AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ ಪ್ರಕರಣ; ಚಿಕಿತ್ಸೆ ಫಲಿಸದೇ ಗಾಯಗೊಂಡಿದ್ದ ಮೂವರು ಸಾವು

ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅದರಂತೆ ಇದೇ ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು. ಉಳಿದವರಿಗೆ ಸುಟ್ಟ ಗಾಯಗಳಾಗಿ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ನೆಡೆಯುತ್ತಿತ್ತು. ಇಂದು ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಕೊನೆಯುಸಿರೆಳೆದಿದ್ದಾರೆ.

ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ ಪ್ರಕರಣ; ಚಿಕಿತ್ಸೆ ಫಲಿಸದೇ ಗಾಯಗೊಂಡಿದ್ದ ಮೂವರು ಸಾವು
ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Apr 28, 2024 | 4:13 PM

Share

ಬೆಂಗಳೂರು, ಏ.28: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ(Accident)ದಲ್ಲಿ ಗಂಭೀರ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಇಂದು(ಏ.28) ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಘಟನೆ ವಿವರ

ಇದೇ ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು. ಉಳಿದವರಿಗೆ ಸುಟ್ಟ ಗಾಯಗಳಾಗಿ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ನೆಡೆಯುತ್ತಿತ್ತು.6 ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಗುಜರಾತ್ ಮೂಲದ ಒಂದೇ ಕುಟುಂಬದ ಸುನೀತ್(42), ನಮನ್(20), ಮಯಾಂಕ್(19) ಸಾವನ್ನಪ್ಪಿದ್ದಾರೆ. ಮೃತ ದೇಹಗಳ ಮುಂದೆ ಸಂಬಂಧಿಕರ ಗೋಳಾಟ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಜೆಸಿ ಮಾಧುಸ್ವಾಮಿ ಪಯಣಿಸುತ್ತಿದ್ದ ಕಾರು ಕಡೂರು ಬಳಿ ಅಪಘಾತ, ಗಾಯಗಳಿಲ್ಲದೆ ಮಾಜಿ ಸಚಿವ ಪಾರು

ಇನ್ನು ಡಿಕ್ಕಿಯಾದ ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿದಂತೆ ನಾಲ್ವರಿಗೂ ಗಂಭೀರ ಗಾಯಗಳೊಂದಿಗೆ ಅಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತದೆ. ಅಪಘಾತಕ್ಕೆ ಕಾರಣವಾದ ಬಲೇನೊ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆ ಗೂಗಲ್​ನಲ್ಲಿ ಸರ್ಚ್ ಪಡೆದು ಪೇಕ್ ನಂಬರ್‌ ಹಾಕಿದ್ದ ಎನ್ನಲಾಗಿದೆ. ಜೊತೆಗೆ ಇದರ ಅಸಲಿ ಕಾರಿನ ಕಾರ್ ನಂಬರ್‌ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದ್ದು, ಹೀಗಾಗಿ ಡಿವೈಎಸ್ಪಿ ಜಗದೀಶ್​ ನೇತೃತ್ವದಲ್ಲಿ ತನಿಖೆ ಚುರಕುಗೊಂಡಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Sun, 28 April 24

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