Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಶ್ರೀರಾಮ ನವಮಿ ದಿನ ರಾಮನ ಜಪದೊಂದಿಗೆ ಮಳೆಗಾಗಿ ವಿಶೇಷ ಪೂಜೆ

ನಾಡಿನಾದ್ಯಂತ ಶ್ರೀರಾಮ ಹುಟ್ಟಿದ ದಿನವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ರಾಜ್ಯಾದ್ಯಂತ ಎಲ್ಲಾ ಶ್ರೀರಾಮನ ಹಾಗೂ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಅದೇ ರೀತಿ ಇಲ್ಲೊಂದೆಡೆ ಶ್ರೀರಾಮನವಮಿ ಜೊತೆಗೆ ಮಳೆಗಾಗಿ ವರುಣ ದೇವರಿಗೆ ಸಂಕಲ್ಪ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗಿದೆ. ಅಷ್ಟಕ್ಕೂ ಆ ದೇವಾಲಯ ಯಾವುದು? ಅಲ್ಲಿ ನಡೆದ ವಿಶೇಷ ಪೂಜೆಯ ಬಗ್ಗೆ ಈ ಸ್ಟೋರಿ ಓದಿ.

ಬೆಂಗಳೂರು: ಶ್ರೀರಾಮ ನವಮಿ ದಿನ ರಾಮನ ಜಪದೊಂದಿಗೆ ಮಳೆಗಾಗಿ ವಿಶೇಷ ಪೂಜೆ
ಶ್ರೀರಾಮ ನವಮಿ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 17, 2024 | 6:03 PM

ಬೆಂಗಳೂರು, ಏ.17: ಶ್ರೀ ರಾಮ ನವಮಿ(Rama Navami) ಅಂಗವಾಗಿ ನಾಡಿನಾದ್ಯಂತ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಅದರಂತೆಯೇ ಬೆಂಗಳೂರು(Bengaluru) ಹೊರವಲಯದ ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆಯ ಪವಮಾನ ಲೇಔಟ್ ನಲ್ಲಿ ಇರುವ ಶ್ರೀ ಬಯಲು ದಕ್ಷಿಣ ಮುಖ ಆಂಜನೇಯ ಸ್ವಾಮಿ ದೇವಾಲಯದಲ್ಲೂ ಆದ್ದೂರಿಯಾಗಿ ಶ್ರೀ ರಾಮೋತ್ಸವವನ್ನ ಆಚರಿಸಲಾಯಿತು. ನೂರಾರು ವರ್ಷಗಳ ಇತಿಹಾಸವಿರುವ ಆಂಜನೇಯಸ್ವಾಮಿ ದೇವಾಲಯದಲ್ಲಿ ಶ್ರೀರಾಮ ನವಮಿಯ ಅಂಗವಾಗಿ ವಿಶೇಷ ಪೂಜೆ ಜೊತೆಗೆ ಮಳೆಗಾಗಿ ವರುಣ ದೇವರಿಗೆ ಸಂಕಲ್ಪ ಹಾಗೂ ವಿಶೇಷ ಪೂಜೆಯನ್ನ ಅರ್ಚಕರು ನೆರವೇರಿಸಿದ್ದು, ವಿಶೇಷವಾಗಿತ್ತು.

ರಾಜ್ಯಾದ್ಯಂತ ಮಳೆ ಇಲ್ಲದೆ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಶ್ರೀರಾಮನ ಜಪದೊಂದಿಗೆ ಮಳೆಗಾಗಿ ವರುಣ ದೇವರ ಕೃಪೆಗಾಗಿ ದೇವಾಲಯದಲ್ಲಿ ಹೋಮ, ಸಂಕಲ್ಪ ಹಾಗೂ ಪೂಜೆಯನ್ನ ನೇರವೇರಿಸಲಾಯಿತು. ಜೊತೆಗೆ ಶ್ರೀರಾಮನವಮಿ ಪ್ರಯುಕ್ತ ದೇವಾಲಯದಲ್ಲಿ ಹಣ್ಣು-ಹಂಪಲು, ಹೂಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು. ಶ್ರೀ ಆಂಜನೇಯ ಸ್ವಾಮಿಗೆ ತುಳಸಿ ಮತ್ತು ಮಣಿಗಳ ಮೂಲಕ ದೇವರಿಗೆ ವಿಶೇಷವಾಗಿ ಅಲಂಕರಿಸಿ, ಲೋಕಕಲ್ಯಾಣಕ್ಕಾಗಿ ದೇವಾಲಯದಲ್ಲಿ ಕಲ್ಯಾಣೋತ್ಸವ, ಶ್ರೀರಾಮ ಭಜನೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ:ಪೆನ್ಸಿಲ್‌ನ ತುದಿಯಲ್ಲಿ ರಾಮನ ಕಲಾಕೃತಿ ಕೆತ್ತಿ ಶ್ರೀರಾಮ ನವಮಿಯ ಶುಭಾಶಯ ಕೋರಿದ ಕಲಾವಿದ

ಶ್ರೀರಾಮ ನವಮಿ ಹಿನ್ನೆಲೆ ಬನ್ನೇರುಘಟ್ಟ, ಗೊಟ್ಟಿಗೆರೆ, ಹುಳಿಮಾವು ಸೇರಿದಂತೆ ಬೆಂಗಳೂರಿನ ನಾನಾ ಭಾಗಗಳಿಂದ ಭಕ್ತರು ಆಗಮಿಸಿದ್ದರು. ದೇವಾಲಯಕ್ಕೆ ಬಂದ ಭಕ್ತರಿಗೆ ಪಾನಕ, ಕೋಸಂಬರಿ, ಮಜ್ಜಿಗೆ ವಿತರಿಸಿದ್ದು, ಎಂಟರಿಂದ ಹತ್ತು ಸಾವಿರ ಭಕ್ತರಿಗೆ ಅನ್ನ ಪ್ರಸಾದ ವಿನಿಯೋಗ ಮಾಡಲಾಯಿತು.

ಶ್ರೀರಾಮನವಮಿ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ದೇವಾಲಯಗಳಲ್ಲಿ ಶ್ರೀ ರಾಮನ ಭಜನೆ ಮೊಳಗುತ್ತಿದ್ದು, ಅಪಾರ ಸಂಖ್ಯೆಯ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಶ್ರೀರಾಮನ ಜಪ ಮಾಡುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
ಬಾಂಬೆ ಹೈಕೋರ್ಟ್​ ಆವರಣದಲ್ಲಿ ವಾಮಾಚಾರ?
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​