿನೋದ್‌ರಾಜ್‌ರಿಗೆ ಸನ್ಮಾನ

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಭಾರತ ಸ್ವಾತಂತ್ರ‍್ಯ ಮಹೋತ್ಸವದ ಹಿನ್ನಲೆ ಕನ್ನಡಕ್ಕೊಬ್ಬರೆ ಅಭಿನಯ ಸರಸ್ವತಿ ಡಾ.ಲೀಲಾವತಿ ಎಂಬ ಬಿರುದು ನೀಡಿ ಪ್ರಮಾಣ ಪತ್ರ ಹಾಗೂ ಚರಕವನ್ನು ನೀಡಿ ಡಾ.ಲೀಲಾವತಿಯವರಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಹಿರಿಯ ನಟಿ ಡಾ.ಲೀಲಾವತಿ, ವಿನೋದ್‌ರಾಜ್‌ರಿಗೆ ಸನ್ಮಾನ
ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಹಿರಿಯ ನಟಿ ಡಾ.ಲೀಲಾವತಿ, ವಿನೋದ್‌ರಾಜ್‌ರಿಗೆ ಸನ್ಮಾನ
Follow us
ಬಿ ಮೂರ್ತಿ, ನೆಲಮಂಗಲ
| Updated By: ಆಯೇಷಾ ಬಾನು

Updated on:Aug 12, 2023 | 3:46 PM

ನೆಲಮಂಗಲ, ಆ.12: ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಹಿರಿಯ ನಟಿ ಡಾ.ಲೀಲಾವತಿ(Dr Leelavathi) ಹಾಗೂ ವಿನೋದ್‌ರಾಜ್‌ರವರಿಗೆ(Vinod Rajkumar) ಸನ್ಮಾನ, ಅಭಿನಂದನೆ ಸಲ್ಲಿಸಲಾಗಿದೆ. ಹಿರಿಯ ನಟಿ ಡಾ.ಲೀಲಾವತಿ ಹಾಗೂ ವಿನೋದ್‌ರಾಜ್‌ರವರು ಕಲ್ಲಿನ ಬಂಡೆಯ ಜಾಗದಲ್ಲಿ ಪ್ರಕೃತಿಯನ್ನು ಆರಾಧಿಸುವಂತೆ ತೋಟ ಮಾಡಿರುವುದು ಆ ತೋಟದಲ್ಲಿ ಪ್ರಾಣಿಪಕ್ಷಿಗಳು ಜೀವನ ಮಾಡಲು ಅನುವು ಮಾಡಿಕೊಟ್ಟಿರುವುದು ಮನುಷ್ಯ ಜನ್ಮದ ಅದ್ಬುತ ಕಾರ್ಯ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾಕೃಷ್ಣಪ್ಪ ಅಭಿಪ್ರಾಯ ಪಟ್ಟರು.

ತಾಲೂಕಿನ ಸೋಲದೇವನಹಳ್ಳಿ ಗ್ರಾಮದ ತೋಟದ ಮನೆಯಲ್ಲಿ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಆಯೋಜಿಸಲಾಗಿದ್ದ ಭಾರತ ಸ್ವಾತಂತ್ರ‍್ಯ ಮಹೋತ್ಸವದ ಹಿನ್ನಲೆ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಜನರಿಗೆ ಹಾಗೂ ಪಶುಗಳಿಗೆ ಸ್ವಂತ ಆಸ್ಪತ್ರೆ ನಿರ್ಮಾಣ ಮಾಡಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಸಮಾಜಕ್ಕೆ ಪ್ರೇರಣೆ, ಗಾಂಧಿಯವರ ಕನಸಿನ ಭಾರತಕ್ಕೆ ಲೀಲಾವತಿಯವರ ಸೇವೆ ಮಾದರಿಯಾಗಿದೆ. ಕರುನಾಡಿನಲ್ಲಿ ಜನಮೆಚ್ಚಿದ ಆರುನೂರಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟನೆ ಮಾಡಿ ದಕ್ಷಿಣ ಭಾರತದ ಘನತೆಯ ಕಲಾವಿದೆಯಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಜೀವನ ಸಾಗಿಸುವ ಮೂಲಕ ಸಮಾಜ ಸೇವೆ ಮಾಡಿ ಮಾದರಿಯಾಗಿದ್ದಾರೆ ಎಂದರು.

