AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಐಎಡಿಬಿಯಿಂದ ಪರಿಹಾರ ನೀಡದೆ ಕಿರುಕುಳ ಆರೋಪ; ವಿಷ ಕುಡಿದು ರೈತ ಆತ್ಮಹತ್ಯೆಗೆ ಯತ್ನ

ಅದು ಕೆಂಪೇಗೌಡ ಏರ್ಪೊಟ್​ಗೆ ಸಮೀಪದಲ್ಲಿರುವ ಗ್ರಾಮ. ಹೀಗಾಗೆ ಆ ಗ್ರಾಮದ ಜಮೀನನ್ನ ಕೈಗಾರಿಕಾ ಪ್ರದೇಶವಾಗಿ ಮಾಡಿದ್ದು, ಆ್ಯಪಲ್​ನ ಪಾಕ್ಸ್ ಕಾನ್ ಕಂಪನಿ ಕಾಮಗಾರಿ ಸಹ ಆರಂಭಿಸಿದೆ. ಆದ್ರೆ, ಇದೇ ಕಾಮಗಾರಿ ಇದೀಗ ಸ್ಥಳೀಯ ರೈತರ ಮತ್ತು ಕೆಐಎಡಿಬಿ ಅಧಿಕಾರಿಗಳ ನಡುವೆ ಕಿತ್ತಾಟಕ್ಕೆ ಕಾರಣವಾಗಿದ್ದು, ವಿಷದ ಬಾಟಲ್ ಹಿಡಿದು ಹೈಡ್ರಾಮವೇ ನಡೆದು ಹೋಗಿದೆ.

ಕೆಐಎಡಿಬಿಯಿಂದ ಪರಿಹಾರ ನೀಡದೆ ಕಿರುಕುಳ ಆರೋಪ; ವಿಷ ಕುಡಿದು ರೈತ ಆತ್ಮಹತ್ಯೆಗೆ ಯತ್ನ
ದೇವನಹಳ್ಳಿ
ನವೀನ್ ಕುಮಾರ್ ಟಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: May 03, 2024 | 5:40 PM

Share

ಬೆಂಗಳೂರು ಗ್ರಾಮಾಂತರ, ಮೇ.03: ಜಿಲ್ಲೆಯ ದೇವನಹಳ್ಳಿ(Devanahalli) ತಾಲೂಕಿನ ಚೆನ್ನರಾಯಪಟ್ಟಣ ಹಾಗೂ ಕುಂದಾಣ ಹೋಬಳಿಯಲ್ಲಿ ಕೆಐಎಡಿಬಿ(KIADB) ಎರಡನೆ ಹಂತದ ಭೂಸ್ವಾಧಿನ ಮಾಡುತ್ತಿದೆ. ಜೊತೆಗೆ ಈಗಾಗಲೇ ಕುಂದಾಣ ಹೋಬಳಿಯ ದೊಡ್ಡಗೊಲ್ಲಹಳ್ಳಿ ಬಳಿ ಕೈಗಾರಿಕಾ ಪ್ರದೇಶಕ್ಕೆ ರಸ್ತೆಗಳನ್ನ ನಿರ್ಮಾಣ ಮಾಡಿದ್ದು, ಆ್ಯಪಲ್​ನ ಪಾಕ್ಸ್ ಕಾನ್ ಸೇರಿದಂತೆ ಹಲವು ಅಂತರಾಷ್ಟ್ರಿಯ ಬೃಹತ್ ಕಂಪನಿಗಳ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಆದ್ರೆ, ಈ ನಡುವೆ ಕಂಪನಿಗೆ ರೈತರ ಜಮೀನು ಕೊಡಿಸಿರುವ ಕೆಐಎಡಿಬಿ ಅಧಿಕಾರಿಗಳು ಪಾಕ್ಸ್ ಕಾನ್ ಕಂಪನಿಗೆ 30 ಎಕರೆ ಜಮೀನು ನೀಡಿರುವ ಶ್ರೀನಿವಾಸ್ ಎಂಬುವವರಿಗೆ ಪರಿಹಾರ ನೀಡಿಲ್ಲವಂತೆ.ಹೀಗಾಗಿ ಹಲವು ಭಾರಿ ಪರಿಹಾರದ ಹಣಕ್ಕಾಗಿ ಕೆಐಎಡಿಬಿ ಮೆಟ್ಟಿಲೇರಿದರೂ ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.

ಜೊತೆಗೆ ಪರಿಹಾರದ ಹಣ ನೀಡದೆ ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿದ್ದಾರೆ. ಈ ಹಿನ್ನಲೆ ನಾವು ಯಾವುದೇ ಕಾರಣಕ್ಕೂ ಭೂಮಿ ಕೊಡಲ್ಲ ಎಂದು ರೈತರು ಜಮೀನಿನಲ್ಲೆ ಪೆಂಡಲ್ ಹಾಕಿಕೊಂಡು ಧರಣಿ ನಡೆಸುತ್ತಿದ್ದಾರೆ. ಅಲ್ಲದೆ ಧರಣಿ ನಿರತ ರೈತರನ್ನ ಪೊಲೀಸರು ಹೊರ ಕಳಿಸಲು ಮುಂದಾಗುತ್ತಿದ್ದಂತೆ, ರೈತರು ವಿಷದ ಬಾಟಲ್ ಹಿಡಿದು ಆತ್ಮಹತ್ಯೆಗೆ ಯತ್ನ ಮಾಡಿದ್ದು, ಕೂಡಲೇ ಅಲರ್ಟ್ ಆದ ಪೊಲೀಸರು ಬಾಟಲ್ ಕಿತ್ತುಕೊಂಡಿದ್ದಾರೆ.

