AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಅಭಿನಯದ ವೇಳೆ ವೇದಿಕೆ ಮೇಲೆ‌ ಕುಸಿದು ಬಿದ್ದು ಕಲಾವಿದ ಸಾವು

ಆ ಕಲಾವಿದ ನೂರಾರು ನಾಟಕಗಳಲ್ಲಿ ಅಭಿನಯಿಸಿ ಒಳ್ಳೆಯ ಹೆಸರು ಮಾಡಿದ್ದ. ನೂರಾರು ಜನ ಕಲಾವಿದರಿಗೆ ಅಭಿನಯ ಪಾತ್ರದಲ್ಲಿ ತಮ್ಮನ್ನ ತಾವು ಹೇಗೆ ತೋಡಗಿಸಿಕೊಳ್ಳಬೇಕು ಎಂದು ಹೇಳಿಕೊಟ್ಟಿದ್ದ. ಇಂತಹ ಕಲಾವಿದನಿಗೆ ನಟನೆ ಮಾಡುತ್ತಿರುವಾಗಲೇ ಸಾವು ಬಂದಿದೆ. ಅಭಿನಯ ಮಾಡುತ್ತಿದ್ದ ವೇಳೆ ಕಲಾವಿದ ಸಾವನ್ನಪ್ಪಿದ್ದಾನೆ. ಯಾರಿ ಕಲಾವಿದ, ಆತ ಸಾವನ್ನಪ್ಪಿದ್ದಾದರೂ ಹೇಗೆ ಅಂತೀರಾ? ಈ ಸ್ಟೋರಿ ಓದಿ.

ಬೆಂಗಳೂರು: ಅಭಿನಯದ ವೇಳೆ ವೇದಿಕೆ ಮೇಲೆ‌ ಕುಸಿದು ಬಿದ್ದು ಕಲಾವಿದ ಸಾವು
ಎನ್ ಮುನಿಕೆಂಪಣ್ಣ
ನವೀನ್ ಕುಮಾರ್ ಟಿ
| Edited By: |

Updated on:May 05, 2024 | 2:39 PM

Share

ಬೆಂಗಳೂರು, ಮೇ.05: ಯಲಹಂಕ ತಾಲೂಕಿನ ಸಾತನೂರು ಗ್ರಾಮದಲ್ಲಿ ಅಭಿನಯದ ವೇಳೆ ವೇದಿಕೆ ಮೇಲೆ‌ಯೇ ಕುಸಿದು ಬಿದ್ದು ಕಲಾವಿದನೊಬ್ಬ ಸಾವನ್ನಪ್ಪಿದ ಘಟನೆ ನಿನ್ನೆ(ಮೇ.04) ನಡೆದಿದೆ. ಅಂದಹಾಗೆ ಯಲಹಂಕದ ಸುರಭಿ ಲೇಔಟ್​ನ ನಿವಾಸಿ ಒಳ್ಳೆಯ ಹೆಸರು ಮಾಡಿರುವ ಕಲಾವಿದ ಎನ್ ಮುನಿಕೆಂಪಣ್ಣ((N. Munikempanna). ಮುನಿಕೆಂಪಣ್ಣ ಸಾತನೂರು ಗ್ರಾಮದಲ್ಲಿ ಕುರುಕ್ಷೇತ್ರ ನಾಟಕದಲ್ಲಿ ಶಕುನಿ ಪಾತ್ರವನ್ನ ನಿರ್ವಹಿಸಿದ್ದು, ಅದ್ಬುತವಾಗಿ ಶಕುನಿಪಾತ್ರವನ್ನ ಮಾಡುತ್ತಾ ಎಲ್ಲರ ಗಮನ ಸೆಳೆದಿದ್ದರು. ಆದ್ರೆ, ವಿಧಿ ಹಿರಿಯ ಕಲಾವಿದ ಮುನಿಕೆಂಪಣ್ಣ ಜೊತೆ ಆಟವಾಡಿಬಿಟ್ಟಿದೆ.