ಇದನ್ನೂ ಓದಿ: ಶಕ್ತಿ ಯೋಜನೆಯಡಿ ಅಂತಾರಾಜ್ಯ ಬಸ್​​​ನಲ್ಲಿ ಉಚಿತ ಪ್ರಯಾಣ, ಮುಂದುವರಿದ ಗೊಂದಲ

ಹಿರಿಯ ನಟಿ ಡಾ.ಲೀಲಾವತಿ ಮಾತನಾಡಿ, ನನಗೆ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಅಭಿನಂದನೆ ಸಲ್ಲಿಸುತ್ತಿರುವುದು ಸಂತೋಷವಾಗಿದೆ. ದೇಶದಲ್ಲಿ ಗಾಂಧಿ ಕನಸಿನ ಮಾದರಿ ಗ್ರಾಮಗಳು ಸೃಷ್ಟಿಯಾದರೆ ಮಾತ್ರ ಗ್ರಾಮೀಣ ಜನರ ಬದುಕು ಉತ್ತಮವಾಗಿರುತ್ತದೆ, ನಾನು ನೆಲೆಸಿರುವ ಸೋಲದೇವನಹಳ್ಳಿ ಭಾಗದ ಗ್ರಾಮೀಣ ಜನರಿಗೆ ಅನುಕೂಲವಾಗಲು ಆಸ್ಪತ್ರೆ ಮಾಡುವ ಕನಸು ನನಸಾಗಿದೆ. ಒಂದು ಪಶು ಆಸ್ಪತ್ರೆ ಮಾಡಲಾಗುತ್ತಿದ್ದು ಮಗ ವಿನೋದ್ ರಾಜ್ ಬಲವಾಗಿ ನಿಂತಿದ್ದಾರೆ. ಗಾಂಧೀಜಿಯವರು ಹೇಳಿದಂತೆ ಹಳ್ಳಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಕಾಣಲಿದೆ ಎಂದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಭಾರತ ಸ್ವಾತಂತ್ರ‍್ಯ ಮಹೋತ್ಸವದ ಹಿನ್ನಲೆ ಕನ್ನಡಕ್ಕೊಬ್ಬರೆ ಅಭಿನಯ ಸರಸ್ವತಿ ಡಾ.ಲೀಲಾವತಿ ಎಂಬ ಬಿರುದು ನೀಡಿ ಪ್ರಮಾಣ ಪತ್ರ ಹಾಗೂ ಚರಕವನ್ನು ನೀಡಿ ಡಾ.ಲೀಲಾವತಿಯವರಿಗೆ ಅಭಿನಂದನೆ ಸಲ್ಲಿಸಿ ಸನ್ಮಾನಿಸಲಾಯಿತು. ತಾಯಿಯ ಜೊತೆ ಮಗ ವಿನೋದ್ ರಾಜ್‌ರವರಿಗೂ ಸಹ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ನಟ ವಿನೋದ್‌ರಾಜ್, ರಾಷ್ಟೀಯ ಯುವ ಯೋಜನೆಯ ರಾಜ್ಯ ಸಂಯೋಜಕ ಡಾ.ವಿ ಪ್ರಶಾಂತ್,ಅಧ್ಯಾಪಕಿ ಶಾಮಲಾ, ಕನ್ನಡ ಸಾಹಿತ್ಯ ಪರಿಷತ್ ಸಂಘಸಂಸ್ಥೆಗಳ ಪ್ರತಿನಿಧಿಗಳು ಭಾಗಿಯಾಗಿದ್ರು.

ರಾಜ್ಯಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:45 pm, Sat, 12 August 23

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ವಿಶ್ವಾಸ್ ಕುಮಾರ್ ರಮೇಶ್​ ಆರೋಗ್ಯವನ್ನೂ ವಿಚಾರಿಸಿದ ಕಾಂಗ್ರೆಸ್ ನಾಯಕರು
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದಾಗ ಗ್ರಾಮಸ್ಥರಿಂದ ಶಾಸಕನಿಗೆ ತರಾಟೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