ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ ಪ್ರಕರಣ; ಚಿಕಿತ್ಸೆ ಫಲಿಸದೇ ಗಾಯಗೊಂಡಿದ್ದ ಮೂವರು ಸಾವು

ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅದರಂತೆ ಇದೇ ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು. ಉಳಿದವರಿಗೆ ಸುಟ್ಟ ಗಾಯಗಳಾಗಿ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ನೆಡೆಯುತ್ತಿತ್ತು. ಇಂದು ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಕೊನೆಯುಸಿರೆಳೆದಿದ್ದಾರೆ.

ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ ಪ್ರಕರಣ; ಚಿಕಿತ್ಸೆ ಫಲಿಸದೇ ಗಾಯಗೊಂಡಿದ್ದ ಮೂವರು ಸಾವು
ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಸಜೀವ ದಹನ
Edited By: ಕಿರಣ್ ಹನುಮಂತ್​ ಮಾದಾರ್

Updated on: Apr 28, 2024 | 4:13 PM

ಬೆಂಗಳೂರು, ಏ.28: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಯುವತಿ ಜೀವಂತ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತ(Accident)ದಲ್ಲಿ ಗಂಭೀರ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಇಂದು(ಏ.28) ಚಿಕಿತ್ಸೆ ಫಲಕಾರಿಯಾದೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ.

ಘಟನೆ ವಿವರ

ಇದೇ ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು. ಉಳಿದವರಿಗೆ ಸುಟ್ಟ ಗಾಯಗಳಾಗಿ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ನೆಡೆಯುತ್ತಿತ್ತು.6 ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಗುಜರಾತ್ ಮೂಲದ ಒಂದೇ ಕುಟುಂಬದ ಸುನೀತ್(42), ನಮನ್(20), ಮಯಾಂಕ್(19) ಸಾವನ್ನಪ್ಪಿದ್ದಾರೆ. ಮೃತ ದೇಹಗಳ ಮುಂದೆ ಸಂಬಂಧಿಕರ ಗೋಳಾಟ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಜೆಸಿ ಮಾಧುಸ್ವಾಮಿ ಪಯಣಿಸುತ್ತಿದ್ದ ಕಾರು ಕಡೂರು ಬಳಿ ಅಪಘಾತ, ಗಾಯಗಳಿಲ್ಲದೆ ಮಾಜಿ ಸಚಿವ ಪಾರು

ಇನ್ನು ಡಿಕ್ಕಿಯಾದ ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿದಂತೆ ನಾಲ್ವರಿಗೂ ಗಂಭೀರ ಗಾಯಗಳೊಂದಿಗೆ ಅಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತದೆ. ಅಪಘಾತಕ್ಕೆ ಕಾರಣವಾದ ಬಲೇನೊ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆ ಗೂಗಲ್​ನಲ್ಲಿ ಸರ್ಚ್ ಪಡೆದು ಪೇಕ್ ನಂಬರ್‌ ಹಾಕಿದ್ದ ಎನ್ನಲಾಗಿದೆ. ಜೊತೆಗೆ ಇದರ ಅಸಲಿ ಕಾರಿನ ಕಾರ್ ನಂಬರ್‌ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದ್ದು, ಹೀಗಾಗಿ ಡಿವೈಎಸ್ಪಿ ಜಗದೀಶ್​ ನೇತೃತ್ವದಲ್ಲಿ ತನಿಖೆ ಚುರಕುಗೊಂಡಿದೆ. ಈ ಕುರಿತು ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Sun, 28 April 24

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us