ಇದನ್ನೂ ಓದಿ:ರಾಜಧಾನಿ ಮಗ್ಗುಲಲ್ಲಿ ಬೆಳೆ ಬೆಳೆಯುತ್ತಿದ್ದರೂ 600 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವ ಕೆಐಎಡಿಬಿ! ರೈತರ ಆಕ್ರೋಶ

ಧರಣಿ ನಿರತ ರೈತ ಶ್ರೀನಿವಾಸ್ ಕುಟುಂಬದಲ್ಲಿ ಮೂವತ್ತು ಜನರಿದ್ದು, ಪಿತ್ರಾರ್ಜಿತ ಆಸ್ತಿಯಾಗಿ 27 ಎಕರೆ ಬಂದಿದ್ದರೆ, ಮೂರು ಎಕರೆ ಜಮೀನನ್ನ ಶ್ರೀನಿವಾಸ್ ಅವರು ಹಣ ನೀಡಿ ಸ್ವಯಾರ್ಜಿತವಾಗಿ ಕೊಂಡು ಕೊಂಡಿದ್ದರಂತೆ. ಹೀಗಾಗಿ ಪಿತಾರ್ಜಿತ ಹಾಗೂ ಸ್ವಯಾರ್ಜಿತ ಎರಡು ಆಸ್ತಿಗಳು ಕೆಐಎಡಿಬಿಗೆ ಹೋಗಿದ್ದು, ಪಿತ್ರಾರ್ಜಿತ 27 ಎಕರೆ ಜಮೀನು ವಿಚಾರ ಅಣ್ಣ-ತಮ್ಮಂದಿರ ಜಗಳದಿಂದ ಕೋರ್ಟ್ ಮೆಟ್ಟಿಲೇರಿದ್ದಾರೆ. ಕಷ್ಟಾಪಟ್ಟು ದುಡಿದು ತೆಗೆದುಕೊಂಡ ಮೂರ ಎಕರೆ ಜಮೀನಿಗಾದರೂ ಪರಿಹಾರ ಕೊಡಿ ಎಂದು ಶ್ರೀನಿವಾಸ್ ಕೇಳುತ್ತಿದ್ದಾರೆ. ಆದ್ರೆ, ಯಾವುದಕ್ಕೂ ಪರಿಹಾರ ನೀಡದೆ ಅಧಿಕಾರಿಗಳು ವಂಚಿಸುತ್ತಿದ್ದು, ಹಣ ಜಮೀನು ಇಲ್ಲದೆ ನಾವೆಲ್ಲಿಗೆ ಹೋಗಬೇಕು ಎಂದು ಶ್ರೀನಿವಾಸ್ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಈ ಬಗ್ಗೆ ಸ್ಥಳಕ್ಕೆ ಬಂದಿದ್ದ ಕೆಐಎಡಿಬಿ ಭೂ ಸ್ವಾಧೀನ ಅಧಿಕಾರಿ ಬಾಳಪ್ಪ ಅವರು ಮಾತನಾಡಿ, ‘ಈಗಾಗಲೇ ಪಾಕ್ಸ್ ಕಾನ್ ಕಂಪನಿಗೆ ಭೂಮಿ ನೀಡಿದ್ದು, ರೈತರ ಪರಿಹಾರ ಹಣ ಕೋರ್ಟ್​ನಲ್ಲಿ ಕಟ್ಟಿದ್ದೇವೆ. ವ್ಯಾಜ್ಯ ಮುಗಿದ ನಂತರ ಅವರ ಪಾಲು ಅವರು ತೆಗೆದುಕೊಳ್ಳಲಿ ಇದೀಗ ಭೂಮಿ ಬಿಟ್ಟುಕೊಡಬೇಕು ಅಂತಿದ್ದಾರೆ. ಒಟ್ಟಾರೆ ಕೆಐಎಡಿಬಿಗೆ ಇದ್ದ ಜಮೀನು ಕಳೆದುಕೊಂಡು ರೈತರು ಇತ್ತ ಪರಿಹಾರವು ಇಲ್ಲದೆ, ಜಮೀನು ಇಲ್ಲದೆ ಪರದಾಡುತ್ತಿದ್ದು, ಅಧಿಕಾರಿಗಳ ವಿರುದ್ದ ಹಿಡಿ ಶಾಪ ಹಾಕುತ್ತಿದ್ದಾರೆ. ಇನ್ನಾದರೂ ಈ ಬಗ್ಗೆ ಕೆಐಎಡಿಬಿ ಅಧಿಕಾರಿಗಳು ಪರಿಶೀಲಿಸಿ ರೈತರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?