AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ವಿದೇಶಿ ಡ್ರಗ್​ ಪೆಡ್ಲರ್ ಬಂಧನ; 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ

ರಾಜ್ಯ ರಾಜಧಾನಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಕಳೆದ ಜನವರಿಯಲ್ಲಿ 7 ಜನ ಡ್ರಗ್​ ಪೆಡ್ಲರ್​ಗಳನ್ನು ಬಂಧಿಸಲಾಗಿತ್ತು. ಇದೀಗ ನೈಜಿರಿಯಾ ಮೂಲದ ವ್ಯಕ್ತಿಯೋರ್ವನನ್ನು ಬಂಧಿಸಿ, ಆತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್​ನ್ನು ಜಪ್ತಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ವಿದೇಶಿ ಡ್ರಗ್​ ಪೆಡ್ಲರ್ ಬಂಧನ; 4 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ
ವಿದೇಶಿ ಡ್ರಗ್​ ಪೆಡ್ಲರ್​ ಬಂಧನ
ಬಿ ಮೂರ್ತಿ, ನೆಲಮಂಗಲ
| Edited By: |

Updated on:Apr 19, 2024 | 3:10 PM

Share

ಬೆಂಗಳೂರು, ಏ.19: ಬೆಂಗಳೂರಿನ ಶೆಟ್ಟಿಹಳ್ಳಿಯಲ್ಲಿ ಸಿಸಿಬಿ ಪೊಲೀಸರು(CCB Police) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶಿ ಡ್ರಗ್​ ಪೆಡ್ಲರ್​ನ್ನು ಬಂಧಿಸಿದ್ದಾರೆ. ನೈಜಿರಿಯಾ ಮೂಲದ ಅಕ್ರಮ ವಾಸಿ ಹೆನ್ರಿ ಚುಕ್ವುಮೆಕಾ ಎಂಬಾತ ಬಂಧಿತ ಆರೋಪಿ. ಇತನಿಂದ ಬರೊಬ್ಬರಿ 4 ಕೋಟಿ ಮೌಲ್ಯದ 4ಕೆಜಿ NDMA ಕ್ರಿಸ್ಟಲ್​ನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ ಪಿಎಸ್ಐ ಕೇಶವಮೂರ್ತಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ಆರೋಪಿ ಪ್ರತಿಷ್ಟಿತ ಕಾಲೇಜ್​ ಹಾಗೂ ಐಟಿಬಿಟಿ ಸಿಬ್ಬಂದಿಗಳಿಗೆ ಹೆಚ್ಚಿನ ಹಣಕ್ಕೆ ಡ್ರಗ್​ ಮಾರುತ್ತಿದ್ದ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಸರಗಳ್ಳತನ ಮಾಡ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಸರಗಳ್ಳತನ ಮತ್ತು ಮನೆಗಳ್ಳತನ ಮಾಡುತ್ತಿದ್ದ ಆರು ಮಂದಿಯನ್ನ ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ.  ಅಕಾಶ್, ನಾಗೇಶ್, ಪ್ರಸನ್ನ, ಪುನೀತ್, ಶಿವಲಿಂಗ ಮತ್ತು ಪ್ರತಾಪ್​ ಬಂಧಿತರು. ಇವರಿಂದ 10.82 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದು, ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಬೆಂಗಳೂರು: ಏಳು ಜನ ಡ್ರಗ್​​​​​ ಪೆಡ್ಲರ್​​ಗಳನ್ನ ಬಂಧಿಸಿದ ಸಿಸಿಬಿ ಪೊಲೀಸರು

ರಾತ್ರಿ ವೇಳೆ ಸ್ಪೀಡ್‌ ಬ್ರೇಕರ್‌ ಕಾಣದೆ ಆಟೋ ಪಲ್ಟಿ, ಹಲವರಿಗೆ ಗಾಯ

ಚಿತ್ರದುರ್ಗ: ರಾತ್ರಿ ವೇಳೆ ಸ್ಪೀಡ್​​ ಬ್ರೇಕರ್​ ಕಾಣದೇ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಹಲವರಿಗೆ ಗಾಯವಾದ ಘಟನೆ ಚಿತ್ರದುರ್ಗ‌ದ ಕಣಿವೆ ಆಂಜನೇಯ ದೇಗುಲ‌ ಬಳಿ‌ ನಡೆದಿದೆ. ಹೆದ್ದಾರಿಯಲ್ಲಿ ಅವೈಜ್ಞಾನಿಕ ದಿಢೀರ್ ಸ್ಪೀಡ್ ಬ್ರೇಕರ್ ಅಳವಡಿಸಿದ್ದಾರೆ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ಈ ಕುರಿತು ಚಿತ್ರದುರ್ಗ ಸಂಚಾರಿ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:58 pm, Fri, 19 April 24

Follow Us
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More