ನೂರಾರು ನಾಟಕಗಳಲ್ಲಿ ಅಭಿನಯಿಸಿ ದೇವನಹಳ್ಳಿ ಸೇರಿದಂತೆ ಯಲಹಂಕ ಹಾಗೂ ರಾಜ್ಯದ ನಾನಾ ಭಾಗದಲ್ಲಿ ಮುನಿಕೆಂಪಣ್ಣ ತನ್ನದೆಯಾದ ಹೆಸರು ಮಾಡಿಕೊಂಡಿದ್ದರು. ಜೊತೆಗೆ ದೇವನಹಳ್ಳಿಯಲ್ಲಿ ಇತ್ತೀಚೆಗೆ 28 ನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಹ ಆಗಿದ್ದರು. ಇದೀಗ ಇದೇ ಕುರುಕ್ಷೇತ್ರ ನಾಟಕ ನನ್ನ ಕೊನೆಯದ್ದು, ಇದನ್ನ ವಿಡಿಯೋ ಮಾಡಿ ಯೂ ಟ್ಯೂಬ್​ನಲ್ಲಿ ಹಾಕಿ ಎಂದು ತನ್ನ ಶಿಷ್ಯಂದರಿಗೆ ಹೇಳಿಕೊಂಡು ಬಂದಿದ್ದರಂತೆ. ಈ ಮಧ್ಯೆ ನಾಟಕದಲ್ಲಿ ಅಭಿನಯ ಮಾಡುತ್ತಿದ್ದ ವೇಳೆಯೆ ಕುಸಿದು ಬಿದ್ದು ಕಲಾವಿದ ಮುನಿಕೆಂಪಣ್ಣ ಹೃದಾಯಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಹಾವು ಕಚ್ಚಿ ಯುವಕ ಸಾವು,  ಬದುಕಬಹುದು ಎಂದು ಶವವನ್ನು ಗಂಗಾ ನದಿಗೆ ಮುಳುಗಿಸಿದ ಕುಟುಂಬ 

ಇನ್ನು ಈ ಹಿರಿಯ ಕಲಾವಿದ ಸಾವಿಗೆ ನೂರಾರು ಕಲಾವಿದರು ದುಖಃದಲ್ಲಿ ಮುಳುಗಿದ್ದಾರೆ. ಮೃತ ಮುನಿಕೆಂಪಣ್ಣ ಮರಣೋತ್ತರ ಪರೀಕ್ಷೆಯನ್ನ ಯಲಹಂಕದಲ್ಲಿ ಮಾಡಲಾಗಿದ್ದು, ತಮ್ಮ ಹುಟ್ಟೂರು ಅರದೇಶನಹಳ್ಳಿಯಲ್ಲಿ ಅಂತ್ಯಕ್ರಿಯೆ ನೇರವೇರಿಸಲಾಗಿದೆ. ಒಟ್ಟಾರೆ ಉಪನ್ಯಾಸಕರಾಗಿ ಹಿರಿಯ ಕಲಾವಿದರಾಗಿದ್ದ ಮೃತ ಮುನಿಕೆಂಪಣ್ಣ, ನೂರಾರು ಜನರಿಗೆ ತನ್ನದೆಯಾದ ಕಲೆಯನ್ನ ಧಾರೆ ಎರೆದು ಹೆಸರು ಮಾಡಿದ್ದಾರೆ. ಕಲೆಯ ತನ್ನ ಸ್ವತ್ತು, ಕಲೆಯಿಂದ ಎಲ್ಲರನ್ನ ಮೇಲೆತ್ತುವ ಸಮಾಜಮುಖಿ ಕೆಲಸ ಮಾಡಿಕೊಂಡು ಬಂದ ಮುನಿಕೆಂಪಣ್ಣ ಅಭಿನಯ ಮಾಡುವಾಗಲೇ ಜೀವವನ್ನ ತೊರೆದಿದ್ದು ನಿಜಕ್ಕೂ ದುರಂತ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:35 pm, Sun, 5 May 24

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!